ಬ್ರೇಕಿಂಗ್ ನ್ಯೂಸ್
26-04-24 11:58 am Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ರಥಬೀದಿಯ ಸರಕಾರಿ ಹೆಣ್ಮಕ್ಕಳ ಶಾಲೆಯಲ್ಲಿ ಮತ ಚಲಾಯಿಸಿದರು.
ಕ್ಯಾ. ಬ್ರಿಜೇಶ್ ಚೌಟ ಅವರು ಬೂತ್ ಸಂಖ್ಯೆ 17ರಲ್ಲಿ ತಮ್ಮ ತಂದೆ, ತಾಯಿ ಜೊತೆಗೆ ಮತ ಚಲಾವಣೆಗೆ ಬಂದಿದ್ದರು. ಮತ ಚಲಾಯಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಚೌಟ, ಭಾರತದ ಭವಿಷ್ಯಕ್ಕಾಗಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗಿನಿಂದಲೇ ಮತದಾರರು ಭಾರೀ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ.













ಈ ಬಾರಿ ತಾಯಂದಿರಲ್ಲಿ ಒಂದು ವಿಶೇಷ ವಿನಂತಿ ಮಾಡಿದ್ದೆ. ದೇಶದ ಭವಿಷ್ಯಕ್ಕಾಗಿ, ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲು ತಾಯಂದಿರು ತಮ್ಮ ನಾರಿಶಕ್ತಿಯನ್ನು ತೋರಿಸಲು ಮತಗಟ್ಟೆಗೆ ಮೊದಲು ತೆರಳಿ ಮತ ಹಾಕಬೇಕೆಂದು ಹೇಳಿದ್ದೆ. ಜಿಲ್ಲೆಯಾದ್ಯಂತ ಮಹಿಳಾ ಮತದಾರರು ಭಾರೀ ಖುಷಿಯಲ್ಲಿ ಮತ ಚಲಾವಣೆಗೆ ಬಂದಿದ್ದಾರೆ. ಅಭೂತಪೂರ್ವ ಸ್ಪಂದನೆ ಸಿಗುತ್ತಾ ಇದೆ. ನವದುರ್ಗೆಯರಾಗಿ ಮತ ಚಲಾಯಿಸಿ ಮೋದಿ ಅವರನ್ನು ಆಶೀರ್ವದಿಸಲು ಬಂದಿದ್ದಾರೆ. ಎಲ್ಲ ಕಡೆ ಬೂತ್ ಗಳಲ್ಲಿ ಮಹಿಳೆಯರು ನಾರಿಶಕ್ತಿಯರಾಗಿ ಬಂದು ಮೊದಲ ಮತ ಹಾಕುತ್ತಿರುವ ಮಾಹಿತಿ ನನಗೆ ಸಿಗುತ್ತಿದೆ.
ಈ ದೇಶದ ಅಖಂಡತೆಗೆ ಗ್ಯಾರಂಟಿ ನರೇಂದ್ರ ಮೋದಿ, ಈ ದೇಶದ ಸೈನಿಕರಿಗೆ, ರೈತರಿಗೆ, ಅಭಿವೃದ್ಧಿಗೆ, ದೇಶದ ಭದ್ರತೆಗೆ, ಯುವ ಸಮೂಹಕ್ಕೆ ಗ್ಯಾರಂಟಿ ನರೇಂದ್ರ ಮೋದಿ. ಅವರನ್ನು ದೇಶದ ಜನತೆ ಮತ್ತೊಮ್ಮೆ ಪ್ರಧಾನಿ ಸ್ಥಾನಕ್ಕೆ ಒಯ್ಯುತ್ತಾರೆಂಬ ಸಂಪೂರ್ಣ ವಿಶ್ವಾಸ ಇದೆ. ಮತದಾರರು ಸುಳ್ಳು, ಅಪಪ್ರಚಾರದ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಇದೆಯೆಂದು ಕ್ಯಾ. ಬ್ರಿಜೇಶ್ ಚೌಟ ನುಡಿದರು.
Bjp Candidate Brijesh Chowta casts vote at car Street school in Mangalore. He came along with his Father and mother. Am very happy to see ladies coming in large number to cast their votes he added.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am