ಬ್ರೇಕಿಂಗ್ ನ್ಯೂಸ್
26-04-24 11:58 am Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ರಥಬೀದಿಯ ಸರಕಾರಿ ಹೆಣ್ಮಕ್ಕಳ ಶಾಲೆಯಲ್ಲಿ ಮತ ಚಲಾಯಿಸಿದರು.
ಕ್ಯಾ. ಬ್ರಿಜೇಶ್ ಚೌಟ ಅವರು ಬೂತ್ ಸಂಖ್ಯೆ 17ರಲ್ಲಿ ತಮ್ಮ ತಂದೆ, ತಾಯಿ ಜೊತೆಗೆ ಮತ ಚಲಾವಣೆಗೆ ಬಂದಿದ್ದರು. ಮತ ಚಲಾಯಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಚೌಟ, ಭಾರತದ ಭವಿಷ್ಯಕ್ಕಾಗಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗಿನಿಂದಲೇ ಮತದಾರರು ಭಾರೀ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ.
ಈ ಬಾರಿ ತಾಯಂದಿರಲ್ಲಿ ಒಂದು ವಿಶೇಷ ವಿನಂತಿ ಮಾಡಿದ್ದೆ. ದೇಶದ ಭವಿಷ್ಯಕ್ಕಾಗಿ, ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲು ತಾಯಂದಿರು ತಮ್ಮ ನಾರಿಶಕ್ತಿಯನ್ನು ತೋರಿಸಲು ಮತಗಟ್ಟೆಗೆ ಮೊದಲು ತೆರಳಿ ಮತ ಹಾಕಬೇಕೆಂದು ಹೇಳಿದ್ದೆ. ಜಿಲ್ಲೆಯಾದ್ಯಂತ ಮಹಿಳಾ ಮತದಾರರು ಭಾರೀ ಖುಷಿಯಲ್ಲಿ ಮತ ಚಲಾವಣೆಗೆ ಬಂದಿದ್ದಾರೆ. ಅಭೂತಪೂರ್ವ ಸ್ಪಂದನೆ ಸಿಗುತ್ತಾ ಇದೆ. ನವದುರ್ಗೆಯರಾಗಿ ಮತ ಚಲಾಯಿಸಿ ಮೋದಿ ಅವರನ್ನು ಆಶೀರ್ವದಿಸಲು ಬಂದಿದ್ದಾರೆ. ಎಲ್ಲ ಕಡೆ ಬೂತ್ ಗಳಲ್ಲಿ ಮಹಿಳೆಯರು ನಾರಿಶಕ್ತಿಯರಾಗಿ ಬಂದು ಮೊದಲ ಮತ ಹಾಕುತ್ತಿರುವ ಮಾಹಿತಿ ನನಗೆ ಸಿಗುತ್ತಿದೆ.
ಈ ದೇಶದ ಅಖಂಡತೆಗೆ ಗ್ಯಾರಂಟಿ ನರೇಂದ್ರ ಮೋದಿ, ಈ ದೇಶದ ಸೈನಿಕರಿಗೆ, ರೈತರಿಗೆ, ಅಭಿವೃದ್ಧಿಗೆ, ದೇಶದ ಭದ್ರತೆಗೆ, ಯುವ ಸಮೂಹಕ್ಕೆ ಗ್ಯಾರಂಟಿ ನರೇಂದ್ರ ಮೋದಿ. ಅವರನ್ನು ದೇಶದ ಜನತೆ ಮತ್ತೊಮ್ಮೆ ಪ್ರಧಾನಿ ಸ್ಥಾನಕ್ಕೆ ಒಯ್ಯುತ್ತಾರೆಂಬ ಸಂಪೂರ್ಣ ವಿಶ್ವಾಸ ಇದೆ. ಮತದಾರರು ಸುಳ್ಳು, ಅಪಪ್ರಚಾರದ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಇದೆಯೆಂದು ಕ್ಯಾ. ಬ್ರಿಜೇಶ್ ಚೌಟ ನುಡಿದರು.
Bjp Candidate Brijesh Chowta casts vote at car Street school in Mangalore. He came along with his Father and mother. Am very happy to see ladies coming in large number to cast their votes he added.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm