ಬ್ರೇಕಿಂಗ್ ನ್ಯೂಸ್
14-05-24 09:13 pm Mangalore Correspondent ಕರಾವಳಿ
ಉಳ್ಳಾಲ, ಮೇ.14: ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು, ದೇಲಂತಬೆಟ್ಟು ನಿವಾಸಿ ಶತಾಯುಷಿ ರಾಜೀವಿ ಶೆಟ್ಟಿ(107) ವಯೋಸಹಜ ಕಾಯಿಲೆಯಿಂದ ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತ ರಾಜೀವಿ ಅವರು ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದು ಎಪ್ರಿಲ್ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮನೆಯಲ್ಲೇ ತಮ್ಮ ಮತದಾನದ ಹಕ್ಕನ್ನ ಚಲಾಯಿಸಿದ್ದರು. ಕಳೆದ ವರುಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಿಲಾರಿನ ಮತಗಟ್ಟೆಗೆ ತೆರಳಿ ರಾಜೀವಿ ಮತ ಚಲಾಯಿಸಿದ್ದರು.
1917 ನೇ ಇಸವಿಯ ಜನವರಿ 1 ರಂದು ಜನಿಸಿದ ರಾಜೀವಿ ಅವರು ಯಾವುದೇ ಕಾಯಿಲೆ ಇಲ್ಲದೆ ಮಕ್ಕಳು ,ಮೊಮ್ಮಕ್ಕಳು, ಮರಿ ಮೊಮ್ಮಕ್ಕಳೊಂದಿಗೆ ಸಂತೃಪ್ತಿಯ ಜೀವನ ಕಳೆದಿದ್ದರು. ತಮ್ಮ ಜೀವಿತಾವಧಿಯ ಕೊನೆಯಲ್ಲೂ ರಾಜೀವಿ ಅವರು ಕನ್ನಡಕ ಇಲ್ಲದೆಯೇ ದಿನಪತ್ರಿಕೆ ಓದಿ, ಎಲ್ಲರನ್ನೂ ಗುರುತಿಸುವಷ್ಟು ಲವ ಲವಿಕೆಯಲ್ಲಿದ್ದರು. ಪ್ರತಿ ಬಾರಿಯ ಚುನಾವಣೆಯಲ್ಲೂ ಮತಗಟ್ಟೆಗೆ ತೆರಳಿ ಮತ ಚಲಾಯಿಸುತ್ತಿದ್ದ ರಾಜೀವಿ ಅವರು ಈ ಬಾರಿ ಮಾತ್ರ ಮನೆಯಲ್ಲೇ ಲೋಕಸಭಾ ಚುನಾವಣೆಗೆ ಮತ ಚಲಾಯಿಸಿದ್ದರು.
ರಾಜೀವಿ ಅವರ ಅಗಲಿಕೆಗೆ ಮನೆ ಮಂದಿ, ಕುಟುಂಬಸ್ಥರು, ಊರಿನ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಮೃತರು ನಾಲ್ಕು ಗಂಡು, ಎರಡು ಹೆಣ್ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳನ್ನ ಅಗಲಿದ್ದಾರೆ.
107 year old Rajeev Sheety dies at Ullal in Mangalore. She was not keeping well since some days. She has casted her vote during the assembly elections in karnataka.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm