ಬ್ರೇಕಿಂಗ್ ನ್ಯೂಸ್
10-05-24 10:16 pm Mangalore Correspondent ಕರಾವಳಿ
ಪುತ್ತೂರು, ಮೇ.10: ಕುಡಿತದ ಚಟಕ್ಕೆ ಬಿದ್ದಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು ಪೊಲೀಸರು ತಾಯಿ ಮೇಲೆಯೇ ಶಂಕೆ ವ್ಯಕ್ತಪಡಿಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ.
ಬೆಟ್ಟಂಪಾಡಿಯ ಪಾರೆ ಎಂಬಲ್ಲಿ ಘಟನೆ ನಡೆದಿದ್ದು ಚೇತನ್ (33) ಸಾವನ್ನಪ್ಪಿದ ಯುವಕ. ಚೇತನ್ ನೇಣು ಬಿಗಿದು ಸಾವನ್ನಪ್ಪಿರುವ ಬಗ್ಗೆ ಮೃತನ ತಾಯಿ ಪುತ್ತೂರು ಪೊಲೀಸರಿಗೆ ತಿಳಿಸಿದ್ದರು. ಘಟನೆಗೆ ಸಂಬಂಧಿಸಿ ಮೃತದೇಹ ನೋಡಿ ಅನುಮಾನಗೊಂಡ ಪೋಲೀಸರು, ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿದ್ದಾರೆ. ಮೃತನ ತಾಯಿ ಉಮಾವತಿ ಸೇರಿದಂತೆ ಮೂವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ (ಮೇ 9) ರಾತ್ರಿ ಕುಡಿದು ಮನೆಗೆ ಬಂದಿದ್ದ ಚೇತನ್, ತಾಯಿ ಜೊತೆ ಜಗಳವಾಡಿ ಮನೆ ಪಕ್ಕದ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದ. ಈ ಕುರಿತು ಯೂಸುಫ್, ಚೇತನ್ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಬಳಿಕ ಯೂಸುಫ್ ಮನೆಗೆ ಬಂದ ಚೇತನ್ ತಾಯಿ, ನಾಯಿಯನ್ನು ಕಟ್ಟುವ ಸಂಕೋಲೆಯನ್ನು ತಂದು ಚೇತನ್ ಸೊಂಟಕ್ಕೆ ಹಾಕಿ ಯೂಸುಫ್ ಸೇರಿದಂತೆ ಸ್ಥಳೀಯ ನಿವಾಸಿಗಳು ಮನೆಗೆ ಎಳೆದೊಯ್ದಿದ್ದರು.
ಯುವಕನನ್ನು ಎಳೆಯುತ್ತಿದ್ದ ಸಮಯದಲ್ಲಿ ಕುತ್ತಿಗೆಗೆ ಸುತ್ತಿಕೊಂಡಿದ್ದ ಸಂಕೋಲೆ ಬಿಗಿದು ಚೇತನ್ ಸಾವನ್ನಪ್ಪಿರುವ ಶಂಕೆ ಎದುರಾಗಿದೆ. ಶವ ಪರೀಕ್ಷೆಗಾಗಿ ಮೃತದೇಹವನ್ನು ಮಂಗಳೂರಿಗೆ ತರಲಾಗಿತ್ತು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur 33 year old dead under suspicious circumstances, three including mother taken to police custody
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm