ಬ್ರೇಕಿಂಗ್ ನ್ಯೂಸ್
08-05-24 10:37 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ.8: ಬಡವರ ಬಂಧು, ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ವಿಚಾರ ತಿಳಿಯುತ್ತಲೇ ಬೆಳ್ತಂಗಡಿಯಲ್ಲಿ ಗಾಢ ಶೋಕ ಮಡುಗಟ್ಟಿದೆ. ಜನರು ಬೀದಿ ಬೀದಿಯಲ್ಲಿ ನಿಂತು ಬಂಗೇರ ಅವರ ಗುಣಗಾನ ಮಾಡುತ್ತಿದ್ದಾರೆ. ಇನ್ನೊಂದೆಡೆ, ಅವರ ಅಂತಿಮ ಕಾರ್ಯ ನ ಭೂತೋ ಎನ್ನುವಂತೆ ಮಾಡಬೇಕು ಎನ್ನುವ ನೆಲೆಯಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಬಡವ, ಬಲ್ಲಿದ, ಜಾತಿ ಭೇದ ಇಲ್ಲದೆ ಬಂಗೇರ ಅವರ ಅಭಿಮಾನಿಗಳಿದ್ದು ಬೆಂಗಳೂರಿನಿಂದ ರಾತ್ರಿ ಶವ ಕರೆತರುವಾಗಲೇ ಬೆಳ್ತಂಗಡಿ ತಾಲೂಕು ಪ್ರವೇಶ ಆಗುತ್ತಲೇ ಮೆರವಣಿಗೆಯಲ್ಲಿ ಎದುರುಗೊಳ್ಳಲು ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರಿನಿಂದ ಚಾರ್ಮಾಡಿ ಮೂಲಕ ಪಾರ್ಥಿವ ಶರೀರ ಬರಲಿದ್ದು ನಸುಕಿನ 3 ಗಂಟೆಗೆ ಚಾರ್ಮಾಡಿಯಿಂದಲೇ ಕಾಲ್ನಡಿಗೆ ಮೆರವಣಿಗೆಯಲ್ಲಿ ತರಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಒಟ್ಟು ಕಾರ್ಯಕ್ರಮದ ಬಗ್ಗೆ ಬಂಗೇರ ಅಭಿಮಾನಿ ಸಮಿತಿ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಪಾರ್ಥಿವ ಶರೀರವನ್ನು ನೇರವಾಗಿ ಮನೆಗೆ ತಂದು ಅಂತಿಮ ವಿಧಿ ಪೂರೈಸಿ ಬೆಳಗ್ಗೆ 10.30 ಗಂಟೆಗೆ ಹಳೇಕೋಟೆ ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ ಪಾರ್ಥಿವ ಶರೀರವನ್ನು ತಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಪರಾಹ್ನ ಬೆಳ್ತಂಗಡಿ ನಗರದಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆಯನ್ನು ಮೆರವಣಿಗೆ ಮೂಲಕ ನಡೆಸಿ, ಅಗಲಿದ ನಾಯಕನಿಗೆ ಗೌರವ ಸಲ್ಲಿಸಲಾಗುತ್ತದೆ. ನಂತರ ಅಂತ್ಯ ಸಂಸ್ಕಾರ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಹಳೇಕೋಟೆಯ ಮನೆಯ ಸಮೀಪ ನಡೆಸಲಾಗುವುದು. ಮೃತರ ಗೌರವಾರ್ಥ ಬೆಳ್ತಂಗಡಿ ಪೇಟೆಯ ಹೋಟೆಲ್, ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತ ಬಂದ್ ಮಾಡಿ ವಸಂತ ಬಂಗೇರರಿಗೆ ಗೌರವ ಸಲ್ಲಿಸಬೇಕು ಎಂದು ಅಭಿಮಾನಿಗಳ ಸಮಿತಿ ವಿನಂತಿಸಿದೆ.
ಮೃತರ ಅಂತಿಮ ದರ್ಶನಕ್ಕೆ ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಸೇರಿದಂತೆ ಸಚಿವರು, ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವಜನಿಕರು, ಅವರ ಅಭಿಮಾನಿಗಳು, ವಿವಿಧ ಕ್ಷೇತ್ರದ ಗಣ್ಯರಿಗೆ ತಾಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಸಂತ ಬಂಗೇರ ಅಭಿಮಾನಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Mangalore Vasantha Bangera death, last rites in Belthangady. K. Vasantha Bangera, a prominent Congress leader known for his influence in Dakshina Kannada district, breathed his last at a private hospital in Bengaluru today, May 8, around 4 pm.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm