ಬ್ರೇಕಿಂಗ್ ನ್ಯೂಸ್
02-12-20 07:19 pm Mangaluru Correspondent ಕರಾವಳಿ
ಉಳ್ಳಾಲ, ಡಿ. 2: ಎರಡು ದಿನಗಳ ಹಿಂದೆ ಉಳ್ಳಾಲ ಬೈಲಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್ ಅಡಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಕೃಷ್ಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಮೂಲತಃ ಉತ್ತರ ಪ್ರದೇಶ ಮೂಲದ, ಉಳ್ಳಾಲಬೈಲು ಬಾಕಿಮಾರ್ ನಲ್ಲಿ ಬಾಡಿಗೆ ನಿವಾಸದಲ್ಲಿರುವ ಶರವಣ್ ಕುಮಾರ್ ಮತ್ತು ಪಿಂಕಿ ದಂಪತಿಗಳ ಕೊನೆಯ ಪುತ್ರ ಕೃಷ್ಣ ಮೃತಪಟ್ಟ ದುರ್ದೈವಿ.
ಸೋಮವಾರ ಸಂಜೆ ತಾಯಿ ಮತ್ತು ಸಹೋದರ ಸಹೋದರಿಯರೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ ಟ್ಯಾಂಕರ್ ಹರಿದ ಪರಿಣಾಮ ಮಗುವಿನ ಸೊಂಟದ ಕೆಳಗಿನ ಎರಡೂ ಕಾಲುಗಳು ತುಂಡಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಮಕ್ಕಳ ಕುಟುಂಬವು ಉಳ್ಳಾಲ ಬೀಚ್ ಗೆ ವಿಹಾರಕ್ಕೆಂದು ತೆರಳಿ ಹಿಂದಿರುಗುವಾಗ ದುರ್ಘಟನೆ ನಡೆದಿತ್ತು. ಬಾಲಕನಿಗೆ ಎರಡು ದಿವಸ ಚಿಕಿತ್ಸೆ ನೀಡಿದರೂ ಯಾವುದೇ ಫಲ ನೀಡದ ಹಿನ್ನೆಲೆ ಇಂದು ಸಂಜೆ ಕೃಷ್ಣ ಮೃತಪಟ್ಟಿದ್ದಾನೆ.



ಬಾಡಿಗೆ ಮನೆ ಬದಲಿಸಲು ತಯಾರಾಗಿದ್ದರು;
ಉತ್ತರ ಪ್ರದೇಶ ಮೂಲದ ಶರವಣ್, ಪಿಂಕಿ ದಂಪತಿಗಳಿಗೆ 5 ಮಕ್ಕಳು. ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದರು. ತಂದೆ ಮಂಗಳೂರಿನಲ್ಲಿ ಪಾನ್ ಸ್ಟಾಲ್ ಹೊಂದಿದ್ದು ತೀರಾ ಬಡ ಕುಟುಂಬ. ಕುಟುಂಬ ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲೇ ನೆಲೆಸಿದ್ದು ಈ ವಾರ ಉಳ್ಳಾಲದ ಬೈಲ್ ಬಾಕಿಮಾರ್ ಮನೆಯಿಂದ ಬೇರೆಡೆ ಬಿಡಾರ ಸ್ಥಳಾಂತರಕ್ಕೆ ಸಿದ್ಧತೆ ನಡೆಸಿದ್ದರೆನ್ನಲಾಗಿದೆ.
ಮೃತದೇಹವನ್ನು ದಕ್ಷಿಣ ಸಂಚಾರಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Also Read: ಉಳ್ಳಾಲ : ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಹರಿದ ಟ್ಯಾಂಕರ್ !!
Young little boy who was hit by a water tanker in Ullal and who was in serious condition has breathed his last in the private hospital at Ullal.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am