ಬ್ರೇಕಿಂಗ್ ನ್ಯೂಸ್
19-04-24 09:55 pm Mangalore Correspondent ಕರಾವಳಿ
ಮಂಗಳೂರು, ಎ.19: ರಸ್ತೆ ದಾಟುತ್ತಿದ್ದ ಯುವಕನೊಬ್ಬ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದು ಆತನ ಮೇಲೆ ಟ್ಯಾಂಕರ್ ಲಾರಿ ಹರಿದ ಘಟನೆ ನಗರದ ಕೊಟ್ಟಾರ ಚೌಕಿ ಬಳಿ ನಡೆದಿದ್ದು ಸ್ಥಳದಲ್ಲೇ ಯುವಕ ದಾರುಣ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಬಳಿಯ ಕೋಡಿಕಲ್ ಕ್ರಾಸ್ ನಲ್ಲಿ ಘಟನೆ ನಡೆದಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಬ್ಲಾಕ್ ಆಗಿ ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದವು. ಯುವಕ ಸ್ಥಳದಲ್ಲೇ ಸಾವು ಕಂಡಿದ್ದರಿಂದ ಆತನ ಗುರುತು ಪತ್ತೆಯಾಗಿರಲಿಲ್ಲ. ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವಕನ ಕಿಸೆಯಲ್ಲಿ ಐಡಿ ಕಾರ್ಡ್ ಇದೆಯಾ ಎಂದು ಹುಡುಕಾಟ ನಡೆಸುತ್ತಿದ್ದರು. ಬಳಿಕ ಆತನ ಜೊತೆಗೆ ಕೆಲಸ ನಿರ್ವಹಿಸುತ್ತಿದ್ದವರು ಬಂದು ಗುರುತು ಹೇಳಿದ್ದಾರೆ.
ಕೋಡಿಕಲ್ ಕ್ರಾಸ್ ಆಗುವಲ್ಲಿ ಅತಿ ವೇಗದಿಂದ ಈ ಕಡೆಯಿಂದ ವಾಹನಗಳು ಸಾಗುವುದರಿಂದ ನಿರಂತರ ಅಪಘಾತಕ್ಕೆ ಕಾರಣವಾಗುತ್ತಿದೆ. ಅಸಮರ್ಪಕ ಹೆದ್ದಾರಿ ನಿರ್ಮಾಣವೂ ಇದಕ್ಕೆ ಕಾರಣ. ಯುವಕನಿಗೆ ಬೈಕ್ ತಾಗಿದ್ದರಿಂದ ಸವಾರನೂ ನೆಲಕ್ಕೆ ಬಿದ್ದು ಗಾಯಗೊಂಡಿದ್ದ. ಆದರೆ ಪಾದಚಾರಿ ಯುವಕನ ಮೇಲೆ ಹರಿದ ಟ್ಯಾಂಕರ್ ಲಾರಿ ಆತನ ಪ್ರಾಣ ಕಸಿದು ಬಿಟ್ಟಿದೆ. ಬೆಳಗ್ಗೆ ಆಗಿದ್ದರಿಂದ ಸ್ಥಳದಲ್ಲಿ ಪೊಲೀಸರೂ ಇಲ್ಲದೆ ಟ್ರಾಫಿಕ್ ಸರಿಪಡಿಸುವುದಕ್ಕೂ ಯಾರೂ ಇರಲಿಲ್ಲ. ಸ್ಥಳೀಯರೇ ಸೇರಿಕೊಂಡು ಟ್ರಾಫಿಕ್ ಸರಿಪಡಿಸಲು ಮುಂದಾಗಿದ್ದರು.
Mangalore accident worker from UP run over by tanker in Kulur. The deceased is identified as Guddu Yadav, 29, from Uttar Pradesh.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm