ಬ್ರೇಕಿಂಗ್ ನ್ಯೂಸ್
29-04-24 11:05 am Mangalore Correspondent ಕರಾವಳಿ
ಉಳ್ಳಾಲ,ಎ. 29: ಎರಡು ಪುಟ್ಟ ಮಕ್ಕಳ ತಂದೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಕುಂಪಲ ಹನುಮಾನ್ ನಗರ ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಸ್ವಸಹಾಯ ಸಂಘದ ನಲ್ವತ್ತು ಸಾವಿರ ರೂಪಾಯಿ ಬಾಕಿ ಹಣದ ವಿಚಾರದಲ್ಲಿ ಆತ್ಮಹತ್ಯೆ ನಡೆದಿರುವುದಾಗಿ ಆರೋಪ ಕೇಳಿ ಬಂದಿದೆ.
ಕುಂಪಲ ಹನುಮಾನ್ ನಗರ ನಿವಾಸಿ ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಇಂದು ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.



ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡಿಸಿದ್ದರೆಂದು ಆರೋಪ ಇದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಬರೀ ನಲ್ವತ್ತು ಸಾವಿರ ರೂಪಾಯಿ ವಿಚಾರದಲ್ಲಿ ಆತ್ಮಹತ್ಯೆಗೈದರೆ ಕೋಟಿ ಸಾಲ ವೀರರ ಕತೆಯೇನಾಗಬೇಕು, ಸಾವಿಗೆ ಇನ್ಯಾವುದೋ ಕಾರಣವಿರಬಹುದೆಂದು ಯೋಗೀಶ್ ಆಪ್ತರು ಹೇಳಿದ್ದಾರೆ. ಆರ್ ಬಿಐ ನ ನಿಯಮ ಉಲ್ಲಂಘಿಸಿ ಜನಸಾಮಾನ್ಯರಿಂದ ಚಕ್ರ ಬಡ್ಡಿ ಪೀಕಿಸುತ್ತಿರುವ ಸ್ವಸಹಾಯ ಸಂಘಗಳಿಗೂ ಲಗಾಮು ಹಾಕುವ ಕಾರ್ಯ ನಡೆಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಯೋಗೀಶ್ ಪತ್ನಿ ಆತ್ಮಹತ್ಯೆಗೆ ಯತ್ನ
ಯೋಗೀಶ್ ಸಾವನ್ನಪ್ಪಿದ್ದನ್ನು ಕಂಡ ಪತ್ನಿಯೂ ನೇಣು ಬಿಗಿದು ಆತ್ಮ ಹತ್ಯೆಗೈಯಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರು ಆಕೆಯನ್ನ ತಡೆದು ಸಂತೈಸಿದ್ದಾರೆ. ಮೃತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.
Mangalore 44 year old man in kumpala commits suicide in the toilet. The deceased has been identified as Yogish. Some finance matter has lead him to take this extreme step.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm