ಬ್ರೇಕಿಂಗ್ ನ್ಯೂಸ್
03-12-20 02:42 pm Mangalore Correspondent ಕರಾವಳಿ
ಉಳ್ಳಾಲ: ಡಿ. 3: ಸೋಮೇಶ್ವರ ಗ್ರಾಮದ ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ತುಳು ಭಜನಾ ಸ್ಪರ್ಧೆ ತಂಬೂರಿ - 2020 ಡಿ. 6 ಹಾಗೂ 13ರಂದು ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ ಎಂದು ಶ್ರೀ ಬಾಲಕೃಷ್ಣ ಮಂದಿರದ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಗುರುವಾರ ತೊಕ್ಕೊಟ್ಟಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಪರ್ಧೆಯು ಪುರುಷರು, ಮಹಿಳೆಯರು, ಬಾಲಕರು ಹಾಗೂ ಬಾಲಕಿಯರು ಸೇರಿದಂತೆ ಮೂರು ವಿಭಾಗಗಳಲ್ಲಿ ನಡೆಯಲಿದ್ದು ಪುರುಷರ ವಿಭಾಗದ ಸ್ಪರ್ಧೆಯು ಡಿ. 6ಕ್ಕೆ ನಡೆಯಲಿದ್ದು, ಮಹಿಳೆಯರು, ಬಾಲಕರು ಹಾಗೂ ಬಾಲಕಿಯರ ವಿಭಾಗದ ಸ್ಪರ್ಧೆಯು ಡಿ.13ರಂದು ನಡೆಯಲಿದೆ ಎಂದರು.
ಮೂರು ವಿಭಾಗಗಳಿಗೂ ಪ್ರಶಸ್ತಿ ವಿತರಣೆ ಸಮಾರಂಭವು ಡಿ.13ರಂದು ಸಂಜೆ 6ಕ್ಕೆ ನಡೆಯಲಿದ್ದು ಪ್ರತಿ ತಂಡಕ್ಕೂ 20 ನಿಮಿಷ ಕಾಲಾವಧಿ ನೀಡಲಾಗಿದೆ. ಮೂರೂ ವಿಭಾಗಕ್ಕೂ ಪ್ರಥಮ, ದ್ವಿತೀಯ, ತೃತೀಯ ನಗದು ಹಾಗೂ ಫಲಕ, ಪ್ರಶಸ್ತಿ ಪತ್ರ ಸೇರಿದಂತೆ ಭಾಗವಹಿಸಿದ ಎಲ್ಲ ತಂಡಗಳಿಗೂ ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಗೌರವಿಸಲಾಗುವುದು. ವೈಯಕ್ತಿಕವಾಗಿ ಹಾರ್ಮೋನಿಯಂ ವಾದಕ, ತಬಲಾ ವಾದಕ ಹಾಗೂ ಉತ್ತಮ ಭಜಕ ಪ್ರಶಸ್ತಿ ನೀಡಲಾಗುವುದು ಎಂದರು.

ಡಿ. 6ರಂದು ಬೆಳಗ್ಗೆ 8.30ಕ್ಕೆ ಕುಂಪಲ ಶಾಲಾ ಮೈದಾನದಿಂದ ಭಜಕರ ವರ್ಣರಂಜಿತ ಶೋಭಾಯಾತ್ರೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಎಲ್ಲರೂ ಸಮವಸ್ತ್ರಧಾರಿಗಳಾಗಿ ಭಾಗವಹಿಸಲಿದ್ದು ವಿಶೇಷ ಶೋಭಾಯಾತ್ರೆ ನಡೆಯಲಿದೆ. ತುಳುನಾಡಿನಲ್ಲಿಯೇ ಅಪೂರ್ವ ಆಗಿರುವ ಈ ಭಜನಾ ಸ್ಪರ್ಧೆಗೆ ಈಗಾಗಲೇ 65ಕ್ಕೂ ಅಧಿಕ ತಂಡಗಳು ನೊಂದಣಿ ಮಾಡಿರುತ್ತದೆ.
ತಂಬೂರಿ- 2020ರ ಸ್ಪರ್ಧೆಯನ್ನು ಡಿ.6 ರಂದು ಜಿಲ್ಲಾ ಉಸ್ತುವಾರಿ ಸಚಿವರು, ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದು, ಜಿಲ್ಲೆಯ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಡಿ.13ರ ಮಹಿಳಾ ಮತ್ತು ಮಕ್ಕಳ ಭಜನಾ ಸ್ಪರ್ಧೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಸಂಸದರಾದ ನಳಿನ್ ಕುಮಾರ್ ಕಟೀಲ್ ನೆರವೇರಿಸಲಿದ್ದು, ಹಲವು ಗಣ್ಯರು ಭಾಗವಹಿಸುವರು. ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಂಪಲ, ಉಪಾಧ್ಯಕ್ಷ ಚಂದ್ರಶೇಖರ್ ಬಿ.ಜೆ, ಆಡಳಿತ ಮಂಡಳಿ ಸದಸ್ಯರುಗಳಾದ ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಕಿಶೋರ್ ಡಿ.ಕೆ ಹಾಗೂ ಸಂಘಟನಾ ಕಾರ್ಯದರ್ಶಿ ಪ್ರವೀಣ್ ಎಸ್. ಕುಂಪಲ ಉಪಸ್ಥಿತರಿದ್ದರು.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm