ಬ್ರೇಕಿಂಗ್ ನ್ಯೂಸ್
26-04-24 08:09 am Mangalore Correspondent ಕರಾವಳಿ
ಮಂಗಳೂರು, ಎ.26: ಲೋಕಸಭೆ ಚುನಾವಣೆಗೆ ಮಂಗಳೂರಿನಲ್ಲಿ ಮತದಾರರು ಬೆಳಗ್ಗಿನಿಂದಲೇ ಉತ್ಸಾಹದಿಂದಲೇ ಪಾಲ್ಗೊಂಡಿದ್ದಾರೆ. ನಗರದ ಕಪಿತಾನಿಯೋ ಸ್ಕೂಲ್ ಮತಗಟ್ಟೆಯಲ್ಲಿ ಬೆಳಗ್ಗೆ ಏಳು ಗಂಟೆಗೆ ಮತದಾನ ಶುರುವಾಗುವ ಮೊದಲೇ ಭಾರೀ ರಶ್ ಇತ್ತು.
ಸರತಿ ಸಾಲಿನಲ್ಲಿ ಮತದಾರರು ನಿಂತಿದ್ದು ಮತಗಟ್ಟೆ ಒಳ ಹೋಗಲು ಕಾಯುತ್ತಿದ್ದಾರೆ. ಬಿಸಿಲೇರುವ ಮೊದಲೇ ಮತ ಚಲಾಯಿಸಿ ಬರಬೇಕು ಎನ್ನುವ ಧಾವಂತದಲ್ಲಿ ಮಹಿಳೆಯರು, ಹಿರಿಯ ನಾಗರಿಕರು ಮತಗಟ್ಟೆಗೆ ಆಗಮಿಸಿದ್ದಾರೆ.
ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ಬಂದಿದ್ದು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಮತಗಟ್ಟೆಯತ್ತ ಬರುವಾಗಲೇ ಹಿರಿಯ ನಾಗರಿಕರೊಬ್ಬರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಭಾರೀ ಜನ ಇರುವುದರಿಂದ ಪದ್ಮರಾಜ್ ದಂಪತಿ ಎಪಿಕ್ ಕಾರ್ಡ್ ಹಿಡಿದು ಮತ ಸರತಿ ಸಾಲಿನಲ್ಲಿ ನಿಂತಿದ್ದಾರೆ.













ಮತಗಟ್ಟೆಯ ಹೊರಭಾಗದಲ್ಲಿ 30 ಮೀಟರ್ ಉದ್ದಕ್ಕೂ ಜನರು ಸರತಿಯಲ್ಲಿ ನಿಂತಿದ್ದಾರೆ. ಬಿಸಿಲು ಏರಿದರೆ ಶಾಲೆಯ ಅಂಗಳದಲ್ಲಿ ಕ್ಯೂ ನಿಲ್ಲುವುದು ಕಷ್ಟವಾಗಬಹುದು. ಬೆಳಗ್ಗೆ ಬೇಗ ಬಂದು ಮತ ಚಲಾಯಿಸಲು ಜನರು ಕಾತರರಾಗಿದ್ದಾರೆ. ಮಂಗಳೂರು ನಗರದ ಎಲ್ಲ ಕಡೆಯೂ ಜನರು ಇದೇ ರೀತಿ ಮತದಾನಕ್ಕೆ ಉತ್ಸಾಹ ತೋರಿದ್ದಾರೆ. ಹೊಸ ಮತದಾರರು ಕೂಡ ಬೇಗನೇ ಬಂದು ಮತ ಹಾಕುತ್ತಿದ್ದಾರೆ.
ಹೊಸ ಮತದಾರರು ಮೊದಲ ಬಾರಿಗೆ ಓಟ್ ಹಾಕಿದ ಖುಷಿಯಲ್ಲಿದ್ದಾರೆ. ದೇಶಕ್ಕಾಗಿ ಓಟ್ ಹಾಕಿದ್ದೇನೆಂಬ ಧನ್ಯತೆಯ ಭಾವನೆ ಇದೆ. ಓಟ್ ಹಾಕುವಾಗ ಹೆಮ್ಮೆಯ ಭಾವನೆ ಬಂತು. ದೇಶದ ಭವಿಷ್ಯ ನಿರ್ಣಯದಲ್ಲಿ ತನ್ನದೂ ಪಾತ್ರ ಇದೆಯೆಂಬ ಭಾವನೆ ಇದೆ ಎಂದು ಮೊದಲ ಬಾರಿಗೆ ಓಟ್ ಹಾಕಿದ ವಿದ್ಯಾರ್ಥಿನಿಯೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.
Mangalore loksabha elections 2024, people gather in large number to cast vote early morning at Capitanio High School near Pumpwell. Congress candidate Padmaraj and his family came to cast their votes.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm