ಬ್ರೇಕಿಂಗ್ ನ್ಯೂಸ್
10-05-24 12:39 pm Mangalore Correspondent ಕರಾವಳಿ
ಉಳ್ಳಾಲ, ಮೇ.10: ನಿಯಂತ್ರಣ ತಪ್ಪಿದ ಕಾರೊಂದು ಚುರುಮುರಿ ವ್ಯಾಪಾರದ ಗೂಡಂಗಡಿಗೆ ಢಿಕ್ಕಿ ಹೊಡೆದು ಅಂಗಡಿಯನ್ನ ಉಡೀಸ್ ಮಾಡಿದ್ದಲ್ಲದೆ, ಮರಕ್ಕೆ ಢಿಕ್ಕಿ ಹೊಡೆದು ನಜ್ಜುಗುಜ್ಜಾಗಿದ್ದು , ಕಾರಿನ ಧಾವಂತಕ್ಕೆ ಬೀದಿ ನಾಯಿಯೊಂದು ಬಲಿಯಾದ ಘಟನೆ ರಾ.ಹೆ.66 ರ ಅಂಬಿಕಾ ರೋಡ್ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದ್ದು, ಕಾರಿನಲ್ಲಿದ್ದ ಮೂವರು ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಾಂಡೇಶ್ವರದ ಮೂವರು ಯುವಕರು ನಿನ್ನೆ ಮಧ್ಯರಾತ್ರಿ 12.30 ರ ವೇಳೆಗೆ ಮಂಗಳೂರಿನಿಂದ ಮಂಜೇಶ್ವರದ ಹೊಸಂಗಡಿಗೆ ಸ್ವಿಪ್ಟ್ ಕಾರಲ್ಲಿ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಮೊದಲು ಚುರುಮುರಿ ಗೂಡಂಗಡಿಗೆ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಗೂಡಂಗಡಿ ದೂರಕ್ಕೆ ಎಸೆಯಲ್ಪಟ್ಟಿದೆ. ನಂತರ ಕಾರು ಅಲ್ಲೇ ಇದ್ದ ಮರವೊಂದಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಕಾರಿನ ಸಹ ಸವಾರನೋರ್ವ ಗಂಭೀರ ಗಾಯಗೊಂಡಿದ್ದು ಉಳಿದಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.





ಘಟನೆಯಿಂದ ತೊಕ್ಕೊಟ್ಟು ನಿವಾಸಿ ಗಣೇಶ್ ಎಂಬವರ ಚುರುಮುರಿ ಅಂಗಡಿ ಸಂಪೂರ್ಣ ನಜ್ಜು ಗುಜ್ಜಾಗಿ ಸುಮಾರು ಮೂವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ. ಒಂದು ವೇಳೆ ಹಗಲಲ್ಲಿ ಈ ಘಟನೆ ನಡೆದಿದ್ದರೆ ಚುರುಮುರಿ ಅಂಗಡಿಯ ಗಣೇಶ್ ಅವರ ಪ್ರಾಣ ಉಳಿಯುತ್ತಿರಲಿಲ್ಲ. ಕಾರಿನ ಧಾವಂತಕ್ಕೆ ಬೀದಿಯಲ್ಲಿದ್ದ ಶ್ವಾನವೊಂದು ಬಲಿಯಾಗಿದೆ. ಟ್ರಾಫಿಕ್ ಪೊಲೀಸರು ಸಮರ್ಪಕ ತನಿಖೆ ನಡೆಸಿ ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Car accident at Thokotuu, rams shops, dog killed. Three Youths from Pandeshwar were going towards Manjeshwara in the swift car. As the car lost control he rammed a petty shop and then killed a dog.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm