ಬ್ರೇಕಿಂಗ್ ನ್ಯೂಸ್
02-12-20 07:19 pm Mangaluru Correspondent ಕರಾವಳಿ
ಉಳ್ಳಾಲ, ಡಿ. 2: ಎರಡು ದಿನಗಳ ಹಿಂದೆ ಉಳ್ಳಾಲ ಬೈಲಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್ ಅಡಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಕೃಷ್ಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಮೂಲತಃ ಉತ್ತರ ಪ್ರದೇಶ ಮೂಲದ, ಉಳ್ಳಾಲಬೈಲು ಬಾಕಿಮಾರ್ ನಲ್ಲಿ ಬಾಡಿಗೆ ನಿವಾಸದಲ್ಲಿರುವ ಶರವಣ್ ಕುಮಾರ್ ಮತ್ತು ಪಿಂಕಿ ದಂಪತಿಗಳ ಕೊನೆಯ ಪುತ್ರ ಕೃಷ್ಣ ಮೃತಪಟ್ಟ ದುರ್ದೈವಿ.
ಸೋಮವಾರ ಸಂಜೆ ತಾಯಿ ಮತ್ತು ಸಹೋದರ ಸಹೋದರಿಯರೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ ಟ್ಯಾಂಕರ್ ಹರಿದ ಪರಿಣಾಮ ಮಗುವಿನ ಸೊಂಟದ ಕೆಳಗಿನ ಎರಡೂ ಕಾಲುಗಳು ತುಂಡಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಮಕ್ಕಳ ಕುಟುಂಬವು ಉಳ್ಳಾಲ ಬೀಚ್ ಗೆ ವಿಹಾರಕ್ಕೆಂದು ತೆರಳಿ ಹಿಂದಿರುಗುವಾಗ ದುರ್ಘಟನೆ ನಡೆದಿತ್ತು. ಬಾಲಕನಿಗೆ ಎರಡು ದಿವಸ ಚಿಕಿತ್ಸೆ ನೀಡಿದರೂ ಯಾವುದೇ ಫಲ ನೀಡದ ಹಿನ್ನೆಲೆ ಇಂದು ಸಂಜೆ ಕೃಷ್ಣ ಮೃತಪಟ್ಟಿದ್ದಾನೆ.



ಬಾಡಿಗೆ ಮನೆ ಬದಲಿಸಲು ತಯಾರಾಗಿದ್ದರು;
ಉತ್ತರ ಪ್ರದೇಶ ಮೂಲದ ಶರವಣ್, ಪಿಂಕಿ ದಂಪತಿಗಳಿಗೆ 5 ಮಕ್ಕಳು. ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದರು. ತಂದೆ ಮಂಗಳೂರಿನಲ್ಲಿ ಪಾನ್ ಸ್ಟಾಲ್ ಹೊಂದಿದ್ದು ತೀರಾ ಬಡ ಕುಟುಂಬ. ಕುಟುಂಬ ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲೇ ನೆಲೆಸಿದ್ದು ಈ ವಾರ ಉಳ್ಳಾಲದ ಬೈಲ್ ಬಾಕಿಮಾರ್ ಮನೆಯಿಂದ ಬೇರೆಡೆ ಬಿಡಾರ ಸ್ಥಳಾಂತರಕ್ಕೆ ಸಿದ್ಧತೆ ನಡೆಸಿದ್ದರೆನ್ನಲಾಗಿದೆ.
ಮೃತದೇಹವನ್ನು ದಕ್ಷಿಣ ಸಂಚಾರಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Also Read: ಉಳ್ಳಾಲ : ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಹರಿದ ಟ್ಯಾಂಕರ್ !!
Young little boy who was hit by a water tanker in Ullal and who was in serious condition has breathed his last in the private hospital at Ullal.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm