ಬ್ರೇಕಿಂಗ್ ನ್ಯೂಸ್
06-05-24 08:17 pm Mangalore Correspondent ಕರಾವಳಿ
ಮಂಗಳೂರು, ಮೇ.6: ಮಾನಸಿಕ ಖಿನ್ನತೆಯಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯಾಗಿದ್ದ ಯುವಕನೊಬ್ಬ ಆಸ್ಪತ್ರೆ ಕೊಠಡಿಯಲ್ಲಿ ನೇಣು ಹಾಕ್ಕೊಂಡು ಸಾವಿಗೆ ಶರಣಾಗಿದ್ದಾನೆ.
ಮಂಜೇಶ್ವರ ಬಳಿಯ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್ (24) ಮೃತ ಕೈದಿ. 2022ರ ಡಿಸೆಂಬರ್ ನಲ್ಲಿ ನೌಫಾಲ್ ಎನ್ ಡಿಪಿಎಸ್ ಕಾಯ್ದೆಯಡಿ ಕೋಣಾಜೆ ಪೊಲೀಸರಿಂದ ಬಂಧನಕ್ಕೀಡಾಗಿದ್ದ. ಆನಂತರ ಮಂಗಳೂರು ಜೈಲಿನಲ್ಲೇ ಇದ್ದು ಯುವಕನ ಪರವಾಗಿ ಜಾಮೀನು ಕೊಡಿಸುವುದಕ್ಕೂ ಯಾರೂ ಬಂದಿರಲಿಲ್ಲ.
ಅತಿಯಾದ ಡ್ರಗ್ಸ್ ಸೇವನೆಯ ಚಟಕ್ಕೆ ಬಿದ್ದವರು ಅದು ಸಿಗದೇ ಇದ್ದಾಗ ಮಾನಸಿಕವಾಗಿ ತೊಂದರೆಗೀಡಾಗುತ್ತಾರೆ. ಜೈಲಿನಲ್ಲಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಕಾರಣಕ್ಕೆ ನೌಫಾಲ್ ನನ್ನು ಚಿಕಿತ್ಸೆಗೆಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಎಪ್ರಿಲ್ 25ರಂದು ಚಿಕಿತ್ಸೆಗೆ ದಾಖಲಾಗಿದ್ದ ನೌಫಾಲ್, ಮೇ 6ರ ಸೋಮವಾರ ನಸುಕಿನ ವೇಳೆ ನಾಲ್ಕು ಗಂಟೆಗೆ ಬೆಡ್ ಶೀಟನ್ನೇ ಕಿಟಕಿಗೆ ಕಟ್ಟಿ ಅದನ್ನು ಕುಣಿಕೆಯಾಗಿಸಿ ಕೊರಳೊಡ್ಡಿದ್ದಾನೆ.
ಅದೇ ಕೊಠಡಿಯಲ್ಲಿ ಇತರ ನಾಲ್ವರು ಕೈದಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಹೊರಗಡೆ ಕಾವಲಿಗೆ ಪೊಲೀಸರಿದ್ದರು. ಅದರ ನಡುವೆಯೂ ಯುವಕ ಸಾವಿಗೆ ಶರಣಾಗಿದ್ದಾನೆ. ಮನೆಯವರನ್ನು ಬಿಟ್ಟು ಗಾಂಜಾ ವ್ಯಸನ ಮತ್ತು ಅದರ ವಹಿವಾಟಿನಲ್ಲಿ ನಿರತನಾಗಿದ್ದ ಯುವಕ ನೌಫಾಲ್ ಆಚಾನಕ್ಕಾಗಿ ಜೈಲು ಸೇರಿದ್ದಲ್ಲದೆ, ಆಸ್ಪತ್ರೆಯಲ್ಲೀಗ ಅನಾಥ ಶವ ಆಗುವಂತಾಗಿದೆ.
2022 ರ ಡಿಸೆಂಬರಲ್ಲಿ ಕೊಣಾಜೆ ಪೊಲೀಸರು ಬೋಳಿಯಾರ್ ಎಂಬಲ್ಲಿ ಮಹಮ್ಮದ್ ನೌಫಾಲ್, ಬಾತಿಷ್, ಮಹಮ್ಮದ್ ಅಶ್ರಫ್ ಎಂಬವರನ್ನ ಬಂಧಿಸಿ ಕೆಜಿ ಗಟ್ಟಲೆ ಗಾಂಜಾ ವಶಪಡಿಸಿದ್ದರು. ದೊಡ್ಡ ಪ್ರಮಾಣದಲ್ಲಿ ಗಾಂಜಾ ಸಿಕ್ಕಿದ್ದರಿಂದ ಜಾಮೀನು ಆಗಿರಲಿಲ್ಲ ಎನ್ನುವ ಮಾಹಿತಿ ಪೊಲೀಸರಿಂದ ಲಭಿಸಿದೆ.
24 year old prisoner commits suicide at wenlock hospital in Mangalore. The deceased has been identified as Mohammad Nowfal. He was arrested in drugs case in 2022 by Konaje Police.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm