ಬ್ರೇಕಿಂಗ್ ನ್ಯೂಸ್
19-04-24 09:55 pm Mangalore Correspondent ಕರಾವಳಿ
ಮಂಗಳೂರು, ಎ.19: ರಸ್ತೆ ದಾಟುತ್ತಿದ್ದ ಯುವಕನೊಬ್ಬ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದು ಆತನ ಮೇಲೆ ಟ್ಯಾಂಕರ್ ಲಾರಿ ಹರಿದ ಘಟನೆ ನಗರದ ಕೊಟ್ಟಾರ ಚೌಕಿ ಬಳಿ ನಡೆದಿದ್ದು ಸ್ಥಳದಲ್ಲೇ ಯುವಕ ದಾರುಣ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಬಳಿಯ ಕೋಡಿಕಲ್ ಕ್ರಾಸ್ ನಲ್ಲಿ ಘಟನೆ ನಡೆದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಬ್ಲಾಕ್ ಆಗಿ ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದವು. ಯುವಕ ಸ್ಥಳದಲ್ಲೇ ಸಾವು ಕಂಡಿದ್ದರಿಂದ ಆತನ ಗುರುತು ಪತ್ತೆಯಾಗಿರಲಿಲ್ಲ. ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವಕನ ಕಿಸೆಯಲ್ಲಿ ಐಡಿ ಕಾರ್ಡ್ ಇದೆಯಾ ಎಂದು ಹುಡುಕಾಟ ನಡೆಸುತ್ತಿದ್ದರು. ಬಳಿಕ ಆತನ ಜೊತೆಗೆ ಕೆಲಸ ನಿರ್ವಹಿಸುತ್ತಿದ್ದವರು ಬಂದು ಗುರುತು ಹೇಳಿದ್ದಾರೆ.
ಕೋಡಿಕಲ್ ಕ್ರಾಸ್ ಆಗುವಲ್ಲಿ ಅತಿ ವೇಗದಿಂದ ಈ ಕಡೆಯಿಂದ ವಾಹನಗಳು ಸಾಗುವುದರಿಂದ ನಿರಂತರ ಅಪಘಾತಕ್ಕೆ ಕಾರಣವಾಗುತ್ತಿದೆ. ಅಸಮರ್ಪಕ ಹೆದ್ದಾರಿ ನಿರ್ಮಾಣವೂ ಇದಕ್ಕೆ ಕಾರಣ. ಯುವಕನಿಗೆ ಬೈಕ್ ತಾಗಿದ್ದರಿಂದ ಸವಾರನೂ ನೆಲಕ್ಕೆ ಬಿದ್ದು ಗಾಯಗೊಂಡಿದ್ದ. ಆದರೆ ಪಾದಚಾರಿ ಯುವಕನ ಮೇಲೆ ಹರಿದ ಟ್ಯಾಂಕರ್ ಲಾರಿ ಆತನ ಪ್ರಾಣ ಕಸಿದು ಬಿಟ್ಟಿದೆ. ಬೆಳಗ್ಗೆ ಆಗಿದ್ದರಿಂದ ಸ್ಥಳದಲ್ಲಿ ಪೊಲೀಸರೂ ಇಲ್ಲದೆ ಟ್ರಾಫಿಕ್ ಸರಿಪಡಿಸುವುದಕ್ಕೂ ಯಾರೂ ಇರಲಿಲ್ಲ. ಸ್ಥಳೀಯರೇ ಸೇರಿಕೊಂಡು ಟ್ರಾಫಿಕ್ ಸರಿಪಡಿಸಲು ಮುಂದಾಗಿದ್ದರು.
Mangalore accident worker from UP run over by tanker in Kulur. The deceased is identified as Guddu Yadav, 29, from Uttar Pradesh.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
11-08-25 08:55 pm
HK News Desk
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm