ಬ್ರೇಕಿಂಗ್ ನ್ಯೂಸ್
02-12-20 09:30 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮಂಗಳೂರಿನ ಮೀನುಗಾರಿಕಾ ಬೋಟ್ ದುರಂತದಲ್ಲಿ ಮಡಿದ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರಕಾರದಿಂದ ತಲಾ ಆರು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ಬಗ್ಗೆ ಟ್ವೀಟ್ ಮಾಡಿ ಸಿಎಂ ಯಡಿಯೂರಪ್ಪ ಸೂಚನೆಯಂತೆ ತಲಾ ಆರು ಲಕ್ಷ ಬಿಡುಗಡೆಗೊಳಿಸಿದ್ದಾಗಿ ತಿಳಿಸಿದ್ದಾರೆ. ಮತ್ತಷ್ಟು ನೆರವು ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.
ಇಂದು ಮಧ್ಯಾಹ್ನ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೃತರ ಕುಟುಂಬದವರು ಮತ್ತು ಮೀನುಗಾರ ಮುಖಂಡರನ್ನು ಭೇಟಿಯಾಗಿದ್ದ ಸಚಿವ ಶ್ರೀನಿವಾಸ ಪೂಜಾರಿ, ಗರಿಷ್ಠ ಪರಿಹಾರದ ಭರವಸೆ ನೀಡಿದ್ದರು. ಅಲ್ಲದೆ, ನಾಳೆ ಸಂಜೆಯ ವೇಳೆಗೆ ಪರಿಹಾರದ ಬಗ್ಗೆ ತಿಳಿಸುವುದಾಗಿ ಹೇಳಿದ್ದರು. ಇದಲ್ಲದೆ, ಕಾರ್ಯಾಚರಣೆಯಲ್ಲಿ ಕೋಸ್ಟ್ ಗಾರ್ಡ್ ಮತ್ತು ಜಿಲ್ಲಾಡಳಿತದ ಲೋಪ ಆಗಿರುವ ಬಗ್ಗೆ ವರದಿ ಪಡೆದು ತನಿಖೆ ನಡೆಸುವುದಾಗಿ ತಿಳಿಸಿದ್ದರು.
ದುರಂತದಲ್ಲಿ ಆರು ಮಂದಿ ಮೀನುಗಾರರು ಮೃತಪಟ್ಟಿದ್ದು ಬೋಟಿನಲ್ಲಿದ್ದ 19 ಮಂದಿಯನ್ನು ರಕ್ಷಣೆ ಮಾಡಲಾಗಿತ್ತು. ಮಂಗಳವಾರ ನಸುಕಿನಲ್ಲಿ 25 ಜನರಿದ್ದ ಪರ್ಸಿನ್ ಬೋಟ್ ದುರಂತಕ್ಕೀಡಾಗಿತ್ತು.
ಮಂಗಳೂರಿನ ಪಡುಕಡಲಿನಲ್ಲಿ ಮೀನುಗಾರಿಕೆ ದೋಣಿ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಮುಖ್ಯಮಂತ್ರಿ ಶ್ರೀ @BSYBJP ನಿರ್ದೇಶನದ ಮೇರೆಗೆ ತಲಾ 6 ಲಕ್ಷ ರೂ. ಬಿಡುಗಡೆಗೊಳಿಸಲಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದ ಪರವಾಗಿ ಸಾಂತ್ವಾನ ಹೇಳುತ್ತಾ ನೊಂದ ಕುಟುಂಬಗಳ ಪರವಾಗಿ, ಮತ್ತಷ್ಟು ನೆರವಿಗಾಗಿ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ.
— Kota Shrinivas Poojari (@KotasBJP) December 2, 2020
District in-charge minister Kota Srinivas Poojary said that Rs six lac ex-gratia is released to the family of each fisherman who died in the tragedy when the huge boat in which they went for fishing got capsized at around 15 nautical miles from Bunder port of the city.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 08:28 pm
HK News Desk
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm