ಬ್ರೇಕಿಂಗ್ ನ್ಯೂಸ್
02-12-20 02:29 pm Mangalore Correspondent ಕರಾವಳಿ
ಮಂಗಳೂರು, ಡಿ.2 : ಬೋಟ್ ದುರಂತದಲ್ಲಿ ನಾಪತ್ತೆಯಾಗಿದ್ದ ಎಲ್ಲ ಆರು ಮಂದಿಯ ಮೃತದೇಹಗಳನ್ನು ಸಮುದ್ರದಿಂದ ಮೇಲೆತ್ತಲಾಗಿದೆ. ಬೆಳಗ್ಗೆ ಚಿಂತನ್ ಮತ್ತು ಅನ್ಸಾರ್ ಎಂಬ ಇಬ್ಬರ ಶವ ಪತ್ತೆಯಾಗಿತ್ತು. ಮಧ್ಯಾಹ್ನ ಸುಮಾರಿಗೆ ಜಿಯಾವುಲ್ಲಾ ಮತ್ತು ಹಸೈನಾರ್ ಎಂಬಿಬ್ಬರ ಶವವನ್ನು ನೀರಿನಿಂದ ಮೇಲೆತ್ತಲಾಗಿದೆ.
ಮೃತದೇಹಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಶವಗಳು ಬಾತುಕೊಂಡಿದ್ದು ಮುಖ ಗುರುತು ಹಿಡಿಯಲಾರದಷ್ಟು ಚರ್ಮ ಕಳಚಿ ಹೋಗಿದೆ.
ನಿನ್ನೆ ಸಂಜೆ ಪಾಂಡುರಂಗ ಸುವರ್ಣ ಮತ್ತು ಪ್ರೀತಮ್ ಎಂಬಿಬ್ಬರ ಮೃತದೇಹ ಪತ್ತೆಯಾಗಿತ್ತು. ಕೋಸ್ಟ್ ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ವೇಳೆ ಕಾರ್ಯಾಚರಣೆ ನಿಲ್ಲಿಸಿ, ಮತ್ತೆ ಇಂದು ಬೆಳಗ್ಗಿನಿಂದ ಹುಡುಕಾಟ ನಡೆದಿತ್ತು. ಮೃತರು ಬೋಳಾರ, ಬೊಕ್ಕಪಟ್ಣ ಆಸುಪಾಸಿನ ನಿವಾಸಿಗಳಾಗಿದ್ದರು.
ಮೀನುಗಾರಿಕಾ ಬಂದರಿನ ಬೆಂಗರೆ ಪ್ರದೇಶದ ನೇರಕ್ಕೆ ಸುಮಾರು 15 ನಾಟಿಕಲ್ ಮೈಲು ದೂರದಲ್ಲಿ ಮಂಗಳವಾರ ನಸುಕಿನಲ್ಲಿ ದಾರುಣ ಘಟನೆ ಸಂಭವಿಸಿತ್ತು. ಬೋಳಾರದ ಪ್ರಶಾಂತ್ ಎಂಬವರ ಮಾಲಕತ್ವದ ‘ಶ್ರೀರಕ್ಷಾ’ ಹೆಸರಿನ ಪರ್ಸಿನ್ ಬೋಟು ಸೋಮವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆಗೆ ತೆರಳಿತ್ತು.
ಬೋಟ್ನಲ್ಲಿ ಸುಮಾರು 25 ಮಂದಿ ಮೀನುಗಾರರು ಇದ್ದರು. ದುರಂತದಲ್ಲಿ ಆರು ಮಂದಿ ನಾಪತ್ತೆಯಾಗಿದ್ದರು. 19 ಮಂದಿಯನ್ನು ಇತರೇ ಮೀನುಗಾರಿಕಾ ಬೋಟ್ ಮೂಲಕ ರಕ್ಷಣೆ ಮಾಡಲಾಗಿತ್ತು.
Video:
The Bodies of all four of the fishermen who went missing after their boat capsized in deep-sea on Monday were retrieved during a daylong reduce operation on Wednesday morning.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm