ಬ್ರೇಕಿಂಗ್ ನ್ಯೂಸ್
11-05-24 12:25 pm Mangalore Correspondent ಕರಾವಳಿ
ಮಂಗಳೂರು, ಮೇ.11: ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ಎಂಟು ವರ್ಷದಲ್ಲೇ ಅತಿ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಡ್ಯಾಮ್ ನಲ್ಲಿ ಶುಕ್ರವಾರ ನೀರಿನ ಮಟ್ಟ 3.86 ಮೀಟರ್ ಗೆ ಇಳಿದಿದ್ದು ಮಳೆ ಬಾರದೇ ಇದ್ದರೆ ನೀರು ಪೂರೈಕೆ ಕಡಿತಗೊಳ್ಳುವ ಸಾಧ್ಯತೆಯಿದೆ.
ಮೇ ತಿಂಗಳ ಹೊತ್ತಿಗೆ ಪ್ರತಿ ವರ್ಷ ಒಂದೆರಡು ಬಾರಿ ಮುಂಗಾರು ಪೂರ್ವ ಮಳೆ ಬಂದು ನೀರಿನ ಮಟ್ಟ ಏರಿಕೆಯಾಗುತ್ತಿತ್ತು. ಈ ಬಾರಿ ಕೆಲವು ಕಡೆ ಮಳೆಯಾದರೂ ತುಂಬೆಯಲ್ಲಿ ನೀರು ಹೆಚ್ಚುವಷ್ಟು ಮಳೆ ಆಗಿಲ್ಲ. ಹೀಗಾಗಿ ಮಂಗಳೂರಿಗೆ ನೀರುಣಿಸಲು ಮಹಾನಗರ ಪಾಲಿಕೆ ಹೆಣಗಾಡುತ್ತಿದ್ದು ಕೆಳಭಾಗದ ಅಡ್ಯಾರ್ ನಲ್ಲಿ ಹೊಸತಾಗಿ ಮಾಡಿರುವ ಅಣೆಕಟ್ಟಿನಿಂದ ನೀರನ್ನು ಏಳು ಪಂಪ್ ಗಳ ಮೂಲಕ ಮೇಲಕ್ಕೆ ಎತ್ತಿ ಡ್ಯಾಮಿಗೆ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ.
ಈ ಹಿಂದಿನ ದಾಖಲೆಗಳನ್ನು ನೋಡಿದರೆ, 2017ರಲ್ಲಿ ಮೇ 10ರಂದು ತುಂಬೆ ಡ್ಯಾಮ್ ನಲ್ಲಿ 4.84 ಮೀ., 2018ರಲ್ಲಿ 5.86 ಮೀಟರ್, 2019ರಲ್ಲಿ 4.14 ಮೀಟರ್, 2020ರಲ್ಲಿ 4.93 ಮೀಟರ್, 2021ರಲ್ಲಿ 6 ಮೀಟರ್, 2022 ರಲ್ಲಿ 6 ಮೀ., 2023 ರಲ್ಲಿ 3.88 ಮೀಟರ್, 2024 ರಲ್ಲಿ 3.86 ಮೀಟರ್ ಗೆ ನೀರಿನ ಮಟ್ಟ ಇಳಿಕೆಯಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಸಲ 0.2 ಮೀಟರ್ ನಷ್ಟು ಕಡಿಮೆಯಾಗಿದ್ದು ಮಳೆ ಬಾರದಿದ್ದರೆ ಕುಡಿಯುವ ನೀರಿಗೆ ತೊಂದರೆ ಎದುರಾಗಬಹುದು.
ಒಂದು ವಾರದಿಂದ ಮಂಗಳೂರಿಗೆ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಜೊತೆಗೆ, ನೀರು ತಲುಪದೇ ಇರುವ ಅಪಾರ್ಟ್ಮೆಂಟ್, ಹೊಟೇಲ್ ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಡ್ಯಾಮ್ ನಲ್ಲಿ ಅಡಿಭಾಗದ ಮೂರು ಮೀಟರ್ ವರೆಗೆ ಕೆಸರು ತುಂಬಿಕೊಂಡಿರುವುದರಿಂದ ಬಿಸಿಲಿನ ಧಗೆಯಿಂದಾಗಿ ಇದಕ್ಕಿಂತ ಹೆಚ್ಚು ನೀರು ಕೆಳಗಿಳಿದರೆ ಪಂಪಿಂಗ್ ಕೂಡ ಕಷ್ಟವಾಗಬಹುದು. ಒಂದೆರಡು ವಾರ ನೀರನ್ನು ಅತ್ಯಂತ ಮಿತವಾಗಿ ಬಳಸಿ ಉಳಿಸಿಕೊಳ್ಳುವುದಷ್ಟೇ ಸದ್ಯಕ್ಕೆ ಉಳಿದಿರುವ ದಾರಿ.
The district administration and the Mangaluru City Corporation have decided to introduce water rationing in the city, as water levels in the city's only water source, the Thumbe reservoir, has fallen, officials have said.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm