ಬ್ರೇಕಿಂಗ್ ನ್ಯೂಸ್
02-12-20 07:19 pm Mangaluru Correspondent ಕರಾವಳಿ
ಉಳ್ಳಾಲ, ಡಿ. 2: ಎರಡು ದಿನಗಳ ಹಿಂದೆ ಉಳ್ಳಾಲ ಬೈಲಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್ ಅಡಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಕೃಷ್ಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.
ಮೂಲತಃ ಉತ್ತರ ಪ್ರದೇಶ ಮೂಲದ, ಉಳ್ಳಾಲಬೈಲು ಬಾಕಿಮಾರ್ ನಲ್ಲಿ ಬಾಡಿಗೆ ನಿವಾಸದಲ್ಲಿರುವ ಶರವಣ್ ಕುಮಾರ್ ಮತ್ತು ಪಿಂಕಿ ದಂಪತಿಗಳ ಕೊನೆಯ ಪುತ್ರ ಕೃಷ್ಣ ಮೃತಪಟ್ಟ ದುರ್ದೈವಿ.
ಸೋಮವಾರ ಸಂಜೆ ತಾಯಿ ಮತ್ತು ಸಹೋದರ ಸಹೋದರಿಯರೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ ಟ್ಯಾಂಕರ್ ಹರಿದ ಪರಿಣಾಮ ಮಗುವಿನ ಸೊಂಟದ ಕೆಳಗಿನ ಎರಡೂ ಕಾಲುಗಳು ತುಂಡಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಮಕ್ಕಳ ಕುಟುಂಬವು ಉಳ್ಳಾಲ ಬೀಚ್ ಗೆ ವಿಹಾರಕ್ಕೆಂದು ತೆರಳಿ ಹಿಂದಿರುಗುವಾಗ ದುರ್ಘಟನೆ ನಡೆದಿತ್ತು. ಬಾಲಕನಿಗೆ ಎರಡು ದಿವಸ ಚಿಕಿತ್ಸೆ ನೀಡಿದರೂ ಯಾವುದೇ ಫಲ ನೀಡದ ಹಿನ್ನೆಲೆ ಇಂದು ಸಂಜೆ ಕೃಷ್ಣ ಮೃತಪಟ್ಟಿದ್ದಾನೆ.
ಬಾಡಿಗೆ ಮನೆ ಬದಲಿಸಲು ತಯಾರಾಗಿದ್ದರು;
ಉತ್ತರ ಪ್ರದೇಶ ಮೂಲದ ಶರವಣ್, ಪಿಂಕಿ ದಂಪತಿಗಳಿಗೆ 5 ಮಕ್ಕಳು. ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದರು. ತಂದೆ ಮಂಗಳೂರಿನಲ್ಲಿ ಪಾನ್ ಸ್ಟಾಲ್ ಹೊಂದಿದ್ದು ತೀರಾ ಬಡ ಕುಟುಂಬ. ಕುಟುಂಬ ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲೇ ನೆಲೆಸಿದ್ದು ಈ ವಾರ ಉಳ್ಳಾಲದ ಬೈಲ್ ಬಾಕಿಮಾರ್ ಮನೆಯಿಂದ ಬೇರೆಡೆ ಬಿಡಾರ ಸ್ಥಳಾಂತರಕ್ಕೆ ಸಿದ್ಧತೆ ನಡೆಸಿದ್ದರೆನ್ನಲಾಗಿದೆ.
ಮೃತದೇಹವನ್ನು ದಕ್ಷಿಣ ಸಂಚಾರಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Also Read: ಉಳ್ಳಾಲ : ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಹರಿದ ಟ್ಯಾಂಕರ್ !!
Young little boy who was hit by a water tanker in Ullal and who was in serious condition has breathed his last in the private hospital at Ullal.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm