ಎ.23ರಂದು ದಕ್ಷಿಣ ಕನ್ನಡಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ; ಪುತ್ತೂರು, ಸುಳ್ಯ, ಬಂಟ್ವಾಳ, ವಿಟ್ಲದಲ್ಲಿ ರೋಡ್ ಶೋ

21-04-24 02:16 pm       Mangalore Correspondent   ಕರಾವಳಿ

ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ರೋಡ್ ಶೋ ನಡೆಸಲಿದ್ದಾರೆ.

ಮಂಗಳೂರು, ಎ.21: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. 

ಎಪ್ರಿಲ್ 23ರಂದು ಬೆಳಗ್ಗೆ 8.30ಕ್ಕೆ ಅಣ್ಣಾಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸುವರು. 10.30ಕ್ಕೆ ಪುತ್ತೂರಿಗೆ ಬರಲಿದ್ದು, ದರ್ಭೆ ವೃತ್ತದಿಂದ ಬಸ್ ನಿಲ್ದಾಣದ ವರೆಗೆ ರೋಡ್ ಶೋ ನಡೆಸುವರು. ಬಳಿಕ ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ. 

ಮಧ್ಯಾಹ್ನ 3 ಗಂಟೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ರೋಡ್‌ ಶೋ ಆಯೋಜಿಸಲಾಗಿದೆ. ಅದೇ ದಿನ ಸಂಜೆ 5.30ಕ್ಕೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ರೋಡ್ ಶೋ ನಡೆಯಲಿದೆ. ಚುನಾವಣೆಗೆ ಎರಡು ದಿನ ಇರುವಾಗ ಅಣ್ಣಾಮಲೈ ಪ್ರಚಾರ ಕಾರ್ಯ ನಡೆಸಲಿದ್ದು ಅಂತಿಮ ಹಂತದ ಮತಯಾಚನೆ ಮಾಡಲಿದ್ದಾರೆ.

Former Karnataka IPS officer and Tamil Nadu BJP state president Annamalai will hold roadshows in support of BJP candidate Brijesh Chowta at various places in Dakshina Kannada district on April 23.