ಬ್ರೇಕಿಂಗ್ ನ್ಯೂಸ್
23-04-24 03:18 pm Mangalore Correspondent ಕರಾವಳಿ
ಮಂಗಳೂರು, ಎ.23: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ರಾಮನ ಹೆಸರಿನಲ್ಲಿ , ರಾಮ ಮಂದಿರದ ವಿಚಾರದಲ್ಲಿ ಮತ ಕೇಳುತ್ತಿದ್ದಾರೆ. ರಾಮ ಮಂದಿರ ಇನ್ನೂ ಪರಿಪೂರ್ಣ ಆಗಿಲ್ಲ. ಅದು ರಾಮ ಮಂದಿರ ಅಲ್ಲ, ಅದನ್ನು ಚುನಾವಣಾ ಮಂದಿರ ಮಾಡಿದ್ದಾರೆ ಎಂದು ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.
ಬಿಜೆಪಿ ಅಭಿವೃದ್ಧಿಗೆ ಮತ ಕೊಡಿ ಅಂತ ಹೇಳುತ್ತಿಲ್ಲ. ರಾಮನಿಗಾಗಿ ಮತ ಕೊಡಿ ಅಂತ ಭಾವನಾತ್ಮಕವಾಗಿ ಮತ ಕೇಳುತ್ತಿದೆ. ಈ ಬಾರಿಯ ಚುನಾವಣೆ ಬದುಕು ಹಾಗೂ ಭಾವನೆ ನಡುವಿನ ಚುನಾವಣೆ. ಕಾಂಗ್ರೆಸ್ ಬದುಕು ಕಟ್ಟಿಕೊಳ್ಳುವ ಕಾರ್ಯಕ್ರಮ ಹಾಕಿಕೊಳ್ಳುತ್ತದೆ. ಬಿಜೆಪಿ ಭಾವನೆಯನ್ನು ಮುಂದಿಟ್ಟು ಮತ ಕೇಳುತ್ತಿದೆ.
ಸ್ವಾತಂತ್ರ್ಯ ಬಳಿಕ ಯಾವ ಪ್ರಧಾನಿಯೂ ಹೇಳದ ಮಾತುಗಳನ್ನು ಪ್ರಧಾನಿ ಹೇಳುತ್ತಿದ್ದಾರೆ. ಒಬ್ಬ ಶಾಸಕರು ಇದು ದೇಶ ಪ್ರೀಮಿಗಳ ಹಾಗೂ ದೇಶದ್ರೋಹಿಗಳ ನಡುವಿನ ಚುನಾವಣೆ ಅಂತ ಹೇಳುತ್ತಾರೆ. ಬಿಜೆಪಿಯವರು ಹತಾಶರಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.
ಮೋದಿಯವರಿಗೆ ದೇಶದ ಉದ್ದಗಲಕ್ಕೂ ಪ್ರಚಾರ ಮಾಡುವುದಕ್ಕಾಗಿಯೇ 3 ತಿಂಗಳ ಕಾಲ ಚುನಾವಣೆ ಇಟ್ಟಿದ್ದಾರೆ ಎಂದು ಹೇಳಿದ ಭಂಡಾರಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 24 ಕ್ಷೇತ್ರದಲ್ಲಿ ಗೆಲ್ಲುತ್ತದೆ. ದ್ವೇಷದ ಭಾವನೆ ಬಿತ್ತುವ ಹಿಂದುತ್ವ ನಮಗೆ ಬೇಡ, ಹಿಂದುತ್ವದ ಪಾಠ ಬಿಜೆಪಿಯಿಂದ ಕಲಿಯಬೇಕಿಲ್ಲ ಎಂದರು.
In the Lok Sabha elections, the BJP is seeking votes in the name of Lord Ram and on the ram temple issue. The Ram temple is not yet complete. KPCC working president Manjunath Bhandari said in Mangaluru that it was not a Ram temple, it was made an election temple.
03-05-24 10:19 pm
Bangalore Correspondent
Jai Shri Ram Congress leader Basheeruddin: ಜೈ...
03-05-24 09:43 pm
Prajwal Revanna, sex scandal, rape: ಗನ್ ತೋರಿಸ...
03-05-24 09:06 pm
AC blast in Kalyan jewellers Bellary: ಬಳ್ಳಾರಿ...
03-05-24 07:41 pm
Raju Gowda, Siddaramaiah, DK Shivakumar: ಡಿಕೆ...
03-05-24 05:15 pm
03-05-24 10:58 pm
HK News Desk
ಸಿಸೇರಿಯನ್ ಮಾಡುವಾಗ ಕೈಕೊಟ್ಟ ಕರೆಂಟ್ ; ಮೊಬೈಲ್ ಟಾ...
03-05-24 10:28 am
Dubai Rain: ದುಬೈನಲ್ಲಿ ಮತ್ತೆ ಭಾರಿ ಮಳೆ ; ಶಾಲೆ,...
03-05-24 10:20 am
Narendra Modi, Rahul Gandhi: ರಾಹುಲ್ ಬಗ್ಗೆ ಪಾಕ...
02-05-24 10:07 pm
Hindu Marriage, Supreme court: ಹಿಂದು ವಿವಾಹ ಎನ...
02-05-24 09:25 pm
03-05-24 08:32 pm
Mangalore Correspondent
Mullai Muhilan Dc Mangalore: ಕುಡಿಯುವ ನೀರು ಪೂರ...
03-05-24 06:31 pm
Lakshadweep to Mangalore Speed boat ship: ಲಕ್...
02-05-24 07:52 pm
Mangalore Yesuraj, AEO, Kukke Subrahmanya Tem...
02-05-24 02:24 pm
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
03-05-24 09:57 pm
Mangalore Correspondent
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm