ಬ್ರೇಕಿಂಗ್ ನ್ಯೂಸ್
02-12-20 09:30 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮಂಗಳೂರಿನ ಮೀನುಗಾರಿಕಾ ಬೋಟ್ ದುರಂತದಲ್ಲಿ ಮಡಿದ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರಕಾರದಿಂದ ತಲಾ ಆರು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ಬಗ್ಗೆ ಟ್ವೀಟ್ ಮಾಡಿ ಸಿಎಂ ಯಡಿಯೂರಪ್ಪ ಸೂಚನೆಯಂತೆ ತಲಾ ಆರು ಲಕ್ಷ ಬಿಡುಗಡೆಗೊಳಿಸಿದ್ದಾಗಿ ತಿಳಿಸಿದ್ದಾರೆ. ಮತ್ತಷ್ಟು ನೆರವು ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.


ಇಂದು ಮಧ್ಯಾಹ್ನ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೃತರ ಕುಟುಂಬದವರು ಮತ್ತು ಮೀನುಗಾರ ಮುಖಂಡರನ್ನು ಭೇಟಿಯಾಗಿದ್ದ ಸಚಿವ ಶ್ರೀನಿವಾಸ ಪೂಜಾರಿ, ಗರಿಷ್ಠ ಪರಿಹಾರದ ಭರವಸೆ ನೀಡಿದ್ದರು. ಅಲ್ಲದೆ, ನಾಳೆ ಸಂಜೆಯ ವೇಳೆಗೆ ಪರಿಹಾರದ ಬಗ್ಗೆ ತಿಳಿಸುವುದಾಗಿ ಹೇಳಿದ್ದರು. ಇದಲ್ಲದೆ, ಕಾರ್ಯಾಚರಣೆಯಲ್ಲಿ ಕೋಸ್ಟ್ ಗಾರ್ಡ್ ಮತ್ತು ಜಿಲ್ಲಾಡಳಿತದ ಲೋಪ ಆಗಿರುವ ಬಗ್ಗೆ ವರದಿ ಪಡೆದು ತನಿಖೆ ನಡೆಸುವುದಾಗಿ ತಿಳಿಸಿದ್ದರು.
ದುರಂತದಲ್ಲಿ ಆರು ಮಂದಿ ಮೀನುಗಾರರು ಮೃತಪಟ್ಟಿದ್ದು ಬೋಟಿನಲ್ಲಿದ್ದ 19 ಮಂದಿಯನ್ನು ರಕ್ಷಣೆ ಮಾಡಲಾಗಿತ್ತು. ಮಂಗಳವಾರ ನಸುಕಿನಲ್ಲಿ 25 ಜನರಿದ್ದ ಪರ್ಸಿನ್ ಬೋಟ್ ದುರಂತಕ್ಕೀಡಾಗಿತ್ತು.
ಮಂಗಳೂರಿನ ಪಡುಕಡಲಿನಲ್ಲಿ ಮೀನುಗಾರಿಕೆ ದೋಣಿ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಮುಖ್ಯಮಂತ್ರಿ ಶ್ರೀ @BSYBJP ನಿರ್ದೇಶನದ ಮೇರೆಗೆ ತಲಾ 6 ಲಕ್ಷ ರೂ. ಬಿಡುಗಡೆಗೊಳಿಸಲಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದ ಪರವಾಗಿ ಸಾಂತ್ವಾನ ಹೇಳುತ್ತಾ ನೊಂದ ಕುಟುಂಬಗಳ ಪರವಾಗಿ, ಮತ್ತಷ್ಟು ನೆರವಿಗಾಗಿ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ.
— Kota Shrinivas Poojari (@KotasBJP) December 2, 2020
District in-charge minister Kota Srinivas Poojary said that Rs six lac ex-gratia is released to the family of each fisherman who died in the tragedy when the huge boat in which they went for fishing got capsized at around 15 nautical miles from Bunder port of the city.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm