ಬ್ರೇಕಿಂಗ್ ನ್ಯೂಸ್
05-05-24 08:53 pm Mangalore Correspondent ಕರಾವಳಿ
ಉಳ್ಳಾಲ, ಮೇ.5: ಕೋಟೆಕಾರು ಗ್ರಾಮದ ಕಾರಣಿಕದ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಕೋಟೆಕಾರಿನ ತಾರಿಪಡ್ಪು ವೈದ್ಯನಾಥ ಕ್ಷೇತ್ರದ ವಲಸರಿ ಜಾತ್ರೆಯಲ್ಲಿ ಕೊಂಡಾಣ ಕ್ಷೇತ್ರದ ಭಂಡಾರಮನೆ ಪುಡಿಗೈದ ಪ್ರಕರಣದ ಐವರು ಆರೋಪಿಗಳು ಭಾಗವಹಿಸಬಾರದೆಂದು ಜಿಲ್ಲಾ ಧರ್ಮದಾಯ ಧತ್ತಿ ಇಲಾಖೆಯ ಸಹಾಯ ಆಯುಕ್ತರು ನಿರ್ಬಂಧ ಹೇರಿದ್ದು, ಅಹಿತಕರ ಘಟನೆ ನಡೆಯದಂತೆ ಜಾತ್ರೆಗೆ ಬಿಗು ಪೊಲೀಸ್ ಬಂದೋಬಸ್ತು ಕಲ್ಪಿಸಲಾಗಿದೆ.
ಕೊಂಡಾಣ ಪಿಲಿಚಾಮುಂಡಿ, ಬಂಟ, ವೈದ್ಯನಾಥ, ಮುಂಡತ್ತಾಯ ಕ್ಷೇತ್ರದ ಗುರಿಕಾರರೆನ್ನುವ, ಕ್ಷೇತ್ರದ ನೂತನ ಭಂಡಾರ ಮನೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿ ಮುತ್ತಣ್ಣ ಶೆಟ್ಟಿ ಮತ್ತು ಸಹವರ್ತಿಗಳಾದ ಧೀರಜ್, ಶಿವರಾಜ್ ಶೆಟ್ಟಿ, ನವೀನ್ ಕುಮಾರ್, ಶಿವಪ್ರಸಾದ್ ಆಚಾರ್ಯ ಎಂಬ ಐವರು ತಾರಿಪಡ್ಪುವಿನ ವೈದ್ಯನಾಥ ಕ್ಷೇತ್ರದ ವಲಸರಿ ಜಾತ್ರೆಯಲ್ಲಿ ಭಾಗವಹಿಸದಂತೆ ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ಧತ್ತಿ ಇಲಾಖೆಯ ಸಹಾಯಕ ಆಯುಕ್ತರು ನಿರ್ಬಂಧ ಹೇರಿದ್ದಾರೆ.



ಕಳೆದ ಮಾರ್ಚ್ ತಿಂಗಳ 3ರ ಭಾನುವಾರ ಬೆಳಗ್ಗೆ ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣ ಹಂತದಲ್ಲಿದ್ದ ನೂತನ ಭಂಡಾರ ಮನೆಯನ್ನ ಕಿಡಿಗೇಡಿಗಳು ಜೆಸಿಬಿ ಬಳಸಿ ಏಕಾಏಕಿ ಕೆಡವಿ ಹಾಕಿದ್ದರು. ಉಳ್ಳಾಲ ಪೊಲೀಸರು ಆರೋಪಿಗಳಾದ ಮುತ್ತಣ್ಣ ಶೆಟ್ಟಿ, ಧೀರಜ್, ಶಿವರಾಜ್ ಶೆಟ್ಟಿ, ಶಿವಪ್ರಸಾದ್ ಆಚಾರ್ಯ, ನವೀನ್ ಕುಮಾರ್ ಎಂಬುವವರನ್ನು ಬಂಧಿಸಿದ್ದರು. ಆರೋಪಿಗಳು ಪೊಲೀಸರ ವಿಚಾರಣೆಯಲ್ಲಿ ತಾವೇ ದುಷ್ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದರು. ಕೊಂಡಾಣ ಕ್ಷೇತ್ರವು 16 ಗುರಿಕಾರರನ್ನು ಹೊಂದಿದೆ. ಅನಧಿಕೃತ ಮತ್ತು ಯಾವುದೇ ಅನುಮತಿಯಿಲ್ಲದೆ ನಿರ್ಮಿಸುತ್ತಿರುವ ಹೊಸ ಭಂಡಾರ ಮನೆಗೆ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಗುರಿಕಾರರು ಒಪ್ಪಿಗೆ ನೀಡಲಿಲ್ಲ. ಹೀಗಾಗಿ ಕಟ್ಟಡವನ್ನು ತಾವೇ ಕೆಡವಲು ನಿರ್ಧರಿಸಿರುವುದಾಗಿ ಬಂಧಿತ ಆರೋಪಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದರು.
ಭಾನುವಾರ ಕೊಂಡಾಣ ಕ್ಷೇತ್ರದ ಅಧೀನಕ್ಕೊಳಪಟ್ಟ ಕೋಟೆಕಾರಿನ ತಾರಿಪಡ್ಪು ವೈದ್ಯನಾಥ ಕ್ಷೇತ್ರದಲ್ಲಿ ವಲಸರಿ ಜಾತ್ರೆ ನಡೆದಿದೆ. ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ಐವರು ಆರೋಪಿಗಳು ವಲಸರಿ ಜಾತ್ರೆ ಸೇರಿದಂತೆ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಜಾತ್ರೆ, ಉತ್ಸವಗಳಲ್ಲಿ ಭಾಗವಹಿಸದಂತೆ ಜಿಲ್ಲಾ ಧರ್ಮದಾಯ ಧತ್ತಿ ಇಲಾಖೆಯ ಸಹಾಯಕ ಆಯುಕ್ತರು ಆರೋಪಿಗಳಿಗೆ ಶನಿವಾರ ಪ್ರತ್ಯೇಕವಾಗಿ ನೋಟೀಸು ಜಾರಿ ಮಾಡಿದ್ದರು. ಹೀಗಾಗಿ ವೈದ್ಯನಾಥನ ವಲಸರಿ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗು ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ.
Mangalore Kotekar Vaidyanatha valasari fair, no entry for five accused who destroyed the house of Kondana temple.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm