ಬ್ರೇಕಿಂಗ್ ನ್ಯೂಸ್
20-04-24 04:45 pm Mangalore Correspondent ಕರಾವಳಿ
ಬಂಟ್ವಾಳ, ಎ.20: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ, ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಬಿಲ್ಲವ ಸಮುದಾಯಕ್ಕೆ ಸೇರಿದ ಕವಿತಾ ಸನಿಲ್ ಬಿಜೆಪಿ ಸೇರಿದ್ದಾರೆ.
ಬಂಟ್ವಾಳದ ಬಿಸಿ ರೋಡ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕವಿತಾ ಸನಿಲ್ ಮತ್ತು ಬಂಟ್ವಾಳದ ತಾಲೂಕು ಪಂಚಾಯತ್ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಕವಿತಾ ಸನಿಲ್, ನನ್ನ ರಾಜಕೀಯ ಗುರು ಜನಾರ್ದನ ಪೂಜಾರಿ ಆಶೀರ್ವಾದ ಪಡೆದು ಇಲ್ಲಿ ಬಂದಿದ್ದೇನೆ. ಒಳ್ಳೆಯದಾಗೋದಿದ್ದರೆ ಹೋಗು ಅಂತ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಆಡಳಿತ ಇದೆ, ಏನೋ ಆಸೆ ಇಟ್ಟುಕೊಂಡು ಬಿಜೆಪಿ ಸೇರಿದ್ದೇನೆ ಅಂತ ಅಂದ್ಕೊಳ್ಳಬೇಡಿ. ಬಿಜೆಪಿಗೆ ಅಧಿಕಾರ ಇಲ್ಲ. ಪ್ರಧಾನಿ ಮೋದಿಯವರ ಆಡಳಿತ ನೋಡಿ ಬಿಜೆಪಿ ಸೇರುತ್ತಿದ್ದೇನೆ. ರಾಜ್ಯದಲ್ಲಿ ಏನಾಗುತ್ತಿದೆ ಅಂತ ನೋಡುತ್ತಿದ್ದೇವೆ.
ನಿನ್ನೆ ನೇಹಾ ಎಂಬ ವಿದ್ಯಾರ್ಥಿನಿಯನ್ನು ಹಾಡಹಗಲೇ ಕೊಲೆ ಮಾಡಿದ ಘಟನೆಯನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕ್ಷುಲ್ಲಕವಾಗಿ ಮಾತನಾಡಿದ್ದಾರೆ. ನಮ್ಮ ಜೀವಕ್ಕೆ ಬೆಲೆ ಇಲ್ಲವೇ ಎಂದು ಇವರಲ್ಲಿ ಕೇಳಬೇಕಾಗಿದೆ. ಕಳೆದ ಕೆಲವು ತಿಂಗಳಲ್ಲಿ ಕೊಲೆ ಸರಣಿಯೇ ಆಗಿಹೋಗಿದೆ. ಇದು ಇವರ ಆಡಳಿತ ಸ್ಥಿತಿ. ಅಯೋಧ್ಯೆಯಲ್ಲಿ ರಾಮ ಮಂದಿರ ಆಗಿರೋದು ನಮ್ಮೆಲ್ಲರ ಭಾಗ್ಯ. ಈ ಸಲದ ಚುನಾವಣೆ ಮೋದಿಗಾಗಿ ಕೊಡುವ ಮತ ಅಲ್ಲ. ರಾಮನಿಗಾಗಿ ಕೊಡುವ ಮತ. ಈ ಬಾರಿ ಅತಿ ಹೆಚ್ಚು ಮತಗಳಿಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ನಾವು ಗೆಲ್ಲಿಸಬೇಕಾಗಿದೆ ಎಂದರು.
Kavitha Sanil Ex Mayor of Mangalore joins BJP party in the presence of BJP state president Yediyurappa Vijayendra at Bantwal.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm