ಬ್ರೇಕಿಂಗ್ ನ್ಯೂಸ್
01-12-20 05:16 pm Mangalore Correspondent ಕರಾವಳಿ
ಮಂಗಳೂರು, ಡಿ.1: ಆಯುಷ್ ಇಲಾಖೆಯ ‘ಸೃಷ್ಟಿ ಕ್ರಿಯೆ’ಯ ಯೋಜನೆ ಫಲ ನೀಡಿದೆ. ಮದುವೆಯಾಗಿ 9 ವರ್ಷಗಳಾದರೂ ಮಕ್ಕಳಾಗದೆ ಬೇಸತ್ತಿದ್ದ ಮಹಿಳೆ ಗರ್ಭಿಣಿಯಾಗಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾರೆ.
ಹಾಸನ ಜಿಲ್ಲೆಯ ತರೀಕೆರೆ ಮೂಲದ ರಮೇಶ್ – ಶಶಿಕಲಾ ದಂಪತಿಗೆ ಮದುವೆಯಾಗಿ 9 ವರ್ಷಗಳಾದರೂ ಮಗು ಆಗಿರಲಿಲ್ಲ. ಅಲೋಪತಿ ಮತ್ತು ಆಯುರ್ವೇದ ಪ್ರಕಾರ ಹಲವೆಡೆ ಔಷಧಿಯನ್ನೂ ಮಾಡಿದ್ದರು. ಕಳೆದ ಬಾರಿಯ 2019ರ ಡಿಸೆಂಬರ್ ತಿಂಗಳಲ್ಲಿ ದಂಪತಿ ಆಯುಷ್ ಇಲಾಖೆಯಡಿ ಆರಂಭಗೊಂಡ ಸೃಷ್ಟಿ ಯೋಜನೆಯ ವಿಚಾರ ತಿಳಿದು ಪರೀಕ್ಷೆಗೆ ಬಂದಿದ್ದರು. ಅದರಂತೆ, ದಂಪತಿ ಅಲೋಪತಿ ಮತ್ತು ಆಯುರ್ವೇದ ಔಷಧ ನಿಲ್ಲಿಸಿ, ಹೋಮಿಯೋಪತಿ ಔಷಧಿ ಆರಂಭಿಸಿದ್ದರು.
ಎರಡೇ ತಿಂಗಳಲ್ಲಿ ಶಶಿಕಲಾ ಸಹಜ ಎನ್ನುವಂತೆ ಗರ್ಭ ಧರಿಸಿದ್ದರು. ಫೆಬ್ರವರಿಯಲ್ಲಿ ಗರ್ಭಿಣಿಯಾಗಿದ್ದ ಮಹಿಳೆ ಇದೀಗ ನವೆಂಬರ್ 28ರಂದು ಮಗುವಿಗೆ ಜನ್ಮ ನೀಡಿದ್ದಾರೆ. ಮಗು 3.3 ಕೆಜಿ ಭಾರ ಹೊಂದಿದ್ದು ಆರೋಗ್ಯವಾಗಿದೆ ಎಂದು ಚಿಕಿತ್ಸೆ ನೀಡಿರುವ ಯೇನಪೋಯ ಆಸ್ಪತ್ರೆಯ ಹೋಮಿಯೋಪತಿ ವಿಭಾಗದ ವೈದ್ಯ ಡಾ.ಕಿರಣ್ ಶಶಿಕಾಂತ್ ಹೇಳಿದ್ದಾರೆ. ಆಯುಷ್ ಸಂಯೋಜನೆಯಡಿ ಆರಂಭಗೊಂಡ ಸೃಷ್ಟಿ ಯೋಜನೆಯಲ್ಲಿ ಮಗುವಾಗಿದ್ದು ರಾಜ್ಯದಲ್ಲಿ ಇದೇ ಮೊದಲು.

ಜಿಲ್ಲಾ ಆಯುಷ್ ಇಲಾಖೆಯಡಿ ಯೇನಪೋಯ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಸೃಷ್ಟಿ ಯೋಜನೆ ಆರಂಭಿಸಲಾಗಿತ್ತು. ಮಕ್ಕಳಾಗದವರಿಗೆ ನವೀನ ತೆರನಾದ ಚಿಕಿತ್ಸೆ ನೀಡುವ ಮೂಲಕ ಗರ್ಭಿಣಿಯಾಗಿಸುವ ಯೋಜನೆಗೆ 2019ರ ಆಗಸ್ಟ್ 29ರಂದು ಆಯುಷ್ ಇಲಾಖೆ ಸಚಿವ ಶ್ರೀಪಾದ್ ನಾಯ್ಕ್ ಚಾಲನೆ ನೀಡಿದ್ದರು.
ಸೃಷ್ಟಿ ಹೋಮಿಯೋಪತಿಕ್ ಫರ್ಟಿಲಿಟಿ ಕೇರ್ ಸೆಂಟರ್ ಎನ್ನುವ ವಿಭಾಗವನ್ನು ಆಯುಷ್ ಇಲಾಖೆಯಡಿ ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭಿಸಲಾಗಿದ್ದು 42 ಮಂದಿ ಮಕ್ಕಳಾಗದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳಾಗದೆ ನೋವು ಅನುಭವಿಸುವ ದಂಪತಿಗೆ ಇದೊಂದು ಆಶಾಕಿರಣ ಎಂದು ಆಯುಷ್ ವೈದ್ಯ ಡಾ.ಮೊಹಮ್ಮದ್ ಇಕ್ಬಾಲ್ ತಿಳಿಸಿದ್ದಾರೆ.
An experiment undertaken under ambitious 'Srishti' scheme introduced by the Ayush department of Dakshina Kannada district to help childless couples to have children, has borne fruits perhaps for the first time in the state. A baby has been born out of homeopathy fertility treatment.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm