ಬ್ರೇಕಿಂಗ್ ನ್ಯೂಸ್
24-04-24 06:24 pm Mangalore Correspondent ಕರಾವಳಿ
ಮಂಗಳೂರು, ಎ.24: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರ ಬಗ್ಗೆ ಬಂಟರ ಬ್ರಿಗೇಡ್ ಹೆಸರಲ್ಲಿ ಕರಪತ್ರ ಮುದ್ರಿಸಿ, ಆಕ್ಷೇಪಾರ್ಹ ವಿಚಾರಗಳನ್ನು ಬರೆದು ಜಾತಿ, ಜಾತಿಗಳ ನಡುವೆ ದ್ವೇಷ ಹಬ್ಬಿಸುವ ಯತ್ನ ನಡೆದಿದ್ದು ಬಿಜೆಪಿ ಕಾನೂನು ಪ್ರಕೋಷ್ಠದಿಂದ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ.
ಕರಪತ್ರದಲ್ಲಿ ಬ್ರಿಜೇಶ್ ಚೌಟರ ಭಾವಚಿತ್ರ ಬಳಸಿ ಆಕ್ಷೇಪಾರ್ಹ ವಿಚಾರಗಳನ್ನು ಮುದ್ರಿಸಿ, ಮತದಾರರಲ್ಲಿ ದ್ವೇಷ ಹಬ್ಬಿಸುವ ಯತ್ನ ನಡೆದಿದೆ. ಎದುರಾಳಿ ಕಾಂಗ್ರೆಸ್ ಅಭ್ಯರ್ಥಿಯೇ ಈ ಕೃತ್ಯವನ್ನು ಮಾಡಿದ್ದಾರೆ. ಈ ರೀತಿಯ ಕರಪತ್ರವನ್ನು ಮುದ್ರಿಸಿ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಜಾತಿಗಳ ನಡುವೆ ದ್ವೇಷ ಬಿತ್ತಿ ಅದರ ದುರ್ಲಾಭವನ್ನು ಕಾಂಗ್ರೆಸ್ ಅಭ್ಯರ್ಥಿ ಪಡೆಯುತ್ತಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕಾನೂನು ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ದೇವಿಪ್ರಸಾದ್ ಸಾಮಾನಿ ಒತ್ತಾಯಿಸಿದ್ದಾರೆ.
ಬಂಟ ಬ್ರಿಗೇಡ್ ಎನ್ನುವ ಯಾವುದೇ ಸಂಸ್ಥೆ ಅಸ್ತಿತ್ವದಲ್ಲಿಲ್ಲ. ಅಂತಹ ಸಂಸ್ಥೆ ಹೆಸರಲ್ಲಿ ಕರಾವಳಿ ಭಾಗದಲ್ಲಿ ಯಾವುದೇ ಕಾರ್ಯ ಚಟುವಟಿಕೆ ನಡೆಸುವುದು ಕಂಡುಬಂದಿಲ್ಲ. ಚುನಾವಣೆಗೆ ಎರಡು ದಿನ ಇರುವಾಗ ಮತದಾರರಿಗೆ ಪ್ರಭಾವ ಬೀರುವ ಉದ್ದೇಶದಿಂದ ಈ ರೀತಿಯ ಕೃತ್ಯ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇಂತಹ ವಿಚಾರಗಳನ್ನು ಪಸರಿಸಿ ಚುನಾವಣೆಯಲ್ಲಿ ಲಾಭ ಮಾಡಲು ಯತ್ನಿಸುತ್ತಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಅಧಿಕಾರಿಯಲ್ಲಿ ಒತ್ತಾಯಿಸಿದ್ದಾರೆ.
Brijesh Chowta, Banta brigade letterhead in Mangalore creates rivalry among communities, a case has been filed in connection to this matter.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm