ಬ್ರೇಕಿಂಗ್ ನ್ಯೂಸ್
10-05-24 12:39 pm Mangalore Correspondent ಕರಾವಳಿ
ಉಳ್ಳಾಲ, ಮೇ.10: ನಿಯಂತ್ರಣ ತಪ್ಪಿದ ಕಾರೊಂದು ಚುರುಮುರಿ ವ್ಯಾಪಾರದ ಗೂಡಂಗಡಿಗೆ ಢಿಕ್ಕಿ ಹೊಡೆದು ಅಂಗಡಿಯನ್ನ ಉಡೀಸ್ ಮಾಡಿದ್ದಲ್ಲದೆ, ಮರಕ್ಕೆ ಢಿಕ್ಕಿ ಹೊಡೆದು ನಜ್ಜುಗುಜ್ಜಾಗಿದ್ದು , ಕಾರಿನ ಧಾವಂತಕ್ಕೆ ಬೀದಿ ನಾಯಿಯೊಂದು ಬಲಿಯಾದ ಘಟನೆ ರಾ.ಹೆ.66 ರ ಅಂಬಿಕಾ ರೋಡ್ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದ್ದು, ಕಾರಿನಲ್ಲಿದ್ದ ಮೂವರು ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಾಂಡೇಶ್ವರದ ಮೂವರು ಯುವಕರು ನಿನ್ನೆ ಮಧ್ಯರಾತ್ರಿ 12.30 ರ ವೇಳೆಗೆ ಮಂಗಳೂರಿನಿಂದ ಮಂಜೇಶ್ವರದ ಹೊಸಂಗಡಿಗೆ ಸ್ವಿಪ್ಟ್ ಕಾರಲ್ಲಿ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಮೊದಲು ಚುರುಮುರಿ ಗೂಡಂಗಡಿಗೆ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಗೂಡಂಗಡಿ ದೂರಕ್ಕೆ ಎಸೆಯಲ್ಪಟ್ಟಿದೆ. ನಂತರ ಕಾರು ಅಲ್ಲೇ ಇದ್ದ ಮರವೊಂದಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಕಾರಿನ ಸಹ ಸವಾರನೋರ್ವ ಗಂಭೀರ ಗಾಯಗೊಂಡಿದ್ದು ಉಳಿದಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.





ಘಟನೆಯಿಂದ ತೊಕ್ಕೊಟ್ಟು ನಿವಾಸಿ ಗಣೇಶ್ ಎಂಬವರ ಚುರುಮುರಿ ಅಂಗಡಿ ಸಂಪೂರ್ಣ ನಜ್ಜು ಗುಜ್ಜಾಗಿ ಸುಮಾರು ಮೂವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ. ಒಂದು ವೇಳೆ ಹಗಲಲ್ಲಿ ಈ ಘಟನೆ ನಡೆದಿದ್ದರೆ ಚುರುಮುರಿ ಅಂಗಡಿಯ ಗಣೇಶ್ ಅವರ ಪ್ರಾಣ ಉಳಿಯುತ್ತಿರಲಿಲ್ಲ. ಕಾರಿನ ಧಾವಂತಕ್ಕೆ ಬೀದಿಯಲ್ಲಿದ್ದ ಶ್ವಾನವೊಂದು ಬಲಿಯಾಗಿದೆ. ಟ್ರಾಫಿಕ್ ಪೊಲೀಸರು ಸಮರ್ಪಕ ತನಿಖೆ ನಡೆಸಿ ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Car accident at Thokotuu, rams shops, dog killed. Three Youths from Pandeshwar were going towards Manjeshwara in the swift car. As the car lost control he rammed a petty shop and then killed a dog.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm