ಬ್ರೇಕಿಂಗ್ ನ್ಯೂಸ್
21-04-24 04:13 pm Mangalore Correspondent ಕರಾವಳಿ
ಮಂಗಳೂರು, ಎ.21: ಪ್ರವಾಸಿ ತಾಣಗಳಲ್ಲಿ ನದಿ, ಕಡಲಿನ ಮಧ್ಯೆ ತೇಲುವ ಹೋಟೆಲ್ ಗಳನ್ನು ಕಂಡಿದ್ದೇವೆ. ಆದರೆ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ಆಗಸದಲ್ಲಿ ಕುಳಿತು ಆಹಾರ ಸೇವಿಸಲು ಹೋಟೆಲ್ ಸಿದ್ಧವಾಗುತ್ತಿದೆ. ಹೌದು, ಭೂಮಿಯಿಂದ ಬರೋಬ್ಬರಿ 120 ಅಡಿ ಎತ್ತರದಲ್ಲಿ ಕುಳಿತು ಕಡಲಿನ ಮೇಲೊಂದು ಹೆಲಿಕಾಪ್ಟರಿನಲ್ಲಿ ಕುಳಿತ ರೀತಿ ಆಹಾರ ಸವಿಯಲು ವೇದಿಕೆ ಸಿದ್ಧವಾಗುತ್ತಿದೆ.
ಬೀಚ್ ಪ್ರವಾಸೋದ್ಯಮದ ಆಕರ್ಷಣೆಗಾಗಿ ಕರಾವಳಿ ತೀರದಲ್ಲೇ ಮೊದಲ ಬಾರಿಗೆ “ಸ್ಕೈ ಡೈನಿಂಗ್’ ಪಣಂಬೂರು ಬೀಚ್ನಲ್ಲಿ ತೆರೆದುಕೊಳ್ಳಲಿದೆ. ಪಣಂಬೂರು ಬೀಚ್ ನಿರ್ವಹಣೆಯ ಗುತ್ತಿಗೆ ಪಡೆದಿರುವ ಬಿಲ್ಡರ್ ಲಕ್ಷ್ಮೀಶ ಭಂಡಾರಿ ನೇತೃತ್ವದ “ಕದಳೀ ಬೀಚ್ ಟೂರಿಸಂ ಸಂಸ್ಥೆ’ ಆಗಸದಲ್ಲಿ ಹೊಟೇಲ್ ಯೋಜನೆ ರೂಪಿಸಿದೆ. ಸದ್ಯಕ್ಕೆ ಈ ಕುರಿತು ಕ್ರೇನ್ ಇನ್ನಿತರ ಪರಿಕಲ್ಪನೆಗಳ ಸಿದ್ಧತೆ ನಡೆಯುತ್ತಿದ್ದು ಮೇ ಮೊದಲ ವಾರದಲ್ಲಿ ಅಧಿಕೃತ ಆರಂಭಗೊಳ್ಳುವ ಸಾಧ್ಯತೆ ಇದೆ.
ಆಗಸದಲ್ಲಿ ಊಟ, ಉಪಾಹಾರ ಸವಿಯುವ “ಸ್ಕೈ ಡೈನಿಂಗ್’ ಎನ್ನುವ ಪರಿಕಲ್ಪನೆ ವಿದೇಶಗಳಲ್ಲಿ ಕೆಲವು ಕಡೆ ಆಕರ್ಷಣೆ ಗಿಟ್ಟಿಸಿದೆ. ಭಾರತದಲ್ಲೂ ಈ ರೀತಿಯ ಡೈನಿಂಗ್ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಮಂಗಳೂರಿನಲ್ಲಿ ಬೀಚ್ ಟೂರಿಸಂ ಬೆಳೆಸಲು ಜಿಲ್ಲಾಡಳಿತವೂ ಪ್ರೋತ್ಸಾಹ ನೀಡುತ್ತಿದ್ದು ಪಣಂಬೂರಿನಲ್ಲಿ ಆರಂಭಗೊಂಡರೆ ಕರಾವಳಿಗೆ ಬರುವ ಪ್ರವಾಸಿಗರಿಗೆ ಹೊಸ ಅನುಭವ ನೀಡಬಹುದು.
ಇದಕ್ಕಾಗಿ ಕ್ರೇನ್ ಅಳವಡಿಕೆ ಆಗುತ್ತಿದ್ದು 120 ಅಡಿಗಳಷ್ಟು ಎತ್ತರಕ್ಕೆ ಪ್ರವಾಸಿಗರನ್ನು ಕರೆದೊಯ್ದು ಉಪಹಾರ ಸವಿಯಲು ಏರ್ಪಾಟು ಮಾಡಲಾಗಿದೆ. ಒಂದು ಕಡೆ ವಿಶಾಲ ಸಮುದ್ರ, ಇನ್ನೊಂದು ಕಡೆ ಮಂಗಳೂರು ನಗರದ ನೋಟ ಕಾಣಸಿಗಲಿದೆ. ಪ್ರವಾಸಿಗರಿಗೆ ವಿಮಾನದಲ್ಲಿ ಕುಳಿತ ರೀತಿಯ ಅನುಭವ ಸಿಗಲಿದೆ. ಸ್ಕೈ ಡೈನಿಂಗ್ ಜತೆಗೆ ಸಾಹಸ ಕ್ರೀಡೆ, ವಾಟರ್ ಸ್ಪೋರ್ಟ್ಸ್, ರೆಸ್ಟೋರೆಂಟ್ ಗಳಿಗೆ ಜಿಲ್ಲಾಡಳಿತ – ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ ಎನ್ನುತ್ತಾರೆ ಸಂಸ್ಥೆಯ ಮುಖ್ಯಸ್ಥರಾದ ಲಕ್ಷ್ಮೀಶ್ ಭಂಡಾರಿ.
ಗಾಜಿನಿಂದ ತಯಾರಿಸಿದ ಕ್ಯಾಬಿನಲ್ಲಿ ಕುಳಿತು ಒಮ್ಮೆಗೆ 16 ಮಂದಿ ಸಂಗೀತದ ಜತೆಗೆ ತಿನಿಸು ಸವಿಯಬಹುದು. ಎಲ್ಲರಿಗೂ ಸೇಫ್ಟಿ ಬೆಲ್ಟ್ ಅಳವಡಿಸಲಿದ್ದು ಸುರಕ್ಷತೆಗೆ ಆದ್ಯತೆ ಇರಲಿದೆ. ಹೊಟೇಲ್ ಪರಿಚಾರಕರಿಗೆ ಮತ್ತು ತಾಂತ್ರಿಕ ಸಿಬಂದಿಗೆ ಪ್ರತ್ಯೇಕ ಕ್ಯಾಬಿನ್ ಇರಲಿದೆ. ಪಣಂಬೂರು ತೀರದಲ್ಲಿ ಸ್ಕೈ ಡೈವಿಂಗ್ ಮಾಡುವುದಕ್ಕೆ ಸಿದ್ಧತೆ ನಡೆದಿತ್ತು. ಅದಕ್ಕೂ ಮೊದಲೇ ಸ್ಕೈ ಡೈನಿಂಗ್ ಕಾರ್ಯರೂಪಕ್ಕೆ ಬರಲಿದೆ.
Sky dining hotel to come up at Panambur beach in Mangalore. An exciting opportunity is on the horizon for the public to savor delectable cuisine while gazing upon the picturesque cityscape from a lofty height of 120 feet above ground level.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm