ಬ್ರೇಕಿಂಗ್ ನ್ಯೂಸ್
03-12-20 01:13 pm Mangalore Correspondent ಕರಾವಳಿ
ಮಂಗಳೂರು, ಡಿ.3 : ಯಾರು ಏನೇ ಹೇಳಲಿ, ಕರ್ನಾಟಕದಲ್ಲಿ ಲವ್ ಜಿಹಾದ್ ಪಿಡುಗಿನ ವಿರುದ್ಧ ಸಮಗ್ರವಾದ ಕಾನೂನು ಜಾರಿಗೆ ಬರಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಪಣಂಬೂರಿನಲ್ಲಿ ಪೊಲೀಸ್ ಕ್ವಾಟ್ರಸ್ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೃಹ ಸಚಿವರು, ಮಾಧ್ಯಮದ ಪ್ರಶ್ನೆಗೆ ಮೇಲಿನಂತೆ ಉತ್ತರ ನೀಡಿದ್ರು.
ಲವ್ ಜಿಹಾದ್ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಪಿಡುಗಾಗಿದೆ. ಇದರಿಂದ ಸಮಾಜದ ಸಾಮರಸ್ಯ, ಸ್ವಾಸ್ಥ್ಯ ಹಾಳಾಗಿದೆ. ಒಂದಷ್ಟು ಪ್ರಕರಣ ದಾಖಲಾಗಿದ್ದರೆ, ಅದೆಷ್ಟೋ ಪ್ರಕರಣಗಳು ದಾಖಲು ಆಗೇ ಇಲ್ಲ. ಇಂಥ ಪಿಡುಗಿನ ವಿರುದ್ಧ ಕಾನೂನು ತರುವುದು ಅವಶ್ಯವಾಗಿದ್ದು ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಕಾಯ್ದೆಯ ಅಂಶಗಳನ್ನು ನೋಡಿಕೊಂಡು ಸಮಗ್ರವಾದ ಕಾನೂನು ರಚನೆ ಮಾಡುತ್ತೇವೆ.
ಹಿಂದೆ ವರದಕ್ಷಿಣೆ ವಿರುದ್ಧ ಕಾನೂನು ಇರಲಿಲ್ಲ. ಹಾಗಂತ, ಅದೇ ಸಮಾಜದಲ್ಲಿ ಪಿಡುಗಾಗಿ ಬಂತು. ಹಾಗಾಗಿ ಏಂಟಿ ಡೌರಿ ಆ್ಯಕ್ಟ್ ಜಾರಿಗೆ ತರಲಾಯ್ತು. ಅದೇ ರೀತಿ ಲವ್ ಜಿಹಾದ್ ಸಮಾಜಕ್ಕೆ ಅಂಟಿದ ಪಿಡುಗಾಗಿದ್ದು ಈ ಬಗ್ಗೆ ಕೋರ್ಟ್ ಕೂಡ ವ್ಯಾಖ್ಯಾನ ಮಾಡಿದೆ ಎಂದು ಹೇಳಿದರು.

ಗಾಂಧೀಜಿ ಕಾಲದಲ್ಲೇ ಗೋಹತ್ಯೆ ನಿಷೇಧ ಆಗಬೇಕೆಂಬ ಆಗ್ರಹ ಅನೇಕ ಇತ್ತು. ಆದರೆ, ಕಾನೂನಿನಲ್ಲಿ ಲೋಪ ಆಯ್ತು. ಈಗ ಪಶು ವೈದ್ಯರು, ರೈತರು, ಸಮಾಜದ ಪ್ರಮುಖರು, ಕಾನೂನು ತಜ್ಞರಿಂದ ವರದಿ ಕೇಳಿದ್ದು ಸಮಗ್ರವಾದ ಕಾಯ್ದೆ ಒಂದನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು.
ರಾತ್ರಿ ಬೀಟ್ ಗೆ ಡಿಸಿಪಿ ಶ್ರೇಣಿಯ ಅಧಿಕಾರಿಗಳ ನಿಯೋಜನೆ !
ಮಂಗಳೂರಿನಲ್ಲಿ ಗೋಡೆ ಬರಹದ ಪ್ರಕರಣದಲ್ಲಿ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುತ್ತೇವೆ. ಈ ರೀತಿಯ ಪ್ರಕರಣ ಮರು ಕಳಿಸದಂತೆ ಕ್ರಮ ವಹಿಸಲಾಗುವುದು. ರಾತ್ರಿ ವೇಳೆಗೆ ಪೊಲೀಸ್ ಬೀಟ್ ಹೆಚ್ಚಿಸಲಾಗುವುದು. ಡಿಸಿಪಿ ರೇಂಜ್ ಅಧಿಕಾರಿಗಳನ್ನು ನೈಟ್ ಬೀಟ್ ಹಾಕಲು ಸೂಚಿಸಿದ್ದೇನೆ. ನಗರದ ಡಾರ್ಕ್ ಸ್ಪಾಟ್ ಗಳಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಲು ಕ್ರಮ ವಹಿಸಲಾಗುವುದು. ಸ್ಮಾರ್ಟ್ ಸಿಟಿಯಡಿ 1500 ಕ್ಯಾಮರಾ ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.
Law against Love Jihad will certainly be executed in Karnataka said Home Minister Bommai during his visit to Udupi.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm