ಬ್ರೇಕಿಂಗ್ ನ್ಯೂಸ್
05-05-24 01:26 pm Mangalore Correspondent ಕರಾವಳಿ
ಉಳ್ಳಾಲ, ಮೇ.5: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದ್ದು, ವಿದ್ಯುತ್ ಕಂಬದ ಸಲಾಕೆಗಳು ಕಾರೊಳಗೆ ನುಗ್ಗಿದರೂ ಕಾರಲ್ಲಿದ್ದ ವೈದ್ಯರಿಬ್ಬರು ಪವಾಡ ಸದೃಶ ಅಪಾಯದಿಂದ ಪಾರಾಗಿರುವ ಘಟನೆ ಕುತ್ತಾರು ಸಮೀಪದ ಬಬ್ಬುಕಟ್ಟೆ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ತಡರಾತ್ರಿ ತೊಕ್ಕೊಟ್ಟಿನಿಂದ ಕುತ್ತಾರು ಕಡೆ ತೆರಳುತ್ತಿದ್ದ ಪೋಲೊ ಕಾರು ಬಬ್ಬುಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಡಿದು ಪಲ್ಟಿಯಾಗಿದೆ. ಕಾರಲ್ಲಿದ್ದ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕೇರಳ ಮೂಲದ ವೈದ್ಯರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವು ಹೊಂಡದಿಂದಲೇ ಹೊರ ಬಂದು ಮುರಿದು ಬಿದ್ದಿದೆ. ಕಂಬದ ಒಂದು ತುದಿಯು ಸಲಾಕೆ ಸಮೇತ ಕಾರೊಳಗೆ ಹೊಕ್ಕಿದರೂ ಚಾಲಕ ಪಾರಾಗಿದ್ದಾನೆ.
ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಕಡಿತ
ಅಪಘಾತದಿಂದ ವಿದ್ಯುತ್ ಕಂಬ ಮುರಿದಿದ್ದು ಮೆಸ್ಕಾಂ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಇಂದು ಬೆಳಗ್ಗೆ ಕಾರನ್ನ ತೆರವುಗೊಳಿಸುವ ಕೆಲಸ ನಡೆದಿದ್ದು ಮೆಸ್ಕಾಂ ಸಿಬ್ಬಂದಿ ಕ್ರೇನ್ ಮೂಲಕ ವಿದ್ಯುತ್ ಕಂಬ ತೆರವುಗೊಳಿಸಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಅಪಘಾತದಿಂದ ಸ್ಥಳೀಯರು ಕರೆಂಟ್ ಇಲ್ಲದೆ ಪರದಾಡುವಂತಾಗಿದೆ. ವಿದ್ಯುತ್ ಕಂಬಕ್ಕೆ ಹಾನಿಯಾಗಿರುವುದರಿಂದ ಕಾರು ಮಾಲೀಕ ಮೆಸ್ಕಾಂಗೆ ದಂಡ ಪಾವತಿ ಮಾಡಲು ಒಪ್ಪಿಕೊಂಡಿದ್ದಾರಂತೆ. ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.
ಬಬ್ಬುಕಟ್ಟೆ ಅಪಘಾತ ವಲಯ
ಕಾರು ನಿನ್ನೆ ತಡರಾತ್ರಿ ವೇಳೆ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಸ್ಥಳೀಯರೇ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಪ್ರದೇಶದಲ್ಲಿ ಹಲವು ಅಪಘಾತಗಳು ನಡೆದಿವೆ. ಇಲ್ಲಿ ಶಾಲಾ ಕಾಲೇಜುಗಳು ಇರುವುದರಿಂದ ರಸ್ತೆಗೆ ಹಂಪ್ಸ್ ಅಳವಡಿಸುವ ಅವಶ್ಯಕತೆ ಇದೆ. ಮುಂದೆ ಅಪಘಾತಗಳು ನಡೆಯದಂತೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Accident in Mangalore, polo car rams electric pole near Thokottu after losing control over speed.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm