ಬ್ರೇಕಿಂಗ್ ನ್ಯೂಸ್
11-05-24 12:25 pm Mangalore Correspondent ಕರಾವಳಿ
ಮಂಗಳೂರು, ಮೇ.11: ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ಎಂಟು ವರ್ಷದಲ್ಲೇ ಅತಿ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಡ್ಯಾಮ್ ನಲ್ಲಿ ಶುಕ್ರವಾರ ನೀರಿನ ಮಟ್ಟ 3.86 ಮೀಟರ್ ಗೆ ಇಳಿದಿದ್ದು ಮಳೆ ಬಾರದೇ ಇದ್ದರೆ ನೀರು ಪೂರೈಕೆ ಕಡಿತಗೊಳ್ಳುವ ಸಾಧ್ಯತೆಯಿದೆ.
ಮೇ ತಿಂಗಳ ಹೊತ್ತಿಗೆ ಪ್ರತಿ ವರ್ಷ ಒಂದೆರಡು ಬಾರಿ ಮುಂಗಾರು ಪೂರ್ವ ಮಳೆ ಬಂದು ನೀರಿನ ಮಟ್ಟ ಏರಿಕೆಯಾಗುತ್ತಿತ್ತು. ಈ ಬಾರಿ ಕೆಲವು ಕಡೆ ಮಳೆಯಾದರೂ ತುಂಬೆಯಲ್ಲಿ ನೀರು ಹೆಚ್ಚುವಷ್ಟು ಮಳೆ ಆಗಿಲ್ಲ. ಹೀಗಾಗಿ ಮಂಗಳೂರಿಗೆ ನೀರುಣಿಸಲು ಮಹಾನಗರ ಪಾಲಿಕೆ ಹೆಣಗಾಡುತ್ತಿದ್ದು ಕೆಳಭಾಗದ ಅಡ್ಯಾರ್ ನಲ್ಲಿ ಹೊಸತಾಗಿ ಮಾಡಿರುವ ಅಣೆಕಟ್ಟಿನಿಂದ ನೀರನ್ನು ಏಳು ಪಂಪ್ ಗಳ ಮೂಲಕ ಮೇಲಕ್ಕೆ ಎತ್ತಿ ಡ್ಯಾಮಿಗೆ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ.
ಈ ಹಿಂದಿನ ದಾಖಲೆಗಳನ್ನು ನೋಡಿದರೆ, 2017ರಲ್ಲಿ ಮೇ 10ರಂದು ತುಂಬೆ ಡ್ಯಾಮ್ ನಲ್ಲಿ 4.84 ಮೀ., 2018ರಲ್ಲಿ 5.86 ಮೀಟರ್, 2019ರಲ್ಲಿ 4.14 ಮೀಟರ್, 2020ರಲ್ಲಿ 4.93 ಮೀಟರ್, 2021ರಲ್ಲಿ 6 ಮೀಟರ್, 2022 ರಲ್ಲಿ 6 ಮೀ., 2023 ರಲ್ಲಿ 3.88 ಮೀಟರ್, 2024 ರಲ್ಲಿ 3.86 ಮೀಟರ್ ಗೆ ನೀರಿನ ಮಟ್ಟ ಇಳಿಕೆಯಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಸಲ 0.2 ಮೀಟರ್ ನಷ್ಟು ಕಡಿಮೆಯಾಗಿದ್ದು ಮಳೆ ಬಾರದಿದ್ದರೆ ಕುಡಿಯುವ ನೀರಿಗೆ ತೊಂದರೆ ಎದುರಾಗಬಹುದು.
ಒಂದು ವಾರದಿಂದ ಮಂಗಳೂರಿಗೆ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಜೊತೆಗೆ, ನೀರು ತಲುಪದೇ ಇರುವ ಅಪಾರ್ಟ್ಮೆಂಟ್, ಹೊಟೇಲ್ ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಡ್ಯಾಮ್ ನಲ್ಲಿ ಅಡಿಭಾಗದ ಮೂರು ಮೀಟರ್ ವರೆಗೆ ಕೆಸರು ತುಂಬಿಕೊಂಡಿರುವುದರಿಂದ ಬಿಸಿಲಿನ ಧಗೆಯಿಂದಾಗಿ ಇದಕ್ಕಿಂತ ಹೆಚ್ಚು ನೀರು ಕೆಳಗಿಳಿದರೆ ಪಂಪಿಂಗ್ ಕೂಡ ಕಷ್ಟವಾಗಬಹುದು. ಒಂದೆರಡು ವಾರ ನೀರನ್ನು ಅತ್ಯಂತ ಮಿತವಾಗಿ ಬಳಸಿ ಉಳಿಸಿಕೊಳ್ಳುವುದಷ್ಟೇ ಸದ್ಯಕ್ಕೆ ಉಳಿದಿರುವ ದಾರಿ.
The district administration and the Mangaluru City Corporation have decided to introduce water rationing in the city, as water levels in the city's only water source, the Thumbe reservoir, has fallen, officials have said.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm