ಬ್ರೇಕಿಂಗ್ ನ್ಯೂಸ್
25-04-24 12:59 pm Mangalore Correspondent ಕರಾವಳಿ
ಮಂಗಳೂರು, ಎ.25: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಸರಕಾರ ಮೀಸಲು ನೀಡುವ ಸಲುವಾಗಿ ಇಡೀ ಮುಸ್ಲಿಂ ಸಮುದಾಯವನ್ನು ಹಿಂದುಳಿದ ಜಾತಿಗಳ ಪಟ್ಟಿಗೆ ಸೇರಿಸಿರುವುದು ಬಹಳ ಆತಂಕಕಾರಿಯಾಗಿದೆ. ಮುಸ್ಲಿಮರ ವೋಟಿಗೋಸ್ಕರ ಹಿಂದುಳಿದ ವರ್ಗಕ್ಕೆ ಅವರನ್ನು ಸೇರಿಸಿ ಬಹುಸಂಖ್ಯಾತ ಹಿಂದೂಗಳ ಹಕ್ಕನ್ನು ಕಸಿದುಕೊಳ್ಳುವ ಸಾಧ್ಯತೆ ಇದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ, ಸರಕಾರಿ ಕೆಲಸ ನೇಮಕಾತಿ, ಪೊಲೀಸ್ ಇಲಾಖೆ, ಇತರೆ ಸರಕಾರಿ ಸ್ವಾಮ್ಯಗಳ ಉದ್ಯೋಗ ನೇಮಕಾತಿಯಲ್ಲಿ ಮುಸ್ಲಿಮರಿಗೆ ಮುಕ್ತ ಅವಕಾಶ ಕೊಟ್ಟಂತಾಗುತ್ತದೆ. ಇದರಿಂದ ಹಿಂದುಳಿದ ವರ್ಗದ ಹಿಂದುಗಳಿಗೆ ಘೋರ ಅನ್ಯಾಯವಾಗಲಿದೆ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ದೇಶದ ಸಂಪತ್ತು ಮುಸ್ಲಿಮರಿಗೂ ಪಾಲು; ಹಿಂದುಗಳಿಗೆ ಬಗೆದ ದ್ರೋಹ
ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಬಂದರೆ ದೇಶದ ಎಲ್ಲ ವರ್ಗದವರ ಸಂಪತ್ತನ್ನು ಸರ್ವೇ ಮಾಡಿ ಹಂಚಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ಬಹಳ ಗಂಭೀರವಾಗಿದೆ. ಶೇಕಡಾ 80 ಇರುವ ಹಿಂದೂಗಳ ಆಸ್ತಿ ಪಾಸ್ತಿ , ಸಂಪತ್ತು ಬಲವಂತವಾಗಿ ಕಸಿದುಕೊಂಡು ಮುಸ್ಲಿಮರಿಗೆ ನೀಡುವ ಉದ್ದೇಶ ಇದರ ಹಿಂದಿದ್ದು ಹಿಂದೂಗಳು ಎಚ್ಚೆತ್ತುಕೊಳ್ಳಬೇಕಾಗಿದೆ.
ಹಿಂದುಗಳನ್ನು 2ನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಉದ್ದೇಶ ಇದಾಗಿದ್ದು ಕಾಂಗ್ರೆಸ್ ನ ಈ ವೋಟ್ ಬ್ಯಾಂಕ್ ರಾಜಕೀಯವನ್ನು ಹಿಂದೂಗಳು ತಿರಸ್ಕರಿಸಬೇಕಾಗಿದೆ.
ಚುನಾವಣೆಯಲ್ಲಿ ಯೋಚಿಸಿ ಮತ ಚಲಾಯಿಸಿ
ಕಾಂಗ್ರೆಸಿನ ಈ ಹಿಂದೂ ವಿರೋಧಿ 'ಮುಸ್ಲಿಮರ ತುಷ್ಟೀಕರಣ ರಾಜಕಾರಣವನ್ನು ಧಿಕ್ಕರಿಸಿ ಹಿಂದೂಗಳ ಹಿತ ಬಯಸುವ , ದೇಶದ ಭದ್ರತೆ, ಅಭಿವೃದ್ಧಿಗಾಗಿ ಕೆಲಸ ಮಾಡುವ ಸರಕಾರ ಬರಬೇಕಾಗಿದೆ. ಚುನಾವಣೆಯಂದು ಹಿಂದೂಗಳು 100 % ಮತದಾನ ಮಾಡಬೇಕಾಗಿದೆ.
ಹಾಗಾಗಿ ಎಲ್ಲ ಹಿಂದೂಗಳು ಯಾರಿಗೆ ಮತ ಹಾಕಬೇಕು ಎಂಬುದನ್ನು ಯೋಚಿಸಿ ತಪ್ಪದೆ ಕಡ್ಡಾಯವಾಗಿ ಮತ ಚಲಾಯಿಸಬೇಕಾಗಿ ತಮ್ಮಲ್ಲಿ ವಿಶ್ವ ಹಿಂದೂ ಪರಿಷದ್ ವಿನಂತಿಸುತ್ತದೆ ಎಂದು ಶರಣ್ ಪಂಪ್ವೆಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Inclusion of Muslims in the backward class is a Wake up call for Hindus, think before you vote says Vishwa Hindu Parishad in Mangalore
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm