ಬ್ರೇಕಿಂಗ್ ನ್ಯೂಸ್
08-05-24 10:37 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ.8: ಬಡವರ ಬಂಧು, ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ವಿಚಾರ ತಿಳಿಯುತ್ತಲೇ ಬೆಳ್ತಂಗಡಿಯಲ್ಲಿ ಗಾಢ ಶೋಕ ಮಡುಗಟ್ಟಿದೆ. ಜನರು ಬೀದಿ ಬೀದಿಯಲ್ಲಿ ನಿಂತು ಬಂಗೇರ ಅವರ ಗುಣಗಾನ ಮಾಡುತ್ತಿದ್ದಾರೆ. ಇನ್ನೊಂದೆಡೆ, ಅವರ ಅಂತಿಮ ಕಾರ್ಯ ನ ಭೂತೋ ಎನ್ನುವಂತೆ ಮಾಡಬೇಕು ಎನ್ನುವ ನೆಲೆಯಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಬಡವ, ಬಲ್ಲಿದ, ಜಾತಿ ಭೇದ ಇಲ್ಲದೆ ಬಂಗೇರ ಅವರ ಅಭಿಮಾನಿಗಳಿದ್ದು ಬೆಂಗಳೂರಿನಿಂದ ರಾತ್ರಿ ಶವ ಕರೆತರುವಾಗಲೇ ಬೆಳ್ತಂಗಡಿ ತಾಲೂಕು ಪ್ರವೇಶ ಆಗುತ್ತಲೇ ಮೆರವಣಿಗೆಯಲ್ಲಿ ಎದುರುಗೊಳ್ಳಲು ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರಿನಿಂದ ಚಾರ್ಮಾಡಿ ಮೂಲಕ ಪಾರ್ಥಿವ ಶರೀರ ಬರಲಿದ್ದು ನಸುಕಿನ 3 ಗಂಟೆಗೆ ಚಾರ್ಮಾಡಿಯಿಂದಲೇ ಕಾಲ್ನಡಿಗೆ ಮೆರವಣಿಗೆಯಲ್ಲಿ ತರಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಒಟ್ಟು ಕಾರ್ಯಕ್ರಮದ ಬಗ್ಗೆ ಬಂಗೇರ ಅಭಿಮಾನಿ ಸಮಿತಿ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಪಾರ್ಥಿವ ಶರೀರವನ್ನು ನೇರವಾಗಿ ಮನೆಗೆ ತಂದು ಅಂತಿಮ ವಿಧಿ ಪೂರೈಸಿ ಬೆಳಗ್ಗೆ 10.30 ಗಂಟೆಗೆ ಹಳೇಕೋಟೆ ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ ಪಾರ್ಥಿವ ಶರೀರವನ್ನು ತಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಪರಾಹ್ನ ಬೆಳ್ತಂಗಡಿ ನಗರದಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆಯನ್ನು ಮೆರವಣಿಗೆ ಮೂಲಕ ನಡೆಸಿ, ಅಗಲಿದ ನಾಯಕನಿಗೆ ಗೌರವ ಸಲ್ಲಿಸಲಾಗುತ್ತದೆ. ನಂತರ ಅಂತ್ಯ ಸಂಸ್ಕಾರ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಹಳೇಕೋಟೆಯ ಮನೆಯ ಸಮೀಪ ನಡೆಸಲಾಗುವುದು. ಮೃತರ ಗೌರವಾರ್ಥ ಬೆಳ್ತಂಗಡಿ ಪೇಟೆಯ ಹೋಟೆಲ್, ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತ ಬಂದ್ ಮಾಡಿ ವಸಂತ ಬಂಗೇರರಿಗೆ ಗೌರವ ಸಲ್ಲಿಸಬೇಕು ಎಂದು ಅಭಿಮಾನಿಗಳ ಸಮಿತಿ ವಿನಂತಿಸಿದೆ.
ಮೃತರ ಅಂತಿಮ ದರ್ಶನಕ್ಕೆ ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಸೇರಿದಂತೆ ಸಚಿವರು, ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವಜನಿಕರು, ಅವರ ಅಭಿಮಾನಿಗಳು, ವಿವಿಧ ಕ್ಷೇತ್ರದ ಗಣ್ಯರಿಗೆ ತಾಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಸಂತ ಬಂಗೇರ ಅಭಿಮಾನಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Mangalore Vasantha Bangera death, last rites in Belthangady. K. Vasantha Bangera, a prominent Congress leader known for his influence in Dakshina Kannada district, breathed his last at a private hospital in Bengaluru today, May 8, around 4 pm.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm