ಬ್ರೇಕಿಂಗ್ ನ್ಯೂಸ್
03-12-20 02:42 pm Mangalore Correspondent ಕರಾವಳಿ
ಉಳ್ಳಾಲ: ಡಿ. 3: ಸೋಮೇಶ್ವರ ಗ್ರಾಮದ ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ತುಳು ಭಜನಾ ಸ್ಪರ್ಧೆ ತಂಬೂರಿ - 2020 ಡಿ. 6 ಹಾಗೂ 13ರಂದು ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ ಎಂದು ಶ್ರೀ ಬಾಲಕೃಷ್ಣ ಮಂದಿರದ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಗುರುವಾರ ತೊಕ್ಕೊಟ್ಟಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಪರ್ಧೆಯು ಪುರುಷರು, ಮಹಿಳೆಯರು, ಬಾಲಕರು ಹಾಗೂ ಬಾಲಕಿಯರು ಸೇರಿದಂತೆ ಮೂರು ವಿಭಾಗಗಳಲ್ಲಿ ನಡೆಯಲಿದ್ದು ಪುರುಷರ ವಿಭಾಗದ ಸ್ಪರ್ಧೆಯು ಡಿ. 6ಕ್ಕೆ ನಡೆಯಲಿದ್ದು, ಮಹಿಳೆಯರು, ಬಾಲಕರು ಹಾಗೂ ಬಾಲಕಿಯರ ವಿಭಾಗದ ಸ್ಪರ್ಧೆಯು ಡಿ.13ರಂದು ನಡೆಯಲಿದೆ ಎಂದರು.
ಮೂರು ವಿಭಾಗಗಳಿಗೂ ಪ್ರಶಸ್ತಿ ವಿತರಣೆ ಸಮಾರಂಭವು ಡಿ.13ರಂದು ಸಂಜೆ 6ಕ್ಕೆ ನಡೆಯಲಿದ್ದು ಪ್ರತಿ ತಂಡಕ್ಕೂ 20 ನಿಮಿಷ ಕಾಲಾವಧಿ ನೀಡಲಾಗಿದೆ. ಮೂರೂ ವಿಭಾಗಕ್ಕೂ ಪ್ರಥಮ, ದ್ವಿತೀಯ, ತೃತೀಯ ನಗದು ಹಾಗೂ ಫಲಕ, ಪ್ರಶಸ್ತಿ ಪತ್ರ ಸೇರಿದಂತೆ ಭಾಗವಹಿಸಿದ ಎಲ್ಲ ತಂಡಗಳಿಗೂ ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಗೌರವಿಸಲಾಗುವುದು. ವೈಯಕ್ತಿಕವಾಗಿ ಹಾರ್ಮೋನಿಯಂ ವಾದಕ, ತಬಲಾ ವಾದಕ ಹಾಗೂ ಉತ್ತಮ ಭಜಕ ಪ್ರಶಸ್ತಿ ನೀಡಲಾಗುವುದು ಎಂದರು.
ಡಿ. 6ರಂದು ಬೆಳಗ್ಗೆ 8.30ಕ್ಕೆ ಕುಂಪಲ ಶಾಲಾ ಮೈದಾನದಿಂದ ಭಜಕರ ವರ್ಣರಂಜಿತ ಶೋಭಾಯಾತ್ರೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಎಲ್ಲರೂ ಸಮವಸ್ತ್ರಧಾರಿಗಳಾಗಿ ಭಾಗವಹಿಸಲಿದ್ದು ವಿಶೇಷ ಶೋಭಾಯಾತ್ರೆ ನಡೆಯಲಿದೆ. ತುಳುನಾಡಿನಲ್ಲಿಯೇ ಅಪೂರ್ವ ಆಗಿರುವ ಈ ಭಜನಾ ಸ್ಪರ್ಧೆಗೆ ಈಗಾಗಲೇ 65ಕ್ಕೂ ಅಧಿಕ ತಂಡಗಳು ನೊಂದಣಿ ಮಾಡಿರುತ್ತದೆ.
ತಂಬೂರಿ- 2020ರ ಸ್ಪರ್ಧೆಯನ್ನು ಡಿ.6 ರಂದು ಜಿಲ್ಲಾ ಉಸ್ತುವಾರಿ ಸಚಿವರು, ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದು, ಜಿಲ್ಲೆಯ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಡಿ.13ರ ಮಹಿಳಾ ಮತ್ತು ಮಕ್ಕಳ ಭಜನಾ ಸ್ಪರ್ಧೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಸಂಸದರಾದ ನಳಿನ್ ಕುಮಾರ್ ಕಟೀಲ್ ನೆರವೇರಿಸಲಿದ್ದು, ಹಲವು ಗಣ್ಯರು ಭಾಗವಹಿಸುವರು. ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಂಪಲ, ಉಪಾಧ್ಯಕ್ಷ ಚಂದ್ರಶೇಖರ್ ಬಿ.ಜೆ, ಆಡಳಿತ ಮಂಡಳಿ ಸದಸ್ಯರುಗಳಾದ ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಕಿಶೋರ್ ಡಿ.ಕೆ ಹಾಗೂ ಸಂಘಟನಾ ಕಾರ್ಯದರ್ಶಿ ಪ್ರವೀಣ್ ಎಸ್. ಕುಂಪಲ ಉಪಸ್ಥಿತರಿದ್ದರು.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm