ಬ್ರೇಕಿಂಗ್ ನ್ಯೂಸ್
20-04-24 12:12 pm Mangalore Correspondent ಕರಾವಳಿ
ಮಂಗಳೂರು, ಎ.20: ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಕಡೆ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಮಂಗಳೂರು ನಗರ ಭಾಗದಲ್ಲಿ ನಸುಕಿನ ನಾಲ್ಕರಿಂದ 5 ಗಂಟೆ ವೇಳೆಗೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆಯಾಗಿದೆ. ಭಾರೀ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ ಮಳೆಯಿಂದ ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.
ಸಿಡಿಲಿನ ಅಬ್ಬರಕ್ಕೆ ಮಂಗಳೂರಿನಲ್ಲಿ ವಿದ್ಯುತ್ ಕಡಿತಗೊಂಡಿತ್ತು. ಹವಾಮಾನ ಇಲಾಖೆ ಮಾಹಿತಿಯಂತೆ ಮುಂದಿನ ಮೂರು ದಿನ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸುಳ್ಯ ಕಲ್ಮಡ್ಕ ಗ್ರಾಮದ ಮುಚ್ಚಿಲ ಕಜೆ ಅಬ್ಬಾಸ್ ಎಂಬವರ ಮನೆಗೆ ಸಿಡಿಲು ಬಡಿದಿದ್ದು ಹಟ್ಟಿಯಲ್ಲಿದ್ದ ಕರು ಬಲಿಯಾಗಿದೆ. ಮನೆಯ ವಯರಿಂಗ್, ಸ್ವಿಚ್ ಬೋರ್ಡ್ ಗಳು ಸಂಪೂರ್ಣ ಸುಟ್ಟು ಹೋಗಿದೆ. ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ.




ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರಿನ ಬಹುತೇಕ ಭಾಗದಲ್ಲಿ ಸಿಡಿಲು ಸಹಿತ ಉತ್ತಮ ಮಳೆಯಾಗಿತ್ತು. ಬೆಳ್ತಂಗಡಿಯ ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಮಳೆಯಿಂದಾಗಿ ಕೆಸರು ರಸ್ತೆಯಲ್ಲೇ ಜನ ಪರದಾಡುವ ಸ್ಥಿತಿಯಾಗಿದೆ.
ಮಂಗಳೂರಿನಲ್ಲಿ ಹಂಪನಕಟ್ಟೆ ಬಳಿ ಭಾರಿ ಗಾತ್ರದ ಮರ ನೆಲಕ್ಕೆ ಉರುಳಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಜಖಂಗೊಂಡಿವೆ. ವಾಹನದಲ್ಲಿ ಯಾರೂ ಇಲ್ಲದೇ ಇರೋದರಿಂದ ಜನಸಾಮಾನ್ಯರಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ.
Various parts of Mangalore, Udupi receive first summer showers and heavy lightening. Residents of Dakshina Kannada and Udupi districts breathed a sigh of relief as substantial rainfall graced the region in the early hours of Saturday, April 20.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm