ಬ್ರೇಕಿಂಗ್ ನ್ಯೂಸ್
08-05-24 04:54 pm Mangalore Correspondent ಕರಾವಳಿ
ಮಂಗಳೂರು, ಮೇ 8: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ತನಿಖೆಯಿಂದ ನ್ಯಾಯ ಸಿಗುವ ನಿರೀಕ್ಷೆ ಇಲ್ಲ. ಎಸ್ಐಟಿ ತನಿಖೆ ಬಗ್ಗೆ ನಮಗೆ ವಿಶ್ವಾಸವಿಲ್ಲ. ವಿಡಿಯೋ ಪ್ರಜ್ವಲ್ ರೇವಣ್ಣ ಅವರದ್ದೇ ಆಗಿದ್ದಲ್ಲಿ ಶಿಕ್ಷೆಯಾಗಲಿ. ಪ್ರಜ್ವಲ್ ರೇವಣ್ಣ ಪಾತ್ರದಷ್ಟೇ ವಿಡಿಯೋ ಹರಿಯ ಬಿಟ್ಟವರ ಪಾತ್ರವೂ ಇದೆ. ಇದೆಲ್ಲದರ ತನಿಖೆ ಆಗಬೇಕಿದ್ದರೆ ಸಿಬಿಐಗೆ ಕೊಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಪ್ರಕರಣದಲ್ಲಿ ಮಹಿಳೆಯರ ಮುಖ ಬ್ಲರ್ ಮಾಡದೆ ವಿಡಿಯೋ ಹರಿಯ ಬಿಟ್ಟಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ, ತುಂಬಾ ಮಹಿಳೆಯರು ಇದ್ದಾರೆ. ಅವರ ಕುಟುಂಬ ಮತ್ತು ಸಂಸಾರಕ್ಕೆ ಇದು ದೊಡ್ಡ ಹೊಡೆತ. ಯಾರು ವಿಡಿಯೋ ಹರಿಯ ಬಿಟ್ಟಿದ್ದಾರೋ ಅವರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದವರು ಆಗ್ರಹಿಸಿದರು.


ಎಸ್ಐಟಿ ಒಂದು ಭಾಗದ ವಿಚಾರಣೆಯನ್ನು ಮಾತ್ರ ಮಾಡಿದ್ದಾರೆ. ಯಾರು ಹಂಚಿಕೆ ವೈರಲ್ ಮಾಡುತ್ತಿದ್ದರೋ ಅವರನ್ನ ವಿಚಾರಣೆ ಮಾಡುತ್ತಿಲ್ಲ. ಇದಕ್ಕಾಗಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ತಪ್ಪು ಮಾಡಿದವರಿಗೆಲ್ಲ ಶಿಕ್ಷೆಯಾಗಬೇಕು ಎಂದು ಅಕ್ಷಿತ್ ಸುವರ್ಣ ಆಗ್ರಹಿಸಿದರು. ನಿಯೋಗದಲ್ಲಿ ಯುವ ಜನತಾದಳ (ಜಾ) ದ.ಕ ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು ಹಾಗೂ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನೀತ್, ರಿನಿತ್, ನಿಶಾಂತ್ ಮುಂತಾದವರು ಪಾಲ್ಗೊಂಡಿದ್ದರು.
Mangalore Jds Akshith Suvarna demands CBI probe in Prajwal Revanna sex case. We don't trust in SIT giving justice he added. A memorandum was submitted to DC of Mangalore demanding for justice.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm