ಬ್ರೇಕಿಂಗ್ ನ್ಯೂಸ್
05-05-24 01:26 pm Mangalore Correspondent ಕರಾವಳಿ
ಉಳ್ಳಾಲ, ಮೇ.5: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದ್ದು, ವಿದ್ಯುತ್ ಕಂಬದ ಸಲಾಕೆಗಳು ಕಾರೊಳಗೆ ನುಗ್ಗಿದರೂ ಕಾರಲ್ಲಿದ್ದ ವೈದ್ಯರಿಬ್ಬರು ಪವಾಡ ಸದೃಶ ಅಪಾಯದಿಂದ ಪಾರಾಗಿರುವ ಘಟನೆ ಕುತ್ತಾರು ಸಮೀಪದ ಬಬ್ಬುಕಟ್ಟೆ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ತಡರಾತ್ರಿ ತೊಕ್ಕೊಟ್ಟಿನಿಂದ ಕುತ್ತಾರು ಕಡೆ ತೆರಳುತ್ತಿದ್ದ ಪೋಲೊ ಕಾರು ಬಬ್ಬುಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಡಿದು ಪಲ್ಟಿಯಾಗಿದೆ. ಕಾರಲ್ಲಿದ್ದ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕೇರಳ ಮೂಲದ ವೈದ್ಯರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವು ಹೊಂಡದಿಂದಲೇ ಹೊರ ಬಂದು ಮುರಿದು ಬಿದ್ದಿದೆ. ಕಂಬದ ಒಂದು ತುದಿಯು ಸಲಾಕೆ ಸಮೇತ ಕಾರೊಳಗೆ ಹೊಕ್ಕಿದರೂ ಚಾಲಕ ಪಾರಾಗಿದ್ದಾನೆ.


ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಕಡಿತ
ಅಪಘಾತದಿಂದ ವಿದ್ಯುತ್ ಕಂಬ ಮುರಿದಿದ್ದು ಮೆಸ್ಕಾಂ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಇಂದು ಬೆಳಗ್ಗೆ ಕಾರನ್ನ ತೆರವುಗೊಳಿಸುವ ಕೆಲಸ ನಡೆದಿದ್ದು ಮೆಸ್ಕಾಂ ಸಿಬ್ಬಂದಿ ಕ್ರೇನ್ ಮೂಲಕ ವಿದ್ಯುತ್ ಕಂಬ ತೆರವುಗೊಳಿಸಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಅಪಘಾತದಿಂದ ಸ್ಥಳೀಯರು ಕರೆಂಟ್ ಇಲ್ಲದೆ ಪರದಾಡುವಂತಾಗಿದೆ. ವಿದ್ಯುತ್ ಕಂಬಕ್ಕೆ ಹಾನಿಯಾಗಿರುವುದರಿಂದ ಕಾರು ಮಾಲೀಕ ಮೆಸ್ಕಾಂಗೆ ದಂಡ ಪಾವತಿ ಮಾಡಲು ಒಪ್ಪಿಕೊಂಡಿದ್ದಾರಂತೆ. ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.
ಬಬ್ಬುಕಟ್ಟೆ ಅಪಘಾತ ವಲಯ
ಕಾರು ನಿನ್ನೆ ತಡರಾತ್ರಿ ವೇಳೆ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಸ್ಥಳೀಯರೇ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಪ್ರದೇಶದಲ್ಲಿ ಹಲವು ಅಪಘಾತಗಳು ನಡೆದಿವೆ. ಇಲ್ಲಿ ಶಾಲಾ ಕಾಲೇಜುಗಳು ಇರುವುದರಿಂದ ರಸ್ತೆಗೆ ಹಂಪ್ಸ್ ಅಳವಡಿಸುವ ಅವಶ್ಯಕತೆ ಇದೆ. ಮುಂದೆ ಅಪಘಾತಗಳು ನಡೆಯದಂತೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Accident in Mangalore, polo car rams electric pole near Thokottu after losing control over speed.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm