ಬ್ರೇಕಿಂಗ್ ನ್ಯೂಸ್
08-05-24 03:20 pm Mangalore Correspondent ಕರಾವಳಿ
ಮಂಗಳೂರು, ಮೇ 8: ನಗರದ ಹಂಪನಕಟ್ಟೆ ಬಳಿಯ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಆಟೋ ಚಾಲಕರು ಮತ್ತು ರೈಲು ಪ್ರಯಾಣಿಕರ ಮಧ್ಯೆ ಹೊಯ್ ಕೈ ನಡೆದಿದ್ದು ತಳ್ಳಾಟ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯರು ಎಂಬುದನ್ನೂ ಗಮನಿಸದೆ ಆಟೋ ಚಾಲಕರು ಅಸಭ್ಯವಾಗಿ ವರ್ತಿಸಿದ್ದಾರೆಂಬ ಆಕ್ಷೇಪ ಕೇಳಿಬಂದಿದೆ.
ಸೆಂಟ್ರಲ್ ರೈಲ್ವೇ ನಿಲ್ದಾಣದ ಹೊರಗೆ ವಾಗ್ವಾದ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಂಗಳವಾರ ಬೆಳಗ್ಗೆ ಚೆನ್ನೈನಿಂದ ದಂಪತಿ ಬಂದಿದ್ದು, ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯಲು ಇಬ್ಬರು ಬಂದಿದ್ದರು. ರೈಲ್ವೇ ನಿಲ್ದಾಣದಲ್ಲಿ ನಿಗದಿತ ಸ್ಥಳಗಳಲ್ಲಿ ಮಾತ್ರ ವಾಹನ ಪಾರ್ಕಿಂಗ್ ಮಾಡಬೇಕು. ನಿಲ್ದಾಣದ ಮುಂದಿನ ಮುಖ್ಯ ಗೇಟ್ ಬಳಿ ಪಿಕಪ್ ಮತ್ತು ಡ್ರಾಪ್ ಗೆ ಮಾತ್ರ ಅನುಮತಿಯಿದ್ದು ಖಾಲಿ ವಾಹನ ತರುವುದಕ್ಕೆ ಅವಕಾಶ ಇಲ್ಲ.





ಇದೇ ವಿಚಾರದಲ್ಲಿ ರೈಲು ಪ್ರಯಾಣಿಕರನ್ನು ಕರೆದೊಯ್ಯಲು ಬಂದಿದ್ದ ಇಬ್ಬರು ಮತ್ತು ಪಾರ್ಕಿಂಗ್ ನೋಡಿಕೊಳ್ಳುವ ಚಂದನ್ ಎಂಬ ವ್ಯಕ್ತಿ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ, ಪಾರ್ಕಿಂಗ್ ನೋಡಿಕೊಳ್ಳುವ ಚಂದನ್ ಪರವಾಗಿ ಆಟೋರಿಕ್ಷಾ ಚಾಲಕರು ಮಧ್ಯಪ್ರವೇಶಿಸಿದ್ದಾರೆ. ಆನಂತರ ವಾಗ್ವಾದ ತಾರಕಕ್ಕೇರಿದ್ದು, ಪ್ರಯಾಣಿಕರ ಜೊತೆಗೆ ಆಟೋ ಚಾಲಕರು ಜಗಳ ನಡೆಸಿದ್ದಾರೆ. ಹೊಡೆದಾಟದ ವಿಡಿಯೋ ಸಾರ್ವಜನಿಕರ ಮೊಬೈಲಿನಲ್ಲಿ ಸೆರೆಯಾಗಿದೆ.
ಈ ಬಗ್ಗೆ ಪೊಲೀಸ್ - ಮಾಧ್ಯಮ ವಾಟ್ಸಪ್ ಗ್ರೂಪಿನಲ್ಲಿ ಪ್ರತಿಕ್ರಿಯೆ ಹಾಕಿರುವ ಮಂಗಳೂರು ಪೊಲೀಸ್ ಕಮಿಷನರ್, ಆಟೋ ಚಾಲಕರ ಗುರುತು ಪತ್ತೆಹಚ್ಚಲಾಗಿದೆ. ಪ್ರಯಾಣಿಕರ ಗುರುತನ್ನೂ ಪರಿಶೀಲನೆ ಮಾಡಲಾಗುತ್ತಿದೆ. ಈ ವಿಷಯದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Fight between auto drivers and passenger go viral in #Mangalore #railwaystation pic.twitter.com/XxbCHbk94e
— Headline Karnataka (@hknewsonline) May 8, 2024
Fight between auto drivers and passenger go viral in Mangalore railway station over parking issues.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm