ಬ್ರೇಕಿಂಗ್ ನ್ಯೂಸ್
11-05-24 12:25 pm Mangalore Correspondent ಕರಾವಳಿ
ಮಂಗಳೂರು, ಮೇ.11: ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ಎಂಟು ವರ್ಷದಲ್ಲೇ ಅತಿ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಡ್ಯಾಮ್ ನಲ್ಲಿ ಶುಕ್ರವಾರ ನೀರಿನ ಮಟ್ಟ 3.86 ಮೀಟರ್ ಗೆ ಇಳಿದಿದ್ದು ಮಳೆ ಬಾರದೇ ಇದ್ದರೆ ನೀರು ಪೂರೈಕೆ ಕಡಿತಗೊಳ್ಳುವ ಸಾಧ್ಯತೆಯಿದೆ.
ಮೇ ತಿಂಗಳ ಹೊತ್ತಿಗೆ ಪ್ರತಿ ವರ್ಷ ಒಂದೆರಡು ಬಾರಿ ಮುಂಗಾರು ಪೂರ್ವ ಮಳೆ ಬಂದು ನೀರಿನ ಮಟ್ಟ ಏರಿಕೆಯಾಗುತ್ತಿತ್ತು. ಈ ಬಾರಿ ಕೆಲವು ಕಡೆ ಮಳೆಯಾದರೂ ತುಂಬೆಯಲ್ಲಿ ನೀರು ಹೆಚ್ಚುವಷ್ಟು ಮಳೆ ಆಗಿಲ್ಲ. ಹೀಗಾಗಿ ಮಂಗಳೂರಿಗೆ ನೀರುಣಿಸಲು ಮಹಾನಗರ ಪಾಲಿಕೆ ಹೆಣಗಾಡುತ್ತಿದ್ದು ಕೆಳಭಾಗದ ಅಡ್ಯಾರ್ ನಲ್ಲಿ ಹೊಸತಾಗಿ ಮಾಡಿರುವ ಅಣೆಕಟ್ಟಿನಿಂದ ನೀರನ್ನು ಏಳು ಪಂಪ್ ಗಳ ಮೂಲಕ ಮೇಲಕ್ಕೆ ಎತ್ತಿ ಡ್ಯಾಮಿಗೆ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ.
ಈ ಹಿಂದಿನ ದಾಖಲೆಗಳನ್ನು ನೋಡಿದರೆ, 2017ರಲ್ಲಿ ಮೇ 10ರಂದು ತುಂಬೆ ಡ್ಯಾಮ್ ನಲ್ಲಿ 4.84 ಮೀ., 2018ರಲ್ಲಿ 5.86 ಮೀಟರ್, 2019ರಲ್ಲಿ 4.14 ಮೀಟರ್, 2020ರಲ್ಲಿ 4.93 ಮೀಟರ್, 2021ರಲ್ಲಿ 6 ಮೀಟರ್, 2022 ರಲ್ಲಿ 6 ಮೀ., 2023 ರಲ್ಲಿ 3.88 ಮೀಟರ್, 2024 ರಲ್ಲಿ 3.86 ಮೀಟರ್ ಗೆ ನೀರಿನ ಮಟ್ಟ ಇಳಿಕೆಯಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಸಲ 0.2 ಮೀಟರ್ ನಷ್ಟು ಕಡಿಮೆಯಾಗಿದ್ದು ಮಳೆ ಬಾರದಿದ್ದರೆ ಕುಡಿಯುವ ನೀರಿಗೆ ತೊಂದರೆ ಎದುರಾಗಬಹುದು.
ಒಂದು ವಾರದಿಂದ ಮಂಗಳೂರಿಗೆ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಜೊತೆಗೆ, ನೀರು ತಲುಪದೇ ಇರುವ ಅಪಾರ್ಟ್ಮೆಂಟ್, ಹೊಟೇಲ್ ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಡ್ಯಾಮ್ ನಲ್ಲಿ ಅಡಿಭಾಗದ ಮೂರು ಮೀಟರ್ ವರೆಗೆ ಕೆಸರು ತುಂಬಿಕೊಂಡಿರುವುದರಿಂದ ಬಿಸಿಲಿನ ಧಗೆಯಿಂದಾಗಿ ಇದಕ್ಕಿಂತ ಹೆಚ್ಚು ನೀರು ಕೆಳಗಿಳಿದರೆ ಪಂಪಿಂಗ್ ಕೂಡ ಕಷ್ಟವಾಗಬಹುದು. ಒಂದೆರಡು ವಾರ ನೀರನ್ನು ಅತ್ಯಂತ ಮಿತವಾಗಿ ಬಳಸಿ ಉಳಿಸಿಕೊಳ್ಳುವುದಷ್ಟೇ ಸದ್ಯಕ್ಕೆ ಉಳಿದಿರುವ ದಾರಿ.
The district administration and the Mangaluru City Corporation have decided to introduce water rationing in the city, as water levels in the city's only water source, the Thumbe reservoir, has fallen, officials have said.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm