ಬ್ರೇಕಿಂಗ್ ನ್ಯೂಸ್
10-05-24 12:39 pm Mangalore Correspondent ಕರಾವಳಿ
ಉಳ್ಳಾಲ, ಮೇ.10: ನಿಯಂತ್ರಣ ತಪ್ಪಿದ ಕಾರೊಂದು ಚುರುಮುರಿ ವ್ಯಾಪಾರದ ಗೂಡಂಗಡಿಗೆ ಢಿಕ್ಕಿ ಹೊಡೆದು ಅಂಗಡಿಯನ್ನ ಉಡೀಸ್ ಮಾಡಿದ್ದಲ್ಲದೆ, ಮರಕ್ಕೆ ಢಿಕ್ಕಿ ಹೊಡೆದು ನಜ್ಜುಗುಜ್ಜಾಗಿದ್ದು , ಕಾರಿನ ಧಾವಂತಕ್ಕೆ ಬೀದಿ ನಾಯಿಯೊಂದು ಬಲಿಯಾದ ಘಟನೆ ರಾ.ಹೆ.66 ರ ಅಂಬಿಕಾ ರೋಡ್ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದ್ದು, ಕಾರಿನಲ್ಲಿದ್ದ ಮೂವರು ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಾಂಡೇಶ್ವರದ ಮೂವರು ಯುವಕರು ನಿನ್ನೆ ಮಧ್ಯರಾತ್ರಿ 12.30 ರ ವೇಳೆಗೆ ಮಂಗಳೂರಿನಿಂದ ಮಂಜೇಶ್ವರದ ಹೊಸಂಗಡಿಗೆ ಸ್ವಿಪ್ಟ್ ಕಾರಲ್ಲಿ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಮೊದಲು ಚುರುಮುರಿ ಗೂಡಂಗಡಿಗೆ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಗೂಡಂಗಡಿ ದೂರಕ್ಕೆ ಎಸೆಯಲ್ಪಟ್ಟಿದೆ. ನಂತರ ಕಾರು ಅಲ್ಲೇ ಇದ್ದ ಮರವೊಂದಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಕಾರಿನ ಸಹ ಸವಾರನೋರ್ವ ಗಂಭೀರ ಗಾಯಗೊಂಡಿದ್ದು ಉಳಿದಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.





ಘಟನೆಯಿಂದ ತೊಕ್ಕೊಟ್ಟು ನಿವಾಸಿ ಗಣೇಶ್ ಎಂಬವರ ಚುರುಮುರಿ ಅಂಗಡಿ ಸಂಪೂರ್ಣ ನಜ್ಜು ಗುಜ್ಜಾಗಿ ಸುಮಾರು ಮೂವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ. ಒಂದು ವೇಳೆ ಹಗಲಲ್ಲಿ ಈ ಘಟನೆ ನಡೆದಿದ್ದರೆ ಚುರುಮುರಿ ಅಂಗಡಿಯ ಗಣೇಶ್ ಅವರ ಪ್ರಾಣ ಉಳಿಯುತ್ತಿರಲಿಲ್ಲ. ಕಾರಿನ ಧಾವಂತಕ್ಕೆ ಬೀದಿಯಲ್ಲಿದ್ದ ಶ್ವಾನವೊಂದು ಬಲಿಯಾಗಿದೆ. ಟ್ರಾಫಿಕ್ ಪೊಲೀಸರು ಸಮರ್ಪಕ ತನಿಖೆ ನಡೆಸಿ ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Car accident at Thokotuu, rams shops, dog killed. Three Youths from Pandeshwar were going towards Manjeshwara in the swift car. As the car lost control he rammed a petty shop and then killed a dog.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm