ಬ್ರೇಕಿಂಗ್ ನ್ಯೂಸ್
21-04-24 04:13 pm Mangalore Correspondent ಕರಾವಳಿ
ಮಂಗಳೂರು, ಎ.21: ಪ್ರವಾಸಿ ತಾಣಗಳಲ್ಲಿ ನದಿ, ಕಡಲಿನ ಮಧ್ಯೆ ತೇಲುವ ಹೋಟೆಲ್ ಗಳನ್ನು ಕಂಡಿದ್ದೇವೆ. ಆದರೆ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ಆಗಸದಲ್ಲಿ ಕುಳಿತು ಆಹಾರ ಸೇವಿಸಲು ಹೋಟೆಲ್ ಸಿದ್ಧವಾಗುತ್ತಿದೆ. ಹೌದು, ಭೂಮಿಯಿಂದ ಬರೋಬ್ಬರಿ 120 ಅಡಿ ಎತ್ತರದಲ್ಲಿ ಕುಳಿತು ಕಡಲಿನ ಮೇಲೊಂದು ಹೆಲಿಕಾಪ್ಟರಿನಲ್ಲಿ ಕುಳಿತ ರೀತಿ ಆಹಾರ ಸವಿಯಲು ವೇದಿಕೆ ಸಿದ್ಧವಾಗುತ್ತಿದೆ.
ಬೀಚ್ ಪ್ರವಾಸೋದ್ಯಮದ ಆಕರ್ಷಣೆಗಾಗಿ ಕರಾವಳಿ ತೀರದಲ್ಲೇ ಮೊದಲ ಬಾರಿಗೆ “ಸ್ಕೈ ಡೈನಿಂಗ್’ ಪಣಂಬೂರು ಬೀಚ್ನಲ್ಲಿ ತೆರೆದುಕೊಳ್ಳಲಿದೆ. ಪಣಂಬೂರು ಬೀಚ್ ನಿರ್ವಹಣೆಯ ಗುತ್ತಿಗೆ ಪಡೆದಿರುವ ಬಿಲ್ಡರ್ ಲಕ್ಷ್ಮೀಶ ಭಂಡಾರಿ ನೇತೃತ್ವದ “ಕದಳೀ ಬೀಚ್ ಟೂರಿಸಂ ಸಂಸ್ಥೆ’ ಆಗಸದಲ್ಲಿ ಹೊಟೇಲ್ ಯೋಜನೆ ರೂಪಿಸಿದೆ. ಸದ್ಯಕ್ಕೆ ಈ ಕುರಿತು ಕ್ರೇನ್ ಇನ್ನಿತರ ಪರಿಕಲ್ಪನೆಗಳ ಸಿದ್ಧತೆ ನಡೆಯುತ್ತಿದ್ದು ಮೇ ಮೊದಲ ವಾರದಲ್ಲಿ ಅಧಿಕೃತ ಆರಂಭಗೊಳ್ಳುವ ಸಾಧ್ಯತೆ ಇದೆ.
ಆಗಸದಲ್ಲಿ ಊಟ, ಉಪಾಹಾರ ಸವಿಯುವ “ಸ್ಕೈ ಡೈನಿಂಗ್’ ಎನ್ನುವ ಪರಿಕಲ್ಪನೆ ವಿದೇಶಗಳಲ್ಲಿ ಕೆಲವು ಕಡೆ ಆಕರ್ಷಣೆ ಗಿಟ್ಟಿಸಿದೆ. ಭಾರತದಲ್ಲೂ ಈ ರೀತಿಯ ಡೈನಿಂಗ್ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಮಂಗಳೂರಿನಲ್ಲಿ ಬೀಚ್ ಟೂರಿಸಂ ಬೆಳೆಸಲು ಜಿಲ್ಲಾಡಳಿತವೂ ಪ್ರೋತ್ಸಾಹ ನೀಡುತ್ತಿದ್ದು ಪಣಂಬೂರಿನಲ್ಲಿ ಆರಂಭಗೊಂಡರೆ ಕರಾವಳಿಗೆ ಬರುವ ಪ್ರವಾಸಿಗರಿಗೆ ಹೊಸ ಅನುಭವ ನೀಡಬಹುದು.
ಇದಕ್ಕಾಗಿ ಕ್ರೇನ್ ಅಳವಡಿಕೆ ಆಗುತ್ತಿದ್ದು 120 ಅಡಿಗಳಷ್ಟು ಎತ್ತರಕ್ಕೆ ಪ್ರವಾಸಿಗರನ್ನು ಕರೆದೊಯ್ದು ಉಪಹಾರ ಸವಿಯಲು ಏರ್ಪಾಟು ಮಾಡಲಾಗಿದೆ. ಒಂದು ಕಡೆ ವಿಶಾಲ ಸಮುದ್ರ, ಇನ್ನೊಂದು ಕಡೆ ಮಂಗಳೂರು ನಗರದ ನೋಟ ಕಾಣಸಿಗಲಿದೆ. ಪ್ರವಾಸಿಗರಿಗೆ ವಿಮಾನದಲ್ಲಿ ಕುಳಿತ ರೀತಿಯ ಅನುಭವ ಸಿಗಲಿದೆ. ಸ್ಕೈ ಡೈನಿಂಗ್ ಜತೆಗೆ ಸಾಹಸ ಕ್ರೀಡೆ, ವಾಟರ್ ಸ್ಪೋರ್ಟ್ಸ್, ರೆಸ್ಟೋರೆಂಟ್ ಗಳಿಗೆ ಜಿಲ್ಲಾಡಳಿತ – ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ ಎನ್ನುತ್ತಾರೆ ಸಂಸ್ಥೆಯ ಮುಖ್ಯಸ್ಥರಾದ ಲಕ್ಷ್ಮೀಶ್ ಭಂಡಾರಿ.
ಗಾಜಿನಿಂದ ತಯಾರಿಸಿದ ಕ್ಯಾಬಿನಲ್ಲಿ ಕುಳಿತು ಒಮ್ಮೆಗೆ 16 ಮಂದಿ ಸಂಗೀತದ ಜತೆಗೆ ತಿನಿಸು ಸವಿಯಬಹುದು. ಎಲ್ಲರಿಗೂ ಸೇಫ್ಟಿ ಬೆಲ್ಟ್ ಅಳವಡಿಸಲಿದ್ದು ಸುರಕ್ಷತೆಗೆ ಆದ್ಯತೆ ಇರಲಿದೆ. ಹೊಟೇಲ್ ಪರಿಚಾರಕರಿಗೆ ಮತ್ತು ತಾಂತ್ರಿಕ ಸಿಬಂದಿಗೆ ಪ್ರತ್ಯೇಕ ಕ್ಯಾಬಿನ್ ಇರಲಿದೆ. ಪಣಂಬೂರು ತೀರದಲ್ಲಿ ಸ್ಕೈ ಡೈವಿಂಗ್ ಮಾಡುವುದಕ್ಕೆ ಸಿದ್ಧತೆ ನಡೆದಿತ್ತು. ಅದಕ್ಕೂ ಮೊದಲೇ ಸ್ಕೈ ಡೈನಿಂಗ್ ಕಾರ್ಯರೂಪಕ್ಕೆ ಬರಲಿದೆ.
Sky dining hotel to come up at Panambur beach in Mangalore. An exciting opportunity is on the horizon for the public to savor delectable cuisine while gazing upon the picturesque cityscape from a lofty height of 120 feet above ground level.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm