ಬ್ರೇಕಿಂಗ್ ನ್ಯೂಸ್
26-04-24 11:58 am Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ರಥಬೀದಿಯ ಸರಕಾರಿ ಹೆಣ್ಮಕ್ಕಳ ಶಾಲೆಯಲ್ಲಿ ಮತ ಚಲಾಯಿಸಿದರು.
ಕ್ಯಾ. ಬ್ರಿಜೇಶ್ ಚೌಟ ಅವರು ಬೂತ್ ಸಂಖ್ಯೆ 17ರಲ್ಲಿ ತಮ್ಮ ತಂದೆ, ತಾಯಿ ಜೊತೆಗೆ ಮತ ಚಲಾವಣೆಗೆ ಬಂದಿದ್ದರು. ಮತ ಚಲಾಯಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಚೌಟ, ಭಾರತದ ಭವಿಷ್ಯಕ್ಕಾಗಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗಿನಿಂದಲೇ ಮತದಾರರು ಭಾರೀ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ.
ಈ ಬಾರಿ ತಾಯಂದಿರಲ್ಲಿ ಒಂದು ವಿಶೇಷ ವಿನಂತಿ ಮಾಡಿದ್ದೆ. ದೇಶದ ಭವಿಷ್ಯಕ್ಕಾಗಿ, ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲು ತಾಯಂದಿರು ತಮ್ಮ ನಾರಿಶಕ್ತಿಯನ್ನು ತೋರಿಸಲು ಮತಗಟ್ಟೆಗೆ ಮೊದಲು ತೆರಳಿ ಮತ ಹಾಕಬೇಕೆಂದು ಹೇಳಿದ್ದೆ. ಜಿಲ್ಲೆಯಾದ್ಯಂತ ಮಹಿಳಾ ಮತದಾರರು ಭಾರೀ ಖುಷಿಯಲ್ಲಿ ಮತ ಚಲಾವಣೆಗೆ ಬಂದಿದ್ದಾರೆ. ಅಭೂತಪೂರ್ವ ಸ್ಪಂದನೆ ಸಿಗುತ್ತಾ ಇದೆ. ನವದುರ್ಗೆಯರಾಗಿ ಮತ ಚಲಾಯಿಸಿ ಮೋದಿ ಅವರನ್ನು ಆಶೀರ್ವದಿಸಲು ಬಂದಿದ್ದಾರೆ. ಎಲ್ಲ ಕಡೆ ಬೂತ್ ಗಳಲ್ಲಿ ಮಹಿಳೆಯರು ನಾರಿಶಕ್ತಿಯರಾಗಿ ಬಂದು ಮೊದಲ ಮತ ಹಾಕುತ್ತಿರುವ ಮಾಹಿತಿ ನನಗೆ ಸಿಗುತ್ತಿದೆ.
ಈ ದೇಶದ ಅಖಂಡತೆಗೆ ಗ್ಯಾರಂಟಿ ನರೇಂದ್ರ ಮೋದಿ, ಈ ದೇಶದ ಸೈನಿಕರಿಗೆ, ರೈತರಿಗೆ, ಅಭಿವೃದ್ಧಿಗೆ, ದೇಶದ ಭದ್ರತೆಗೆ, ಯುವ ಸಮೂಹಕ್ಕೆ ಗ್ಯಾರಂಟಿ ನರೇಂದ್ರ ಮೋದಿ. ಅವರನ್ನು ದೇಶದ ಜನತೆ ಮತ್ತೊಮ್ಮೆ ಪ್ರಧಾನಿ ಸ್ಥಾನಕ್ಕೆ ಒಯ್ಯುತ್ತಾರೆಂಬ ಸಂಪೂರ್ಣ ವಿಶ್ವಾಸ ಇದೆ. ಮತದಾರರು ಸುಳ್ಳು, ಅಪಪ್ರಚಾರದ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಇದೆಯೆಂದು ಕ್ಯಾ. ಬ್ರಿಜೇಶ್ ಚೌಟ ನುಡಿದರು.
Bjp Candidate Brijesh Chowta casts vote at car Street school in Mangalore. He came along with his Father and mother. Am very happy to see ladies coming in large number to cast their votes he added.
11-08-25 03:29 pm
Bangalore Correspondent
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
11-08-25 02:48 pm
HK News Desk
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
11-08-25 03:33 pm
Mangalore Correspondent
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
Six Arrested, Dharmasthala Incident, Kudla Ra...
10-08-25 02:26 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm