ಬ್ರೇಕಿಂಗ್ ನ್ಯೂಸ್
10-05-24 10:16 pm Mangalore Correspondent ಕರಾವಳಿ
ಪುತ್ತೂರು, ಮೇ.10: ಕುಡಿತದ ಚಟಕ್ಕೆ ಬಿದ್ದಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು ಪೊಲೀಸರು ತಾಯಿ ಮೇಲೆಯೇ ಶಂಕೆ ವ್ಯಕ್ತಪಡಿಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ.
ಬೆಟ್ಟಂಪಾಡಿಯ ಪಾರೆ ಎಂಬಲ್ಲಿ ಘಟನೆ ನಡೆದಿದ್ದು ಚೇತನ್ (33) ಸಾವನ್ನಪ್ಪಿದ ಯುವಕ. ಚೇತನ್ ನೇಣು ಬಿಗಿದು ಸಾವನ್ನಪ್ಪಿರುವ ಬಗ್ಗೆ ಮೃತನ ತಾಯಿ ಪುತ್ತೂರು ಪೊಲೀಸರಿಗೆ ತಿಳಿಸಿದ್ದರು. ಘಟನೆಗೆ ಸಂಬಂಧಿಸಿ ಮೃತದೇಹ ನೋಡಿ ಅನುಮಾನಗೊಂಡ ಪೋಲೀಸರು, ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿದ್ದಾರೆ. ಮೃತನ ತಾಯಿ ಉಮಾವತಿ ಸೇರಿದಂತೆ ಮೂವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ (ಮೇ 9) ರಾತ್ರಿ ಕುಡಿದು ಮನೆಗೆ ಬಂದಿದ್ದ ಚೇತನ್, ತಾಯಿ ಜೊತೆ ಜಗಳವಾಡಿ ಮನೆ ಪಕ್ಕದ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದ. ಈ ಕುರಿತು ಯೂಸುಫ್, ಚೇತನ್ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಬಳಿಕ ಯೂಸುಫ್ ಮನೆಗೆ ಬಂದ ಚೇತನ್ ತಾಯಿ, ನಾಯಿಯನ್ನು ಕಟ್ಟುವ ಸಂಕೋಲೆಯನ್ನು ತಂದು ಚೇತನ್ ಸೊಂಟಕ್ಕೆ ಹಾಕಿ ಯೂಸುಫ್ ಸೇರಿದಂತೆ ಸ್ಥಳೀಯ ನಿವಾಸಿಗಳು ಮನೆಗೆ ಎಳೆದೊಯ್ದಿದ್ದರು.
ಯುವಕನನ್ನು ಎಳೆಯುತ್ತಿದ್ದ ಸಮಯದಲ್ಲಿ ಕುತ್ತಿಗೆಗೆ ಸುತ್ತಿಕೊಂಡಿದ್ದ ಸಂಕೋಲೆ ಬಿಗಿದು ಚೇತನ್ ಸಾವನ್ನಪ್ಪಿರುವ ಶಂಕೆ ಎದುರಾಗಿದೆ. ಶವ ಪರೀಕ್ಷೆಗಾಗಿ ಮೃತದೇಹವನ್ನು ಮಂಗಳೂರಿಗೆ ತರಲಾಗಿತ್ತು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur 33 year old dead under suspicious circumstances, three including mother taken to police custody
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm