ಬ್ರೇಕಿಂಗ್ ನ್ಯೂಸ್
26-04-24 11:09 am Mangalore Correspondent ಕರಾವಳಿ
ಉಳ್ಳಾಲ, ಎ.26: ವಿಧಾನಸಭೆ ಸಭಾಧ್ಯಕ್ಷ ಯು.ಟಿ .ಖಾದರ್ ಅವರು ಬೋಳಿಯಾರು ಗ್ರಾಮದ ಜಾರದಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಕುಂಪಲ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.
ಯು.ಟಿ ಖಾದರ್ ಅವರು ಪತ್ನಿ ಲೆಮೀಝ್ ಖಾದರ್, ಪುತ್ರಿ ಹವ್ವಾ ನಸೀಮ, ಆಪ್ತ ಸಹಾಯಕರಾದ ಮಹಮ್ಮದ್ ಲಿಬ್ಝೆತ್ ಜೊತೆ ಜಾರದಗುಡ್ಡೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ಈ ವೇಳೆ ಮಾತನಾಡಿದ ಖಾದರ್ ಅವರು ಜೀವನದಲ್ಲಿ ಸಮಾನತೆ ಕಾಣುವುದು ಮತದಾನವೊಂದರಲ್ಲಿ ಮಾತ್ರ. ಎಷ್ಟೇ ಕಡು ಬಡವನಾದರೂ, ಆಗರ್ಭ ಶ್ರೀಮಂತನಾದರೂ ಎಲ್ಲರಿಗೂ ಒಂದೇ ಮತದಾನದ ಹಕ್ಕು ಮಾತ್ರ ಇರುತ್ತದೆ. ಈ ಸಮಾನತೆಯ ಸಾಂವಿಧಾನಿಕ ಹಕ್ಕನ್ನ ಚಲಾಯಿಸೋದು ನಮ್ಮೆಲ್ಲರ ಕರ್ತವ್ಯ. ದೇಶದ ಹಿತಕ್ಕಾಗಿ ಎಲ್ಲರೂ ಉತ್ಸಾಹದಿಂದ ಮತ ಚಲಾಯಿಸುವಂತೆ ಕರೆ ನೀಡಿದರು.
ಕುಂಪಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಪಕ್ಷದ ಕಾರ್ಯಕರ್ತರ ಜೊತೆ ತೆರಳಿ ಮತದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು ಸಧೃಢ, ವಿಕಸಿತ ಭಾರತ ನಿರ್ಮಾಣಕ್ಕೆ ಮೋದಿಯೇ ಮಗದೊಮ್ಮೆ ಪ್ರದಾನಿಯಾಗಿ ಆಯ್ಕೆಯಾಗಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಅತ್ಯಧಿಕ ಮತಗಳ ಅಂತರಗಳಲ್ಲಿ ಗೆಲ್ಲಲಿದ್ದಾರೆ ಎಂದರು.
ಮಂಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಮತಗಟ್ಟೆಗಳಲ್ಲಿ ಬಿಜೆಪಿಯ "ನಾರಿ ಶಕ್ತಿ ಬೂತ್ ಶಕ್ತಿ ಅಭಿಯಾನ" ಅಂಗವಾಗಿ ಶುಕ್ರವಾರ ಬೆಳ್ಳಂಬೆಳಗ್ಗೆ 7 ಗಂಟೆಗೆ ಸರದಿ ಸಾಲಿನಲ್ಲಿ ನಿಂತು ಪ್ರಥಮವಾಗಿ ನವ, ನಾರಿಯರು ಉತ್ಸಾಹದಿಂದ ಮತ ಚಲಾಯಿಸಿದರು. ಉಳ್ಳಾಲ ತಾಲೂಕಿನ ಕಲ್ಲಾಪು ಪಟ್ಲ ಉರ್ದು ಶಾಲೆ, ಕುಂಪಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಿಲಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಅನೇಕ ಮತಗಟ್ಟೆಗಳಲ್ಲಿ ನವ ನಾರಿಯರು ಪ್ರಥಮವಾಗಿ ಮತ ಚಲಾಯಿಸಿದರು.
Speaker UT Khader cast vote at boliyar at Ullal in Mangalore with family, Khader along with his wife and his personal assistant Lifzi casted their vote.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm