ಬ್ರೇಕಿಂಗ್ ನ್ಯೂಸ್
10-05-24 09:22 pm Mangalore Correspondent ಕರಾವಳಿ
ಮಂಗಳೂರು, ಮೇ.10: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭಯ ಹುಟ್ಟಿಸಿದ ಬಗ್ಗೆ ಬಜ್ಪೆ ಠಾಣೆಯಲ್ಲಿ ಏರ್ ಇಂಡಿಯಾ ಸಿಬಂದಿ ದೂರು ನೀಡಿದ್ದಾರೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಸೆಕ್ಯೂರಿಟಿ ಕೋ- ಆಡಿನೇಟರ್ ಆಗಿರುವ ಸಿದ್ದಾರ್ಥದಾಸ್ ಈ ಬಗ್ಗೆ ಮೊಹಮ್ಮದ್ ಬಿಸಿ ಎಂಬವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೊಹಮ್ಮದ್ ಬಿ.ಸಿ. ಎಂಬವರು ಮೇ 8ರಂದು ರಾತ್ರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಮರುದಿನ ಬೆಳಗ್ಗೆ 7.30 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದರು. ದುಬೈನಿಂದ ವಿಮಾನ ಹೊರಟ ನಂತರ ಮೊಹಮ್ಮದ್ ಶೌಚಾಲಯಕ್ಕೆ ತೆರಳಿದ್ದು ನಂತರ ಹೊರಬಂದು ವಿಮಾನದ ಪ್ರಯಾಣಿಕರಲ್ಲದ ಕೃಷ್ಣ ಎಂಬವರ ಬಗ್ಗೆ ಸಿಬಂದಿ ಬಳಿ ವಿಚಾರಿಸಿದ್ದರು. ಅಸಂಬದ್ಧ ಪ್ರಶ್ನೆಗಳನ್ನು ಕೇಳಿ, ವಿಮಾನದ ಸಿಬ್ಬಂದಿ ವರ್ಗದವರಿಗೆ ತೊಂದರೆ ನೀಡಿದ್ದರು.
ವಿಮಾನದಲ್ಲಿ ಪರಿಚಾರಕ ಸಿಬ್ಬಂದಿ ಆತನ ಹತ್ತಿರವಿದ್ದರೂ ಪದೇ - ಪದೇ ಕಾಲಿಂಗ್ ಬಟನ್ ಪ್ರೆಸ್ ಮಾಡಿ ತೊಂದರೆ ಪಡಿಸಿದ್ದಾನೆ. ನಂತರ ತಾನು ವಿಮಾನದಲ್ಲಿದ್ದ ಲೈಫ್ ಜಾಕೆಟ್ ಅನ್ನು ತೆಗೆದು ಸಿಬ್ಬಂದಿಯವರ ಕೈಗೆ ನೀಡಿ, ವಿಮಾನ ಇಳಿದ ನಂತರ ಇದನ್ನು ಬಳಸುವುದಾಗಿ ತಿಳಿಸಿರುತ್ತಾನೆ. ವಿಮಾನ ಸಮುದ್ರದ ಮೇಲಿರುವಾಗ ತಾನು ವಿಮಾನದಿಂದ ಹೊರಗಿಳಿಯಬೇಕು, ಹಾರಬೇಕು ಎಂದು ಹೇಳಿ ತನ್ನ ಮತ್ತು ಇತರ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿರುತ್ತಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
Dubai Mangalore flight passenger threatens crew of jumping from flight, case filed at Bajpe police station. The incident was reported on May 8th.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am