ಬ್ರೇಕಿಂಗ್ ನ್ಯೂಸ್
04-05-24 08:45 pm Mangalore Correspondent ಕರಾವಳಿ
ಪುತ್ತೂರು, ಮೇ.4: ಎಪಿಎಂಸಿ ಸಹಾಯಕ ಕಾರ್ಯದರ್ಶಿಯೊಬ್ಬರು ತನ್ನ ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಅಲ್ಲಿಯೇ ಕೆಲಸಕ್ಕೆ ಹಾಜರಾದ ದಿನವೇ ಅಮಾನತುಗೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಆದೇಶ ಹೊರಡಿಸಿದ್ದಾರೆ.
ರಾಮಚಂದ್ರ ಅವರು ತರಕಾರಿ ವ್ಯಾಪಾರಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ. ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ ಎಂದು ಪುತ್ತೂರು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜನವರಿ 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.
ದೂರಿನ ತನಿಖೆಗಾಗಿ ಅಧಿಕಾರಿಗಳ ತಂಡ ರಚಿಸಲಾಗಿತ್ತು. ಈ ಮಧ್ಯೆ ರಾಮಚಂದ್ರ ಅವರನ್ನು ಜ.16ರಿಂದ ಎರಡು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಆದೇಶ ಮಾಡಿದ್ದರು. ಆನಂತರ, ಅವರನ್ನು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖಾಲಿಯಿದ್ದ ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ವರ್ಗಾಯಿಸಿ ಕೃಷಿ ಮಾರಾಟ ಇಲಾಖೆ ಆದೇಶ ಮಾಡಿತ್ತು. ಆದರೆ, ರಾಮಚಂದ್ರ ಅವರು ರಾಯಚೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗದೆ ವರ್ಗಾವಣೆ ಆದೇಶದ ವಿರುದ್ಧ ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯಕ್ಕೆ (ಕೆಎಟಿಗೆ) ದೂರು ಸಲ್ಲಿಸಿದ್ದರು. ತನ್ನ ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ಪಡೆಯುತ್ತಲೇ ಗುರುವಾರ ಬೆಳಗ್ಗೆ ಅವರು ಪುತ್ತೂರಿನಲ್ಲೇ ಎಪಿಎಂಸಿ ಸಹಾಯಕ ಕಾರ್ಯದರ್ಶಿ ಹುದ್ದೆಯ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಕರ್ತವ್ಯಕ್ಕೆ ಹಾಜರಾದ ಕೆಲ ಹೊತ್ತಿನಲ್ಲೇ ಮಧ್ಯಾಹ್ನ 12 ಗಂಟೆ ವೇಳೆಗೆ ಕರ್ನಾಟಕ ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕರು ಅಮಾನತು ಮಾಡಿದ್ದಾರೆ. ಕರ್ತವ್ಯ ಲೋಪದ ಆರೋಪದಲ್ಲಿ ಇಲಾಖಾ ತನಿಖೆ ನಡೆಯುತ್ತಿರುವಾಗಲೇ ಅದೇ ಜಾಗಕ್ಕೆ ಬಂದು ಕರ್ತವ್ಯಕ್ಕೆ ಹಾಜರಾಗಿದ್ದಕ್ಕೆ ಪ್ರತಿಯಾಗಿ ಸಸ್ಪೆಂಡ್ ಮಾಡಿದ್ದಾರೆ.
Vegetable vendor complaint, apmc officer suspended in puttur. The suspended officer is Ramachandra.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm