ಬ್ರೇಕಿಂಗ್ ನ್ಯೂಸ್
03-12-20 02:27 pm Mangalore Correspondent ಕರಾವಳಿ
ಉಳ್ಳಾಲ, ಡಿ.3: ತಲಪಾಡಿ ಟೋಲ್ಗೇಟ್ ಆರಂಭದಿಂದಲೂ ಸಮಸ್ಯೆಯಿಂದ ಕೂಡಿದ್ದು ವಿವಿಧ ಸಂಘಟನೆಗಳಿಂದ ಅನೇಕ ಬಾರಿ ಪ್ರತಿಭಟನೆ ನಡೆಸಲಾಗಿದೆ. ಟೋಲ್ಗೇಟ್ ಗುತ್ತಿಗೆದಾರರು ಈ ಬಗ್ಗೆ ನಿರ್ಲಕ್ಷಿಸುತ್ತಿದ್ದು ಇದರಿಂದಾಗಿ ಕಾರ್ಮಿಕ ಸಂಘಟನೆ ಇಂಟೆಕ್ ನಿಂದ ಡಿ.12ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಯೂತ್ ಇಂಟಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೇಳಿದರು.
ತೊಕ್ಕೊಟ್ಟಿನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೋರ್ಟ್ ಆದೇಶದ ಪ್ರಕಾರ, ಪ್ರತಿ ಟೋಲ್ಗೇಟ್ ಸ್ಥಳದಿಂದ 3 ಕಿ.ಮೀ. ತನಕ ಸ್ಥಳೀಯವಾಗಿ ವಾಸವಿರುವ ಮಂದಿಗೆ ಸಂಚಾರಕ್ಕೆ ಉಚಿತವಾಗಿ ಪಾಸ್ ನೀಡಬೇಕು. ಆದರೆ ತಲಪಾಡಿ ಟೋಲ್ಗೇಟ್ ನಲ್ಲಿ ತಲಪಾಡಿ ಪಂಚಾಯಿತಿಗೆ ಉಚಿತವಾಗಿ ಸೇವೆ ನೀಡುತ್ತಿದ್ದು ಈ ಸೇವೆಯನ್ನು 3 ಕಿ.ಮೀ. ಒಳಗಿನವರಿಗು ನೀಡತಕ್ಕದ್ದು ಎಂದು ಹೇಳಿದರು.

ಟೋಲ್ ಗೇಟ್ ಗುತ್ತಿಗೆದಾರರು ವಾಹನ ಚಾಲಕರಿಂದ ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ. ಯಾವುದೇ ವ್ಯಕ್ತಿ ಕಾರಿನಲ್ಲಿ 24 ಗಂಟೆಯಲ್ಲಿ ಹೋಗಿ ಬಂದರೂ 40 ರೂ. ಗಳಂತೆ ಎರಡು ಬಾರಿ ನೀಡಬೇಕಾಗುತ್ತದೆ. ಟೋಲ್ ಗೇಟ್ ಸಮಸ್ಯೆಯಿಂದಾಗಿ ಕರ್ನಾಟಕದ ಕಡೆಯ ಯಾವುದೇ ಬಸ್ ಗೇಟ್ ದಾಟಿ ಮುಂದೆ ಹೋಗುತ್ತಿಲ್ಲ. ಇದರಿಂದ ಜನರು ನಡೆದುಕೊಂಡು ಹೋಗಬೇಕಾಗಿದ್ದು ಹಿರಿಯ ನಾಗರಿಕರಿ ತೊಂದರೆಗೊಳಗಾಗಿದ್ದಾರೆ ಎಂದು ಹೇಳಿದರು.
ಸಾರ್ವಜನಿಕ ಹಿತದೃಷ್ಟಿಯಿಂದ ಬಸ್ ಗಳಿಗೆ ಟೋಲ್ ಫ್ರೀ ಮಾಡಿ, ಮೇಲಿನ ತಲಪಾಡಿ ನಿಲ್ದಾಣಕ್ಕೆ ಹೋಗುವ ವ್ಯವಸ್ಥೆ ಮಾಡಬೇಕು. ಅಲ್ಲದೆ ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳು ಯಾವಾಗಲೂ ಒಂದೂವರೆ ಕಿಲೋಮೀಟರ್ ಉದ್ದಕ್ಕೆ ಸಾಲು ನಿಂತಿರುತ್ತದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಒಂದು ವೇಳೆ ಫಾಸ್ಟ್ ಟ್ಯಾಗ್ ಇಲ್ಲದ ವಾಹನ ಬೇರೆ ಲೈನ್ ನಲ್ಲಿ ಹೋದರೆ ದುಪ್ಪಟ್ಟು ಶುಲ್ಕ
ಪಡೆದುಕೊಳ್ಳುತ್ತಾರೆ ಎಂದು ಹೇಳಿದರು.


ಒಂದೆಡೆ ಹೆದ್ದಾರಿ ಕಾಮಗಾರಿ ಪೂರ್ತಿಯಾಗಿಲ್ಲ. ಈಗಾಗಲೇ ಹಲವು ಜೀವ ಹಾನಿಯಾಗಿದ್ದು, ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣಗೊಳ್ಳದೆ ಸಾರ್ವಜನಿಕರಿಗೆ ಅನ್ಯಾಯವಾಗುತ್ತಿದೆ. ಸಮಸ್ಯೆ, ಅನ್ಯಾಯದ ಗೂಡಾಗಿರುವ ತಲಪಾಡಿ ಟೋಲ್ಗೇಟ್ ನಿಂದ ಆಗುವ ಸಮಸ್ಯೆಯ ಪರಿಹಾರಕ್ಕಾಗಿ ಇಂಟಕ್ ದಕ್ಷಿಣ ಕನ್ನಡ ಜಿಲ್ಲಾ ಘಟಕ ಸಂಬಂಧಪಟ್ಟ ಇಲಾಖೆ ಮತ್ತು ಅಧಿಕಾರಿಗಳಿಗೆ ಈಗಾಗಲೇ ಮನವಿ ನೀಡಿದ್ದು 10 ದಿನದ ಒಳಗೆ ಸಮಸ್ಯೆ ಬಗೆಹರಿಸದೇ ಇದ್ದಲ್ಲಿ ಡಿ.12 ರಂದು ಬೆಳಗ್ಗೆ 11.30ಕ್ಕೆ ತಲಪಾಡಿ ಟೋಲ್ಗೇಟ್ ಮುಂಭಾಗದಲ್ಲಿ ಸಮಸ್ತ ಊರಿನ ಸಂಘ ಸಂಸ್ಥೆಗಳು ಮತ್ತು ಜನರ ನೆರವಿನೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದರು.
ಮಂಗಳೂರು ವಿಧಾನ ಸಭಾ ಕ್ಷೇತ್ರ ಇಂಟಕ್ ಅಧ್ಯಕ್ಷ ಹರೀಶ್ ರಾವ್, ಮಂಗಳೂರು ವಿಧಾನಸಭಾ ಕ್ಷೇತ್ರ ಯೂತ್ ಇಂಟಕ್ ಅಧ್ಯಕ್ಷ ಸಿದ್ಧಿಕ್ ಹಸನ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಯೂತ್ ಇಂಟಕ್ ಅಧ್ಯಕ್ಷ ಪುನೀತ್ ಶೆಟ್ಟಿ, ಮಂಗಳೂರು ವಿಧಾನಸಭಾ ಕ್ಷೇತ್ರ ಯೂತ್ ಇಂಟೆಕ್ ಪ್ರಧಾನ ಕಾರ್ಯದರ್ಶಿ ಮುನೀರ್ ಬಾವ, ಮಂಗಳೂರು ವಿಧಾನಸಭಾ ಕ್ಷೇತ್ರ ಯೂತ್ ಇಂಟೆಕ್ ಉಪಾಧ್ಯಕ್ಷ ಸಿರಾಜುದ್ದಿನ್, ಬ್ಲಾಕ್ ಕಾಂಗ್ರೆಸ್ ಜೊತೆ ಕಾರ್ಯದರ್ಶಿ ಮನ್ಸೂರ್ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರ ಯೂತ್ ಇಂಟೆಕ್ ಉಪಾಧ್ಯಕ್ಷ ಮುನೀಶ್ವರನ್ ಉಪಸ್ಥಿತರಿದ್ದರು.
INTEK to hold a protest on December 12 as issues erupt in Talapady Toll, Mangalore.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm