ಬ್ರೇಕಿಂಗ್ ನ್ಯೂಸ್
08-05-24 10:37 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ.8: ಬಡವರ ಬಂಧು, ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ವಿಚಾರ ತಿಳಿಯುತ್ತಲೇ ಬೆಳ್ತಂಗಡಿಯಲ್ಲಿ ಗಾಢ ಶೋಕ ಮಡುಗಟ್ಟಿದೆ. ಜನರು ಬೀದಿ ಬೀದಿಯಲ್ಲಿ ನಿಂತು ಬಂಗೇರ ಅವರ ಗುಣಗಾನ ಮಾಡುತ್ತಿದ್ದಾರೆ. ಇನ್ನೊಂದೆಡೆ, ಅವರ ಅಂತಿಮ ಕಾರ್ಯ ನ ಭೂತೋ ಎನ್ನುವಂತೆ ಮಾಡಬೇಕು ಎನ್ನುವ ನೆಲೆಯಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಬಡವ, ಬಲ್ಲಿದ, ಜಾತಿ ಭೇದ ಇಲ್ಲದೆ ಬಂಗೇರ ಅವರ ಅಭಿಮಾನಿಗಳಿದ್ದು ಬೆಂಗಳೂರಿನಿಂದ ರಾತ್ರಿ ಶವ ಕರೆತರುವಾಗಲೇ ಬೆಳ್ತಂಗಡಿ ತಾಲೂಕು ಪ್ರವೇಶ ಆಗುತ್ತಲೇ ಮೆರವಣಿಗೆಯಲ್ಲಿ ಎದುರುಗೊಳ್ಳಲು ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರಿನಿಂದ ಚಾರ್ಮಾಡಿ ಮೂಲಕ ಪಾರ್ಥಿವ ಶರೀರ ಬರಲಿದ್ದು ನಸುಕಿನ 3 ಗಂಟೆಗೆ ಚಾರ್ಮಾಡಿಯಿಂದಲೇ ಕಾಲ್ನಡಿಗೆ ಮೆರವಣಿಗೆಯಲ್ಲಿ ತರಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಒಟ್ಟು ಕಾರ್ಯಕ್ರಮದ ಬಗ್ಗೆ ಬಂಗೇರ ಅಭಿಮಾನಿ ಸಮಿತಿ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಪಾರ್ಥಿವ ಶರೀರವನ್ನು ನೇರವಾಗಿ ಮನೆಗೆ ತಂದು ಅಂತಿಮ ವಿಧಿ ಪೂರೈಸಿ ಬೆಳಗ್ಗೆ 10.30 ಗಂಟೆಗೆ ಹಳೇಕೋಟೆ ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ ಪಾರ್ಥಿವ ಶರೀರವನ್ನು ತಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಪರಾಹ್ನ ಬೆಳ್ತಂಗಡಿ ನಗರದಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆಯನ್ನು ಮೆರವಣಿಗೆ ಮೂಲಕ ನಡೆಸಿ, ಅಗಲಿದ ನಾಯಕನಿಗೆ ಗೌರವ ಸಲ್ಲಿಸಲಾಗುತ್ತದೆ. ನಂತರ ಅಂತ್ಯ ಸಂಸ್ಕಾರ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಹಳೇಕೋಟೆಯ ಮನೆಯ ಸಮೀಪ ನಡೆಸಲಾಗುವುದು. ಮೃತರ ಗೌರವಾರ್ಥ ಬೆಳ್ತಂಗಡಿ ಪೇಟೆಯ ಹೋಟೆಲ್, ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತ ಬಂದ್ ಮಾಡಿ ವಸಂತ ಬಂಗೇರರಿಗೆ ಗೌರವ ಸಲ್ಲಿಸಬೇಕು ಎಂದು ಅಭಿಮಾನಿಗಳ ಸಮಿತಿ ವಿನಂತಿಸಿದೆ.
ಮೃತರ ಅಂತಿಮ ದರ್ಶನಕ್ಕೆ ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಸೇರಿದಂತೆ ಸಚಿವರು, ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವಜನಿಕರು, ಅವರ ಅಭಿಮಾನಿಗಳು, ವಿವಿಧ ಕ್ಷೇತ್ರದ ಗಣ್ಯರಿಗೆ ತಾಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಸಂತ ಬಂಗೇರ ಅಭಿಮಾನಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Mangalore Vasantha Bangera death, last rites in Belthangady. K. Vasantha Bangera, a prominent Congress leader known for his influence in Dakshina Kannada district, breathed his last at a private hospital in Bengaluru today, May 8, around 4 pm.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm