ಬ್ರೇಕಿಂಗ್ ನ್ಯೂಸ್
22-04-24 07:26 pm Mangalore Correspondent ಕರಾವಳಿ
ಮಂಗಳೂರು, ಏ.22: ಭಾರತೀಯ ವಾಯುಪಡೆಯಲ್ಲಿ ಸೇವೆಗೈದು ನಿವೃತ್ತಿಯಾದ ಮಂಗಳೂರಿನ ಕಂಕನಾಡಿ ನಿವಾಸಿ 72 ವರ್ಷದ ಯೋಧ ದಿವಾಕರ್ ತನ್ನ ಒಂದು ತಿಂಗಳ ಪಿಂಚಣಿ ದುಡ್ಡನ್ನು ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರ ಚುನಾವಣಾ ವೆಚ್ಚಕ್ಕೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ನಾವು ದೇಶಕ್ಕಾಗಿ ದುಡಿದು ನಿವೃತ್ತಿಯಾದವರನ್ನು ಸರಕಾರ, ಅಧಿಕಾರಿ ವರ್ಗ ಕ್ಷುಲ್ಲಕವಾಗಿ ನೋಡುತ್ತ ಬಂದಿದೆ. ಈ ಬಾರಿ ಸೇನೆಯಲ್ಲಿ ದುಡಿದ ವ್ಯಕ್ತಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡಿದ್ದು ನಮಗೆಲ್ಲ ಹೆಮ್ಮೆ ತಂದಿದೆ. ಅವರನ್ನು ಗೆಲ್ಲಿಸಲು ನಾವು ಪೂರ್ಣ ಮಟ್ಟದ ಬೆಂಬಲ ನೀಡುತ್ತೇವೆ. ನನ್ನ ಒಂದು ತಿಂಗಳ ಪಿಂಚಣಿ ಮೊತ್ತವನ್ನು ಚೌಟರ ಚುನಾವಣೆ ವೆಚ್ಚಕ್ಕೆ ನೀಡುತ್ತಿದ್ದು, ನಮ್ಮೆಲ್ಲರ ಹಾರೈಕೆ ಬಯಸುತ್ತೇವೆ ಎಂದಿದ್ದಾರೆ.
ಕಾಂಗ್ರೆಸ್ ಅಧಿಕಾರ ಹಿಡಿದರೆ ದೇಶ ಉಳಿಯಲ್ಲ
ದೇಶಕ್ಕಾಗಿ ಈ ಬಾರಿ ಬಿಜೆಪಿಗೆ ಮತ ನೀಡಬೇಕಾಗಿದೆ. ಕಾಂಗ್ರೆಸ್ ದೇಶ ಹಿತ ಬಯಸುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಅಧಿಕಾರ ನೀಡಿದಂತಾಗುತ್ತದೆ. ಕಾಂಗ್ರೆಸ್ ದೇಶದಲ್ಲಿ ಅಧಿಕಾರ ನಡೆಸುವಂತಾದರೆ ಇನ್ನು 50 ವರ್ಷದಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ. ಹಾಗಾಗಿ ಪ್ರಜ್ಞಾವಂತ ಮತದಾರರು ದೇಶದ ಹಿತಕ್ಕಾಗಿ ಬಿಜೆಪಿ ಪರ ಮತ ಚಲಾಯಿಸಬೇಕಿದೆ ಎಂದರು.
ಐದು ಜಿಲ್ಲಾಧಿಕಾರಿ ಬಳಿ ಹೋದರೂ ನ್ಯಾಯ ಸಿಕ್ಕಿಲ್ಲ
ನನ್ನ ದುಡಿದ ಹಣದಲ್ಲಿ ಬಂಟ್ವಾಳದ ಬ್ರಹ್ಮರಕೂಟ್ಲುವಿನಲ್ಲಿ 2.36 ಎಕ್ರೆ ಜಾಗ ಖರೀದಿಸಿದ್ದೆ. ಆದರೆ ಆ ಜಾಗವು ನೇತ್ರಾವತಿ ಅಣೆಕಟ್ಟು ಸಲುವಾಗಿ ಮಹಾನಗರ ಪಾಲಿಕೆಗೆ ಹೋಗಿದೆ. ಆದರೆ 23 ಸೆಂಟ್ ಜಾಗದ ಪರಿಹಾರ ಇನ್ನೂ ಸಿಕ್ಕಿಲ್ಲ. ಇದಕ್ಕಾಗಿ ಕಳೆದ ಆರು ವರ್ಷಗಳಲ್ಲಿ ಐದು ಜಿಲ್ಲಾಧಿಕಾರಿಗಳ ಬಳಿಗೂ ಹೋಗಿದ್ದೇನೆ. ಯಾವುದೇ ಅಧಿಕಾರಿಯೂ ನಾನೊಬ್ಬ ಯೋಧನೆಂದು ಹೇಳಿದರೂ ನನ್ನ ಕೆಲಸ ಮಾಡಿಸಿಕೊಟ್ಟಿಲ್ಲ. ಹೈಕೋರ್ಟಿಗೆ ಹೋಗಿ ಆದೇಶ ತಂದರೂ, ಜಿಲ್ಲಾಧಿಕಾರಿಯಾಗಲೀ, ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಆಗಲೀ ನನ್ನ ಕೆಲಸ ಮಾಡಿಕೊಟ್ಟಿಲ್ಲ. ಡೀಸಿ ಕೋರ್ಟಿನಲ್ಲಿ ಒಬ್ಬ ನ್ಯಾಯಾಧೀಶರಂತೂ ನನ್ನ ಬಳಿಯೇ ಲಂಚ ಕೇಳುವಂತಹ ಸ್ಥಿತಿ ಎದುರಿಸಿದ್ದೇನೆ. ಭ್ರಷ್ಟಾಚಾರ ತೊಲಗಿಸಬೇಕು, ಅಧಿಕಾರಿ ವರ್ಗ, ಜನಪ್ರತಿನಿಧಿಗಳು ಭ್ರಷ್ಟರಾಗಿದ್ದಾರೆ. ಸೇನೆಯಲ್ಲಿದ್ದವರು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಕಡಿಮೆಯಾಗಬಹುದು. ನಮ್ಮ ಪರವಾಗಿ ಸಂಸತ್ತಿನಲ್ಲಿ ಧ್ವನಿ ಬರಬಹುದು ಎಂಬ ವಿಶ್ವಾಸ ಇದೆ ಎಂದು ಹೇಳಿದರು.
1971ರ ಬಾಂಗ್ಲಾ ವಿಮೋಚನೆ ಯುದ್ಧದಲ್ಲಿ ಭಾಗವಹಿಸಿದ್ದ ದಿವಾಕರ್ ಮೂಲತಃ ಉಳ್ಳಾಲದ ಮುಕ್ಕಚ್ಚೇರಿಯವರು. ಅಲ್ಲಿದ್ದ ಜಾಗವನ್ನು ತಮ್ಮ ಕುಟುಂಬದ ದೈವಸ್ಥಾನಕ್ಕಾಗಿ ಬಿಟ್ಟು ಕೊಟ್ಟಿದ್ದಾರೆ. ಈಗ ಮಕ್ಕಳ ಜೊತೆಗೆ ಮಂಗಳೂರಿನ ಕಂಕನಾಡಿಯಲ್ಲಿ ನೆಲೆಸಿದ್ದಾರೆ.
Mangalore Ex Indian army soldier Divakar to donate his pension fund to BJP MP candidate Brijesh Chowta
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm