ಬ್ರೇಕಿಂಗ್ ನ್ಯೂಸ್
12-05-24 04:34 pm Mangalore Correspondent ಕರಾವಳಿ
ಪುತ್ತೂರು, ಮೇ 12: ಕಡಬ ವ್ಯಾಪ್ತಿಯ ಕುಮಾರಧಾರ ನದಿಯಲ್ಲಿ ಮರಳು ದಂಧೆ ನಡೆಸುತ್ತಿದ್ದ ಬಿಜೆಪಿ ಮುಖಂಡರ ನೇತೃತ್ವದ ಬೃಹತ್ ಜಾಲವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬೇಧಿಸಿದ್ದಾರೆ.
ಸಂಸದ ನಳಿನ್ ಕುಮಾರ್ ಆಪ್ತರಾಗಿರುವ ಬಿಜೆಪಿ ಪ್ರಮುಖರೇ ಈ ಜಾಲದ ಹಿಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಡಬದ ಕುದ್ಮಾರಿನಲ್ಲಿ ಮರಳು ದಂಧೆ ಕಳೆದ ಹಲವು ಸಮಯದಿಂದ ಎಗ್ಗಿಲ್ಲದೆ ನಡೆಯುತಿತ್ತು. ಈ ಬಗ್ಗೆ ಹಲವು ಬಾರಿ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ, ಪ್ರಭಾವಿ ಬಿಜೆಪಿ ಮುಖಂಡ ದಿನೇಶ್ ಮೆದು ಈ ಮರಳು ಮಾಫಿಯಾದ ಕಿಂಗ್ ಪಿನ್ ಎನ್ನಲಾಗುತ್ತಿದ್ದು ದಾಳಿಯ ಬಳಿಕ ಆತನ ವಿರುದ್ದ ಪೊಲೀಸರು ಹಲವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ನಿವಾಸಿ ಚೆನ್ನಪ್ಪ ಗೌಡ ಎಂಬಾತನೂ ಅಕ್ರಮ ಮರಳುಗಾರಿಕೆಗೆ ಸಹಕಾರ ನೀಡಿದ್ದು ಆತನ ವಿರುದ್ದವೂ ಪ್ರಕರಣಗಳು ದಾಖಲಾಗಿವೆ. ಇವರಿಬ್ಬರ ವಿರುದ್ದ ಒಟ್ಟು 6 ಪ್ರಕರಣ ದಾಖಲಾಗಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಂಗ್ ತಿಳಿಸಿದ್ದಾರೆ.


ಕಡಬ ತಾಲೂಕಿನ ಕುದ್ಮಾರಿನಲ್ಲಿ ಶಾಂತಿಮೊಗೇರು ಸೇತುವೆ ಬಳಿ ಈ ಅಕ್ರಮ ಮರಳು ಅಡ್ಡೆ ಕಾರ್ಯಾಚರಿಸುತಿತ್ತು. ಸ್ಥಳೀಯ ನಿವಾಸಿ ಚೆನ್ನಪ್ಪ ಗೌಡ ಎಂಬಾತನ ಜಮೀನು ಪಕ್ಕದಲ್ಲಿದ್ದು ಮರಳು ಸಾಗಾಟಕ್ಕೆ ಅವಕಾಶ ನೀಡುತ್ತಿದ್ದ. ಅಲ್ಲದೇ ಈ ಮರಳು ದಂಧೆಯಲ್ಲೂ ಆತನೇ ಪ್ರಮುಖ ಪಾತ್ರಧಾರಿ ಎನ್ನುವುದು ಸ್ಥಳೀಯರ ಆರೋಪ.
ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜಾಣ ಮೌನ ಮತ್ತು ವಸೂಲಿಬಾಜಿಯಿಂದಾಗಿ ಕಳೆದ ಹಲವು ವರ್ಷಗಳಿಂದ ಇವರ ಮರಳು ದಂಧೆ ರಾಜಾರೋಷವಾಗಿ ನಡೆಯುತಿತ್ತು ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಈಗ ಚುನಾವಣೆ ಕಾರಣಕ್ಕೆ ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು , ಹೊಸತಾಗಿ ಬಂದ ಅಧಿಕಾರಿಗಳು ಮರಳು ಅಡ್ಡೆಯ ಮೇಲೆ ದಾಳಿ ಮಾಡುವ ದೈರ್ಯ ತೋರಿದ್ದಾರೆ.
ಬುಧವಾರ ತಡರಾತ್ರಿ ಮರಳು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಹಲವು ಟಿಪ್ಪರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ದಾಳಿಯ ವೇಳೆ ಮರಳು ಒಯ್ಯಲು 10ಕ್ಕೂ ಹೆಚ್ಚು ಟಿಪ್ಪರ್ ಗಳು ಅಲ್ಲಿ ಬಂದಿದ್ದವು. ಮರಳು ತುಂಬಿಸಿಟ್ಟಿದ್ದ 5 ರಿಂದ 6 ಲಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಮರಳು ಅಡ್ಡೆಗೆ ದಾಳಿಯಾಗುತ್ತಲೇ ತನ್ನನ್ನು ಪೊಲೀಸರು ಬಂಧಿಸಲು ಬರುತ್ತಾರೆಂಬ ಮಾಹಿತಿ ಪಡೆದ ಬಿಜೆಪಿ ಮುಖಂಡ ದಿನೇಶ್ ಮೆದು ತನ್ನ ಮನೆಯ ಮಹಡಿಯಲ್ಲಿ ಅಡಗಿ ಕುಳಿತಿದ್ದರು. ಮನೆಯ ಬಳಿ ಪೊಲೀಸರು ಬರುತ್ತಲೇ ಹೊರಗೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಕೈಗೆ ಏಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಗೊಂಡು ದಿನೇಶ್ ಮೆದು ಆಸ್ಪತ್ರೆ ಸೇರಿರುವುದರಿಂದ ಪೊಲೀಸರು ಆತನನ್ನು ಬಂಧಿಸಿಲ್ಲ ಎಂದು ಹೇಳಲಾಗುತ್ತಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡರೆ ಪೊಲೀಸರು ಬಂಧಿಸುವ ಸಾಧ್ಯತೆಯಿದೆ. ಹೀಗಾಗಿ ಮೆದು ಅವರು ಆಸ್ಪತ್ರೆಯಿಂದಲೇ ನಿರೀಕ್ಷಣಾ ಜಾಮೀನಿಗೆ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನದಿಗೆ ನೇರವಾಗಿ ಜೆಸಿಬಿಯನ್ನೇ ಇಳಿಸಿ ಮರಳು ತೆಗೆಯುತ್ತಿದ್ದುದರಿಂದ ಕುಮಾರಧಾರ ನದಿ ಮತ್ತು ಪರಿಸರದಲ್ಲಿ ನೀರಿನ ಮೂಲಗಳಿಗೆ ತೊಂದರೆ ಉಂಟಾಗಿದೆ. ಇದಲ್ಲದೆ, ಶಾಂತಿಮೊಗರು ಕಿಂಡಿ ಅಣೆಕಟ್ಟಿನ ಮೇಲ್ಬಾಗದಲ್ಲಿ ಹಾಗೂ ಅಣೆಕಟ್ಟಿನ ಕೆಳಭಾಗದಲ್ಲಿ ಮರಳು ಅಡ್ಡೆ ಕಾರ್ಯಾಚರಿಸುತ್ತಿದೆ. ಮೇಲ್ಭಾಗದವರು ಅಣೆಕಟ್ಟಿನಲ್ಲಿ ನೀರು ನಿಂತರೆ ಮರಳು ತೆಗೆಯಲು ಅಡ್ಡಿಯಾಗುತ್ತದೆ ಎಂದು ಆಣೆಕಟ್ಟಿಗೆ ಕನ್ನ ಕೊರೆದು ನೀರು ಸೋರಿ ಹೋಗುವಂತೆ ಮಾಡುತ್ತಿದ್ದಾರೆ. ಕೆಳಗಿನ ಭಾಗದವರು ಮಣ್ಣನ್ನು ಮರಳಿನಿಂದ ಬೇರ್ಪಡಿಸಲು ನೀರಿಗಾಗಿ ಆಣೆಕಟ್ಟಿಗೆ ತೂತು ಕೊರೆಯುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯರು. ಇದರಿಂದ ಅಣೆಕಟ್ಟಿನ ನೀರು ಸಂಪೂರ್ಣವಾಗಿ ಬರಿದಾಗಿದ್ದು ಕೃಷಿಕರು ನೀರಿಲ್ಲದೇ ಪರದಾಡುವಂತಾಗಿದೆ.
Mangalore BJP leader arrested in Kadaba for illegal sand mining, police raid seize machinery. Directed has been identified as Dinesh. He was a close friend of MP Naveen Kumar kateel. Massive raid operation was conducted under the supervision of SP Dakshina Kannada.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm