ಬ್ರೇಕಿಂಗ್ ನ್ಯೂಸ್
05-05-24 01:26 pm Mangalore Correspondent ಕರಾವಳಿ
ಉಳ್ಳಾಲ, ಮೇ.5: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದ್ದು, ವಿದ್ಯುತ್ ಕಂಬದ ಸಲಾಕೆಗಳು ಕಾರೊಳಗೆ ನುಗ್ಗಿದರೂ ಕಾರಲ್ಲಿದ್ದ ವೈದ್ಯರಿಬ್ಬರು ಪವಾಡ ಸದೃಶ ಅಪಾಯದಿಂದ ಪಾರಾಗಿರುವ ಘಟನೆ ಕುತ್ತಾರು ಸಮೀಪದ ಬಬ್ಬುಕಟ್ಟೆ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ತಡರಾತ್ರಿ ತೊಕ್ಕೊಟ್ಟಿನಿಂದ ಕುತ್ತಾರು ಕಡೆ ತೆರಳುತ್ತಿದ್ದ ಪೋಲೊ ಕಾರು ಬಬ್ಬುಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಡಿದು ಪಲ್ಟಿಯಾಗಿದೆ. ಕಾರಲ್ಲಿದ್ದ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕೇರಳ ಮೂಲದ ವೈದ್ಯರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವು ಹೊಂಡದಿಂದಲೇ ಹೊರ ಬಂದು ಮುರಿದು ಬಿದ್ದಿದೆ. ಕಂಬದ ಒಂದು ತುದಿಯು ಸಲಾಕೆ ಸಮೇತ ಕಾರೊಳಗೆ ಹೊಕ್ಕಿದರೂ ಚಾಲಕ ಪಾರಾಗಿದ್ದಾನೆ.


ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಕಡಿತ
ಅಪಘಾತದಿಂದ ವಿದ್ಯುತ್ ಕಂಬ ಮುರಿದಿದ್ದು ಮೆಸ್ಕಾಂ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಇಂದು ಬೆಳಗ್ಗೆ ಕಾರನ್ನ ತೆರವುಗೊಳಿಸುವ ಕೆಲಸ ನಡೆದಿದ್ದು ಮೆಸ್ಕಾಂ ಸಿಬ್ಬಂದಿ ಕ್ರೇನ್ ಮೂಲಕ ವಿದ್ಯುತ್ ಕಂಬ ತೆರವುಗೊಳಿಸಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಅಪಘಾತದಿಂದ ಸ್ಥಳೀಯರು ಕರೆಂಟ್ ಇಲ್ಲದೆ ಪರದಾಡುವಂತಾಗಿದೆ. ವಿದ್ಯುತ್ ಕಂಬಕ್ಕೆ ಹಾನಿಯಾಗಿರುವುದರಿಂದ ಕಾರು ಮಾಲೀಕ ಮೆಸ್ಕಾಂಗೆ ದಂಡ ಪಾವತಿ ಮಾಡಲು ಒಪ್ಪಿಕೊಂಡಿದ್ದಾರಂತೆ. ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.
ಬಬ್ಬುಕಟ್ಟೆ ಅಪಘಾತ ವಲಯ
ಕಾರು ನಿನ್ನೆ ತಡರಾತ್ರಿ ವೇಳೆ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಸ್ಥಳೀಯರೇ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಪ್ರದೇಶದಲ್ಲಿ ಹಲವು ಅಪಘಾತಗಳು ನಡೆದಿವೆ. ಇಲ್ಲಿ ಶಾಲಾ ಕಾಲೇಜುಗಳು ಇರುವುದರಿಂದ ರಸ್ತೆಗೆ ಹಂಪ್ಸ್ ಅಳವಡಿಸುವ ಅವಶ್ಯಕತೆ ಇದೆ. ಮುಂದೆ ಅಪಘಾತಗಳು ನಡೆಯದಂತೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Accident in Mangalore, polo car rams electric pole near Thokottu after losing control over speed.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am